ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ವಿರೋಧ
Team Udayavani, May 23, 2020, 3:34 PM IST
ಹಗರಿಬೊಮ್ಮನಹಳ್ಳಿ: ಕಾರ್ಮಿಕ ವಿರೋಧಿ ನೀತಿ ಕೈಬಿಡುವಂತೆ ಒತ್ತಾಯಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಹಗರಿಬೊಮ್ಮನಹಳ್ಳಿ: ಕೋವಿಡ್ ವೈರಸ್ ಪರಿಣಾಮ ಲಾಕ್ಡೌನ್ನಿಂದಾಗಿ ಸಂತ್ರಸ್ತರಾದ ಅಸಂಘಟಿತ ಕಾರ್ಮಿಕರಿಗೆ ಮಾಸಿಕ 10ಸಾವಿರ ರೂ.ಸಹಾಯಧನ ಮತ್ತು ಆಹಾರ ಸಾಮಾಗ್ರಿ ವಿತರಿಸಬೇಕು ಎಂದು ಗ್ರಾಕೂಸ್ ಸಂಘಟನೆಯ ಸಂಚಾಲಕಿ ಎಂ.ಬಿ.ಕೊಟ್ರಮ್ಮ ಆಗ್ರಹಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಪದಾಧಿಕಾರಿಗಳು ಕಾರ್ಮಿಕ ಕಾಯ್ದೆಗಳ ಅಮಾನತು ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ವಲಸೆ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು. ರಾಜ್ಯದಲ್ಲಿ ಕಾರ್ಮಿಕ ಕಾನೂನು ಸುಗ್ರಿವಾಜ್ಞೆ ತಡೆಯೊಡ್ಡಬೇಕು. ಹಮಾಲಿ ಕಾರ್ಮಿಕರಿಗೆ ಮಾರಕವಾದ ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಬೇಕು ಎಂದು ಒತ್ತಾಯಿಸಿದರು. ತಹಶೀಲ್ದಾರ್ ಆಶಪ್ಪ ಪೂಜಾರ್ಗೆ ಮನವಿ ಸಲ್ಲಿಸಿದರು. ಸಂಘಟನೆ ಮುಖಂಡರಾದ ಅಕ್ಕಮಹಾದೇವಿ, ಹನುಮಂತಪ್ಪ, ಆನಂದಗೌಡ, ತ್ರಿವೇಣಿ, ಕೊಟ್ರೇಶ, ಗೋಣಿಬಸಪ್ಪ, ಯಮುನಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ