ವೀಕೆಂಡ್ ಹಿನ್ನೆಲೆ: ಹಂಪಿ-ಡ್ಯಾಂ ಕಡೆ ಮುಖ ಮಾಡಿದ ಪ್ರವಾಸಿಗರು
Team Udayavani, Jul 17, 2022, 5:21 PM IST
ಹೊಸಪೇಟೆ: ವೀಕೆಂಡ್ ಹಿನ್ನೆಲೆಯಲ್ಲಿ ಸಹಸ್ರಾರು ಸಂಖ್ಯೆಯ ಪ್ರವಾಸಿಗರು ವಿಶ್ವವಿಖ್ಯಾತ ಹಂಪಿಗೆ ಭಾನುವಾರ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ಕಣ್ತುಂಬಿಕೊಂಡರು.
ನದಿಯಲ್ಲಿ ಮುಂದುವರೆದ ಪ್ರವಾಹ ಸ್ಥಿತಿಯ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಹಂಪಿಗೆ ಆಗಮಿಸಿದ ದೇಶ-ವಿದೇಶಿ ಪ್ರವಾಸಿಗರು ವಿವಿಧ ಸ್ಮಾರಕಗಳನ್ನು ವೀಕ್ಷಿಸಿದರು.
ವಿರೂಪಾಕ್ಷೇಶ್ವರ ದೇಗುಲ, ಹೇಮಕೂಟ, ಸಾಸವೆಕಾಳು ಗಣಪತಿ, ಕಡಲೆಕಾಳು ಗಣಪತಿ, ಕೃಷ್ಣ ದೇವಾಲಯ, ಉಗ್ರನರಸಿಂಹ, ಬಡವಿಲಿಂಗ, ಉದ್ದಾನ ವೀರಭದ್ರ, ಭೂಮಿಮಟ್ಟದ ದೇವಾಲಯ, ಹಜಾರರಾಮ ದೇಗುಲ, ರಾಣಿಸ್ನಾನ ಗೃಹ, ಮಹಾನವಮಿ ದಿಬ್ಬ, ಕಮಲ ಮಹಲ್, ಗಜಶಾಲೆ ಹಾಗೂ ವಿಜಯವಿಠಲ ದೇವಾಲಯದ ಆವರಣದಲ್ಲಿ ಪ್ರವಾಸಿಗರು ಕಂಡು ಬಂದರು.
ನದಿಯ ಪ್ರವಾಹದ ಹಿನ್ನೆಲೆಯಲ್ಲಿ ಸ್ನಾನಘಟ್ಟ, ಪುರಂದರ ದಾಸರ ಮಂಟಪ ಪ್ರದೇಶದಲ್ಲಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರು ನದಿ ತೀರದ ಹತ್ತಿರ ಸುಳಿದಾಡುತ್ತಿಲ್ಲ. ದೂರದಿಂದಲೇ ಉಕ್ಕಿ ಹರಿಯುವ ನದಿಯನ್ನು ವೀಕ್ಷಿಸಿದರು.
ಟಿ.ಬಿ.ಡ್ಯಾಂಗೂ ಭೇಟಿ:
ಹಂಪಿಗೆ ಭೇಟಿ ನೀಡಿರುವ ಪ್ರವಾಸಿಗರು ಟಿ.ಬಿ.ಡ್ಯಾಂ ಕಡೆ ಮುಖ ಮಾಡುತ್ತಿದ್ದಾರೆ. ಜಲಾಶಯದ ಕೆಳಭಾಗದ ಉದ್ಯಾನವನದ ಸಂಗೀತ ಕಾರಂಜಿ, ಗುಂಡಾ ಹಿನ್ನೀರಿನ ಪ್ರದೇಶದಲ್ಲಿರುವ ಉದ್ಯಾನವನ, ಮುನಿರಾಬಾದ್ ಭಾಗದಲ್ಲಿರುವ ಪಂಪಾವನ ಮತ್ತು ಲೇಕ್ವ್ಯೂವ್ ಪ್ರದೇಶದಲ್ಲಿ ಪ್ರವಾಸಿಗರು ಸಾಗರೋಪಾದಿಯಲ್ಲಿ ಕಂಡು ಬಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ