ಭಿಕ್ಷೆ ಬೇಡಿ ಹಂಪಿ ಉತ್ಸವ ಆಚರಣೆ:ಮಳೆಯೋಗೀಶ್ವರ ಶಿವಾಚಾರ್ಯ ಶ್ರೀ
Team Udayavani, Dec 2, 2018, 6:05 AM IST
ಹೂವಿನಹಡಗಲಿ: ಬರದ ನೆಪವೊಡ್ಡಿ ವಿಶ್ವವಿಖ್ಯಾತ ಹಂಪಿ ಉತ್ಸವ ರದ್ದುಗೊಳಿಸಿರುವ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಹಣದ ಕೊರತೆ ಕಾಡುತ್ತಿದ್ದರೆ ಭಿಕ್ಷೆ ಬೇಡಿ ಹಣ ಒಗ್ಗೂಡಿಸಿ ನೀಡಲಾಗುವುದು ಎಂದು ಮಾನಿಹಳ್ಳಿ ಪುರವರ್ಗ ಮಠದ ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹಂಪಿ ಉತ್ಸವಕ್ಕಾಗಿ ತಾಲೂಕಿನ ಮಾಗಳ ಗ್ರಾಮದ ಪ್ರಮುಖ ರಸ್ತೆಯಲ್ಲಿ ಶನಿವಾರ ಸಂಚರಿಸಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವವನ್ನು ರದ್ದುಗೊಳಿಸಿರುವ ಮೈತ್ರಿ ಸರ್ಕಾರದ ಕ್ರಮ ಒಪ್ಪುವಂತಹದ್ದಲ್ಲ. ಸರಳ ರೀತಿಯಲ್ಲಾದರೂ ಆಚರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಹಂಪಿ ಉತ್ಸವ ದೇಶವಷ್ಟೇ ಅಲ್ಲ, ವಿದೇಶಗಳಲ್ಲೂ ಪ್ರಖ್ಯಾತಿ ಪಡೆದಿದೆ. ಬರಗಾಲವಿದೆ ಎಂದು ಹಂಪಿ ಉತ್ಸವ ರದ್ದು ಮಾಡಿರುವ ಸರ್ಕಾರದ ಕ್ರಮ ಸಲ್ಲದು. ಯಾವುದೇ ಕಾರಣಕ್ಕೂ ಉತ್ಸವ ನಿಲ್ಲಿಸಕೂಡದು. ಉತ್ಸವ ಆಚರಣೆಗೆ ಸರ್ಕಾರಕ್ಕೆ ಹಣಕಾಸಿನ ತೊಂದರೆಯಾದರೆ ಭಿಕ್ಷೆ ಬೇಡಿ ಬಂದ ಹಣದಲ್ಲಿ ಉತ್ಸವ ಆಚರಿಸಲಾಗುವುದು. ನನ್ನ ಜೋಳಿಗೆ ದೊಡ್ಡದಿದೆ, ಉತ್ಸವ ನಡೆಸಿ ಎಂದು ಒತ್ತಾಯಿಸಿದರು.
ನಮ್ಮ ಈ ಹೋರಾಟ ಸಾಂಕೇತಿಕವಾಗಿ ನಡೆದಿದೆ. ಸರ್ಕಾರ ನಿರ್ಲಕ್ಷé ವಹಿಸಿದರೆ ಎಲ್ಲ ಸ್ವಾಮೀಜಿಗಳು ಸೇರಿ ಜೋಳಿಗೆಯಿಂದ ಹಣ ನೀಡುತ್ತೇವೆ. ಚಳವಳಿ ತೀವ್ರ ಸ್ವರೂಪ ಪಡೆಯಲಿದೆ ಎಂದರು. ನಂತರ ಜೋಳಿಗೆಯಲ್ಲಿ ಬಂದ 1,708 ರೂ.ಗಳನ್ನು ಮಾಗಳ ಗ್ರಾಮದ ಅಂಚೆ ಕಚೇರಿ ಮೂಲಕ ಜಿಲ್ಲಾಧಿ ಕಾರಿ ಖಾತೆಗೆ ವರ್ಗಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ