ಜನವರಿ ಅಂತ್ಯಕ್ಕೆ ಹಂಪಿ ಉತ್ಸವ: ಜೊಲ್ಲೆ

ವಿಜಯನಗರ ಗತವೈಭವವನ್ನು ಮರುಸೃಷ್ಟಿಸುವ ರೀತಿಯಲ್ಲಿ ಉತ್ಸವ ಆಯೋಜಿಸಬೇಕು.

Team Udayavani, Dec 6, 2022, 6:43 PM IST

ಜನವರಿ ಅಂತ್ಯಕ್ಕೆ ಹಂಪಿ ಉತ್ಸವ: ಜೊಲ್ಲೆ

ಹೊಸಪೇಟೆ: ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಅದ್ಧೂರಿ ಹಂಪಿ ಉತ್ಸವ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಹಂಪಿ ಉತ್ಸವ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದ ಅವರು, ಈ ಮೊದಲು 2023ರ ಜನವರಿ ತಿಂಗಳ 7 ಮತ್ತು 8ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು.

ಆದರೆ ಅದೇ ಸಮಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಕಾರ್ಯಕ್ರಮವನ್ನು ಜನವರಿ ತಿಂಗಳಾಂತ್ಯಕ್ಕೆ ಮುಂದೂಡಲು ತೀರ್ಮಾನಿಸಲಾಗಿದೆ. ಜ.27, 28 ಮತ್ತು 29ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ಆದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದರು.

ಅದ್ಧೂರಿ ಆಚರಣೆ: ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಂಪಿ ಉತ್ಸವ ನಡೆದಿಲ್ಲ. ಈ ಬಾರಿ ಕಳೆದ ಎಲ್ಲ ಹಂಪಿ ಉತ್ಸವಗಳಿಗಿಂತಲೂ ಅದ್ಧೂರಿಯಾಗಿ ಆಚರಿಸಲಾಗುವುದು. ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸಾರುವಂಥ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜನವರಿ ತಿಂಗಳಾಂತ್ಯಕ್ಕೆ ಯಾವುದೇ ಹಂಪಿ ಉತ್ಸವ ನಡೆಯಲೇಬೇಕು.

ವಿಜಯನಗರ ಗತವೈಭವವನ್ನು ಮರುಸೃಷ್ಟಿಸುವ ರೀತಿಯಲ್ಲಿ ಉತ್ಸವ ಆಯೋಜಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಅನುದಾನ: ಈಗಾಗಲೇ 2021-22ನೇ ಸಾಲಿನ ಹಂಪಿ ಉತ್ಸವ ಆಚರಣೆಯ ಸಲುವಾಗಿ ಕನ್ನಡ ಸಂಸ್ಕೃತಿ ಇಲಾಖೆಯಿಂದ 4.10 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿರುತ್ತದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದೆ. 6 ಕೋಟಿ ರೂಪಾಯಿಗಳ ಅನುದಾನ ನೀಡುವಂತೆ ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯಲಾಗಿದೆ. ಅಗತ್ಯ ಅನುದಾನವನ್ನು ನೀಡುವಂತೆ ಈಗಾಗಲೇ ಸರಕಾರದ ವಿವಿಧ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದಲ್ಲದೆ ಖಾಸಗಿ ಕಂಪನಿಗಳ ಸಿಎಸ್‌ಆರ್‌ ನಿಧಿಯನ್ನು ನೀಡುವಂತೆ ಕೋರಲಾಗುವುದು ಎಂದರು.

2 ಮುಖ್ಯ ವೇದಿಕೆ: ಈ ಬಾರಿ 2 ಭವ್ಯ ಮುಖ್ಯ ವೇದಿಕೆಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು, ಕಲಾವಿದರುಗಳ ಲಭ್ಯತೆ ಹಾಗೂ ಕಾರ್ಯಕ್ರಮಗಳ ಸೇರ್ಪಡೆ ಮೇಲೆ ಇನ್ನೂ 2 ಉಪ ವೇದಿಕೆಗಳನ್ನು ಸೇರ್ಪಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮುಂದಿನ ವರ್ಷ ನವೆಂಬರ್‌ನಲ್ಲಿ ಹಂಪಿ ಉತ್ಸವ ಹೊಸಪೇಟೆ: ಪ್ರತಿವರ್ಷ ಹಂಪಿ ಉತ್ಸವವನ್ನು ನ. 3, 4 ಮತ್ತು 5 ರಂದು ನಡೆಸಲು ಉದ್ದೇಶಿಸಿದ್ದು
ಈ ಬಾರಿ ಉತ್ಸವದಲ್ಲಿ ದಿನಾಂಕ ಘೋಷಣೆ ಮಾಡಲು ಚಿಂತನೆ ನಡೆದಿದೆ ಎಂದು ಹಜ್‌ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂಪಿ ಉತ್ಸವವನ್ನು ನಿಗದಿತ ದಿನಾಂಕದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿ ಹಾಗೂ ಇತರೆ ಅ ಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ವರ್ಷ ಹಂಪಿ ಉತ್ಸವ ನ. 3, 4, 5ರಂದು ನಡೆಸಲು ಚಿಂತನೆ ನಡೆಸಲಾಗಿದೆ. ಈ ಮೊದಲು 2023ರ ಜ.7, 8ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಜ.27, 28 ಮತ್ತು 29ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ.

ಮುಖ್ಯಮಂತ್ರಿಗಳ ಜತೆ ಚರ್ಚಿಸಿ ದಿನಾಂಕ ಅಂತಿಮಗೊಳಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಸಂಸದ ವೈ. ದೇವೇಂದ್ರಪ್ಪ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಹುಡಾ ಅಧ್ಯಕ್ಷ ಅಶೋಕ್‌ ಜೀರೆ, ವಿಜಯನಗರ ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಅನೇಕರಿದ್ದರು.

ವಿಜಯನಗರದ ಭವ್ಯತೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಂಪಿ ಉತ್ಸವ ಬಹಳ ಮಹತ್ವದ್ದು. ನೂತನ ಜಿಲ್ಲೆಯಾದ ನಂತರದ ಮೊದಲ ಉತ್ಸವವನ್ನು ಅದ್ಧೂರಿಯಾಗಿ ಆಚರಿಸುವುದು ನಮ್ಮ ಉದ್ದೇಶವಾಗಿದೆ. ಈ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜನವರಿ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳ ದಿನಾಂಕವನ್ನು ತೆಗೆದುಕೊಂಡು ದಿನಾಂಕವನ್ನು ಅಂತಿಮಗೊಳಿಸಲಾಗುವುದು. ಜಿಲ್ಲಾಧಿಕಾರಿ
ವೆಂಕಟೇಶ್‌ ಟಿ, ಪೊಲೀಷ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು, ಸಂಸದ ದೇವೇಂದ್ರಪ್ಪ ಹಾಗೂ ನಗರಸಭೆ ಅಧ್ಯಕ್ಷ ಸುಂಕಮ್ಮ ಇನ್ನಿತರರಿದ್ದರು.

ಟಾಪ್ ನ್ಯೂಸ್

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganesh kuru

ಎಲ್ಲೇ ಸ್ಪರ್ಧೆ ಮಾಡಿದರೂ ಸಿದ್ದರಾಮಯ್ಯ ಗೆಲ್ಲುತ್ತಾರೆ : ಶಾಸಕ ಜೆ.ಎನ್.ಗಣೇಶ್

1-sfsdf

ಸಿದ್ದರಾಮಯ್ಯ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಲಿ: ಮಾಜಿ ಸಚಿವ ದಿವಾಕರ ಬಾಬು

mullu

ವಲ್ಲಭಾಪೂರ ಆಂಜನೇಯಸ್ವಾಮಿಗೆ ಯುಗಾದಿ ಹಬ್ಬದ ಮುಳ್ಳು ಕಂಟಿ ಸೇವೆಯ ಪರಾಕಾಷ್ಟೆ ವೈಭವ

Shriramulu

ನಾನು, ಸಿದ್ದರಾಮಯ್ಯ ಅನಿವಾರ್ಯವಾಗಿ ಕ್ಷೇತ್ರ ಬಿಡಬೇಕಾಯಿತು: ಸಚಿವ ಶ್ರೀರಾಮುಲು

r ashok 1

ಹಸಿದು ಒದ್ದಾಡುತ್ತಿರುವ ಕಾಂಗ್ರೆಸ್‌ಗೆ ಅಧಿಕಾರ ನೀಡಬೇಡಿ : ತೇಜಸ್ವಿ ಸೂರ್ಯ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.