ಹಂಪಿ ವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ
Team Udayavani, Dec 23, 2018, 11:52 AM IST
ಹೊಸಪೇಟೆ: ಫಲಪೂಜಾ ಮಹೋತ್ಸವ ನಿಮಿತ್ತ ವಿಶ್ವಪ್ರಸಿದ್ಧ ಐತಿಹಾಸಿಕ ಹಂಪಿಯ ವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ ಶನಿವಾರ ರಾತ್ರಿ ಸಂಭ್ರಮದಿಂದ ನಡೆಯಿತು.
ವಿದ್ಯಾರಣ್ಯ ಭಾರತಿ ಸ್ವಾಮೀಜಿಗಳ ಸಮ್ಮುಖದಲ್ಲಿ ವಿಳಂಬಿನಾಮ ಸಂವತ್ಸರ ಮಾರ್ಗಶಿರ ಶುದ್ಧ (ಹುಣ್ಣಿಮೆ)ರಾತ್ರಿ 8-30 ಗಂಟೆಗೆ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಮನ್ಮುಖ ತೀರ್ಥದಲ್ಲಿ (ಪುಷ್ಪ ಹಾಗೂ ವಿದ್ಯುತ್ ಅಲಂಕೃತ ತೆಪ್ಪದಲ್ಲಿ ವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ ಮಹೋತ್ಸವ ಅತ್ಯಂತ ಶ್ರದ್ಧಾ-ಭಕ್ತಿ ನೆರವೇರಿತು.
ಫಲಪೂಜಾ ಮಹೋತ್ಸವದ ನಿಮಿತ್ತ ಆಯೋಜಿಸಿದ್ದ ತೆಪ್ಪೋತ್ಸವ ಮಹೋತ್ಸವದಲ್ಲಿ ನೂರಾರು ಭಕ್ತರು ಭಾಗವಹಿಸಿ ಜಯಘೋಷಣೆ ಕೂಗಿದರು. ಫಲಪೂಜಾ ಮಹೋತ್ಸವ ನಿಮಿತ್ತ ಹಂಪಿಯ ಕಡೆ ಮುಖ ಮಾಡಿದ್ದು, ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡಿ ವಿರೂಪಾಕ್ಷೇಶ್ವರ ಹಾಗೂ ಪಂಪಾಂಬಿಕೆ ದೇವಿ ದರ್ಶನ ಪಡೆಯುತ್ತಿದ್ದಾರೆ. ಹುಬ್ಬಳ್ಳಿ, ಬೆಂಗಳೂರು, ಮೈಸೂರು, ಧಾರವಾಡ, ಗದಗ, ಆಂಧ್ರದ ಕರ್ನೂಲ್, ಅನಂತಪುರ ಸೇರಿದಂತೆ ನಾನಾ ಪ್ರದೇಶಗಳಿಂದ ಆಗಮಿಸಿದ ಭಕ್ತರು, ತೆಪ್ಪೋತ್ಸವ ಕಣ್ತುಂಬಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ