ಹಂಪಿ ಉತ್ಸವ: ಹೆಸರು ಬದಲಾವಣೆಗೆ ಮನವಿ
Team Udayavani, Dec 21, 2019, 2:32 PM IST
ಹೊಸಪೇಟೆ: ಹಂಪಿ ಉತ್ಸವದ ಹೆಸರನ್ನು ಬದಲಾಯಿಸಿ ವಿಜಯನಗರ ಹಂಪಿ ಉತ್ಸವವೆಂದು ಮರು ನಾಮಕರಣ ಮಾಡಬೇಕು ಎಂದು ಆಗ್ರಹಿಸಿ ನಗರದ ವಿಜಯನಗರ ಯುವಕರ ಬಳಗದ ಪದಾಧಿಕಾರಿಗಳು, ಸಹಾಯಕ ಆಯುಕ್ತ ಶೇಖ್ ತನ್ವೀರ್ ಆಸೀಪ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದ್ದಾರೆ.
ವಿಜಯನಗರ ಸಂಸ್ಥಾಪಕರಾದ ಹಕ್ಕಬುಕ್ಕರ ಹೆಸರನ್ನು ಮುಖ್ಯವೇದಿಕೆಗೆ ಇಡಬೇಕು. ಗಂಡುಗಲಿ ಕುಮಾರರಾಮ ಯುವ ವೇದಿಕೆಯನ್ನು ಸ್ಥಾಪಿಸಬೇಕು. ಹಂಪಿ ಉತ್ಸವವನ್ನು ಮೂರು ದಿನಗಳ ಕಾಲ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು. ಸ್ಥಳೀಯ ಗ್ರಾಮೀಣ ಕ್ರೀಡೆಗಳಾದ ಬಂಡಿ ಸ್ಪರ್ಧೆ, ಎತ್ತಿನ ಬಂಡಿ ಮೆರವಣೆಗೆ, ಕುಸ್ತಿ, ಗುಂಡು ಕಲ್ಲು ಎತ್ತುವ ಸ್ಪರ್ಧೆ, ಬಂಡಿ ಗಾಲಿ ಜೋಡಿಸುವ ಸ್ಪರ್ಧೆ, ಮೂಟೆ ಎತ್ತುವ ಸ್ಪರ್ಧೆ, ಮಹಿಳೆ ಮತ್ತು ಮಕ್ಕಳಿಗೊಸ್ಕರ ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗುವ ಸ್ಪರ್ಧೆ, ಯುವಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಹಂಪಿ ಉತ್ಸವದಲ್ಲಿ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಯಾವುದೇ ಕಾರಣದಿಂದ ಕೈ ಬಿಡಬಾರದು. ಈ ಕಾರ್ಯಕ್ರಮವನ್ನು ವಿಜಯನಗರ ಸಾಮ್ರಾಜ್ಯದ ವೈಭವದ ಇತಿಹಾಸಕ್ಕೆ ಮೀಸಲಿಡಬೇಕು. ಧ್ವನಿ ಮತ್ತು ಬೆಳಕು ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಅಂಬಣ್ಣ ವಾಲ್ಮೀಕಿ, ಜಿ. ಯಲ್ಲಪ್ಪ, ಡಿ. ಪಂಪಾಪತಿ, ಮುತ್ತಣ್ಣ ಇನ್ನಿತರರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್