ಹಂಪಿ ಉತ್ಸವ : 4-5 ವೇದಿಕೆ ನಿರ್ಮಾಣ
Team Udayavani, Feb 9, 2019, 6:42 AM IST
ಹೊಸಪೇಟೆ: ಮಾ.2 ಮತ್ತು 3ರಂದು ನಡೆಯಲಿರುವ ಹಂಪಿ ಉತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಡಾ| ರಾಮ್ಪ್ರಸಾತ್ ಮನೋಹರ್ ಹಂಪಿಗೆ ಭೇಟಿ ನೀಡಿ ವೇದಿಕೆ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿÇ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಮಾ.2, 3 ರಂದು ಹಂಪಿ ಉತ್ಸವ ನಡೆಸುತ್ತಿದ್ದು, ವೇದಿಕೆಗಳ ಸಿದ್ಧತೆ ಕುರಿತು ಸ್ಥಳ ಪರಿಶೀಲನೆ ನಡೆಸಲಾಗಿದೆ. ಒಟ್ಟು 4 ರಿಂದ 5 ವೇದಿಕೆಗಳನ್ನು ನಿರ್ಮಿಸಲಾಗುವುದು. ಇರುವ ಅನುದಾನದಲ್ಲಿಯೇ ಅಚ್ಚುಕಟ್ಟಾಗಿ ಉತ್ಸವ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಹಂಪಿಯ ಎದುರು ಬಸವಣ್ಣ, ಸಾಸಿವೆಕಾಳು ಗಣಪತಿ, ಕಡಲೆಕಾಯಿ ಗಣಪತಿ ಸೇರಿದಂತೆ ಇನ್ನಿತರೆ ಸ್ಥಳ ಪರಿಶೀಲನೆ ನಡೆಸಿದ್ದು ವೇದಿಕೆಗಳನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಬರ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ.ಇರುವ ಬಜೆಟ್ ಅಲ್ಲಿಯೇ ನಡೆಸಲಾಗುತ್ತಿದೆ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸಾರ್ವಜನಿಕರಿಗೆ ಹೊಸಪೇಟೆ, ಕಂಪ್ಲಿ ಸೇರಿಸುವಂತೆ ಇತರೆ ಕಡೆಗಳಿಂದ ಉತ್ಸವಕ್ಕೆ ಆಗಮಿಸುವ ಸಲುವಾಗಿ ಉಚಿತ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಕುಡಿವ ನೀರು, ಪುಸ್ತಕ ಮಳಿಗೆ, ಆಹಾರ ಮೇಳ ನಡೆಯಲಿದೆ ಎಂದು ತಿಳಿಸಿದರು.
ಸಮಯದ ಕೊರತೆ ಹಿನ್ನೆಲೆಯಲ್ಲಿ ಧ್ವನಿ ಬೆಳಕು ಕಾರ್ಯಕ್ರಮ ಇರುವುದಿಲ್ಲ. ಎರಡು ಮಾತ್ರ ಉತ್ಸವ ನಡೆಸುತ್ತಿರುವುದರಿಂದ ಹಂಪಿ ಬೈಸ್ಕೈ ಇರುವುದಿಲ್ಲ ಎಂದರು.
ಚುನಾವಣೆ ಘೋಷಣೆಯಾದರೂ ಆಯೋಗದಿಂದ ಅನುಮತಿ ಪಡೆದು ಉತ್ಸವ ಆಚರಿಸಲಾಗುವುದು. ಈಗ 3 ಕೋಟಿ ಅನುದಾನವಿದೆ. ಹಂಪಿ ಉತ್ಸವಕ್ಕೆ ಒತ್ತಾಯ ಮಾಡಿದವರು. ಸಹ ಅನುದಾನಕ್ಕೆ ದೇಣಿಗೆ ನೀಡಲು ಕೋರುವೆ ಎಂದು ತಿಳಿಸಿದರು. ಎಸಿ ಲೋಕೇಶ್, ಹೆಚ್ಚುವರಿ ಎಸ್ಪಿ ಲಾವಣ್ಯ, ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿ ಕಾಳಿಮುತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದೇರ್ಶಕ ನಾಗರಾಜ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…