ಸಾಲದ ಕೂಪಕ್ಕೆ ತಳ್ಳಿದ್ದೇ ಕೈ ಸಾಧನೆ


Team Udayavani, May 4, 2018, 11:51 AM IST

bell-1.jpg

ಬಳ್ಳಾರಿ: ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿದ “ಸಿದ್ದರುಪಯ್ನಾ’ ಸರಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿದೆ. ರಾಜ್ಯದ ಪ್ರಜೆಗಳೆಲ್ಲ ಸಾಲಗಾರರಾಗಿದ್ದಾರೆ. ಇದೇ ಕಾಂಗ್ರೆಸ್‌ ಸರಕರದ ಸಾಧನೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬಿಜೆಪಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿರೋದು ಭ್ರಷ್ಟಾಚಾರ ಮುಕ್ತ ಸರಕಾರ ಎನ್ನುತ್ತಾರೆ. ಆದರೆ ಇವರ ಸಂಪುಟದಲ್ಲಿರುವ ಸಚಿವರ ಮನೆಯಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾಗುತ್ತಿದೆ. ಸರಕಾರದಲ್ಲಿರುವ ಅನೇಕ ಸಚಿವರು ಕೋಟ್ಯಂತರ ರೂ. ಲೂಟಿ ಹೊಡೆದಿದ್ದಾರೆ. ಭ್ರಷ್ಟ ರಹಿತ ಎನ್ನುವ ಕಾಂಗ್ರೆಸ್ಸಿನವರು ಈ ಹಣ ಎಲ್ಲಿಂದ ಬಂತು ಎಂಬುದಕ್ಕೆ ಜನರಿಗೆ ಲೆಕ್ಕ ಕೊಡಲಿ ಎಂದು ಸವಾಲು ಹಾಕಿದರು.

ಐತಿಹಾಸಿಕ ಹಿನ್ನೆಲೆಯುಳ್ಳ ಬಳ್ಳಾರಿ ಜಿಲ್ಲೆ ಸಾಕಷ್ಟು ನೈಸರ್ಗಿಕ ಸಂಪನ್ಮೂಲ ಹೊಂದಿದೆ. ಆದರೆ ಈ ಸಂಪನ್ಮೂಲವನ್ನೂ ರಾಜ್ಯ ಸರಕಾರ ಸರಿಯಾಗಿ ಬಳಸಿಕೊಂಡಿಲ್ಲ. ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಬಳ್ಳಾರಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಿ ಹಿಂದುಳಿದ ಪ್ರದೇಶದ ಸಾಲಿನಲ್ಲಿ ಸೇರಿಸಿದೆ ಎಂದು ಪ್ರಧಾನಿ ಆರೋಪಿಸಿದರು.

ವಿಶ್ವದ ಗಮನ ಸೆಳೆದ ಇತಿಹಾಸ ಪ್ರಸಿದ್ಧ ಹಂಪಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬಹುದಿತ್ತು. ಆದರೆ ಸರಕಾರ ಆ ಕೆಲಸ ಮಾಡಿಲ್ಲ. ಆದರೆ ಕೇಂದ್ರ ಸರಕಾರ ಹಂಪಿಯ ಕಲ್ಲಿನ ರಥವನ್ನು 50 ರೂ. ನೋಟಿನಲ್ಲಿ ಮುದ್ರಿಸಲು ಕ್ರಮ ಕೈಗೊಳ್ಳುವ ಮೂಲಕ ವಿಜಯನಗರ ಸಾಮ್ರಾಜ್ಯದ ಇತಿಹಾಸವನ್ನು ವಿಶ್ವಕ್ಕೆ ಪರಿಚಯಿಸುವ ಕಾರ್ಯ ಮಾಡಿದೆ ಎಂದರು. 

ಮೇ.12 ರಂದು ನಡೆಯಲಿರುವ ಚುನಾವಣೆಯಲ್ಲಿ ಕಮಲದ ಚಿಹ್ನೆಗೆ ಮತ ಚಲಾಯಿಸುವ ಮೂಲಕ ಪೈಸೆ, ಪೈಸೆ ಲೆಕ್ಕವನ್ನು ಚುಕ್ತಾ ಮಾಡಬೇಕಾಗಿದೆ ಎಂದು ಲೇವಡಿ ಮಾಡಿದರು. ಜಿಲ್ಲೆಯಲ್ಲಿ ತುಂಗಭದ್ರಾ ನದಿ, ಜಲಾಶಯವಿದೆ. ಅತ್ಯಂತ ಹೇರಳವಾಗಿ ನೈಸರ್ಗಿಕ ಸಂಪನ್ಮೂಲವಿದೆ. ಆದರೆ, ಕಾಂಗ್ರೆಸ್‌ ಕೇವಲ ರಾಜಕಾರಣ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಪರ ಚಿಂತನೆ ನಡೆಸಿಲ್ಲ. ಕಳೆದ ಐದು ವರ್ಷದ ಅವಧಿಯಲ್ಲಿ ಒಂದೇ ಒಂದು ಮೈನಿಂಗ್‌ ಪಾಲಿಸಿ ಜಾರಿಗೆ ತರದೆ ಸಮಯವನ್ನೆಲ್ಲ ಹಾಳು ಮಾಡಿದೆ ಎಂದು ಆರೋಪಿಸಿದರು.

ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸೋನಿಯಾಗಾಂಧಿ ಸ್ಪರ್ಧಿಸಿದ್ದಾಗ ಕ್ಷೇತ್ರಕ್ಕೆ 3 ಸಾವಿರ ಕೋಟಿ ರೂ. ಪ್ಯಾಕೇಜ್‌ ನೀಡಿದ್ದರು. ಆದರೆ ಗೆಲುವು ಸಾಧಿಸಿದ ನಂತರ ರಾಜೀನಾಮೆ ನೀಡಿ ಕ್ಷೇತ್ರ ಬಿಟ್ಟರು. ಅವರ ಹಿಂದೆಯೇ ಪ್ಯಾಕೇಜ್‌ ಸಹ ಹೋಯಿತು. ಇದು ಕಾಂಗ್ರೆಸ್ಸಿನ ಮನೋಧರ್ಮ. ಮತದಾರರು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಇಲ್ಲಿರುವ ತುಂಗಭದ್ರಾ ನದಿ, ಜಲಾಶಯದ ಲಾಭ ಪಡೆಯುವಲ್ಲೂ ಸರ್ಕಾರ ವಿಫಲವಾಗಿದೆ. ಅದರಲ್ಲಿ ಸಂಗ್ರಹವಾಗಿರುವ ಹೂಳು ತೆಗೆಯಲು ಕೂಡ ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಎರಡು ವರ್ಷಗಳ ಬಳಿಕ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತು. ಅಲ್ಲಿ ಕೆರೆ, ಚೆಕ್‌ಡ್ಯಾಮ್‌, ಜಲಾಶಯಗಳಲ್ಲಿ ಸಂಗ್ರಹವಾಗಿದ್ದ ಹೂಳನ್ನು ತೆಗೆದು, ಕುಡಿಯಲು, ಹಾಗೂ ಕೃಷಿಕಾರ್ಯಕ್ಕಾಗಿ ಸಮರ್ಪಕವಾಗಿ ನೀರು ಒದಗಿಸಲಾಗುತ್ತಿದೆ. ಇದಕ್ಕಾಗಿ ಅಲ್ಲಿನ ಸರ್ಕಾರ 6 ಸಾವಿರ ಕೋಟಿ ರೂ. ಖರ್ಚು ಮಾಡಿದೆ. ಇದಕ್ಕಾಗಿ ಅಲ್ಲಿ ಜನಾಂದೋಲನವೇ ನಡೆದಿತ್ತು. ಸರಕಾರಕ್ಕೆ ಜನ ಸಹಕಾರ ನೀಡಿದ್ದರು. ಇದೀಗ ಅಲ್ಲಿನ ಜನ ಅದರ ಲಾಭ ಪಡೆಯುತ್ತಿದ್ದಾರೆ. ಇದನ್ನು ನೋಡಿಯಾದ್ರೂ, ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜಲಾಶಯದಲ್ಲಿನ ಹೂಳು ತೆಗೆಯಲು ಮುಂದಾಗಬೇಕಿತ್ತು ಎಂದರು.

ಕಾರ್ಯಕ್ರಮದಲ್ಲಿ ಸಂಸದ ಬಿ.ಶ್ರೀರಾಮುಲು, ಬಳ್ಳಾರಿ ಜಿಲ್ಲೆ 8 ಕ್ಷೇತ್ರಗಳ ಅಭ್ಯರ್ಥಿಗಳಾದ ಜಿ.ಸೋಮಶೇಖರರೆಡ್ಡಿ, ಸಣ್ಣ ಫಕ್ಕೀರಪ್ಪ, ಟಿ.ಎಚ್‌. ಸುರೇಶ್‌ಬಾಬು, ಡಿ.ರಾಘವೇಂದ್ರ, ಎಂ.ಎಸ್‌. ಸೋಮಲಿಂಗಪ್ಪ, ಎಚ್‌.ಆರ್‌. ಗವಿಯಪ್ಪ, ನೇಮಿರಾಜ್‌ ನಾಯ್ಕ, ಎನ್‌.ವೈ. ಗೋಪಾಲಕೃಷ್ಣ, ಜಿಲ್ಲಾಧ್ಯಕ್ಷ ಚನ್ನಬಸವನಗೌಡ, ಮೃತ್ಯುಂಜಯ ಜಿನಗಾ ಸೇರಿದಂತೆ ಇನ್ನಿತರರಿದ್ದರು. 

ಮೋದಿ ನಾಮ ಸ್ಮರಿಸಿದ ಕಾರ್ಯಕರ್ತರು
ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಭಾಷಣ ಮಾಡುತ್ತಿದ್ದಂತೆ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಮೋದಿ ಭಾಷಣದುದ್ದಕ್ಕೂ ಮೋದಿ… ಮೋದಿ.. ಎಂಬ ಘೋಷಣೆಗಳು ಕೇಳಿ ಬಂದವು. ವೇದಿಕೆ ಮೇಲಿದ್ದ ಸಂಸದ ಬಿ.ಶ್ರೀರಾಮುಲು ಕೈ ಸನ್ನೆಯ ಮೂಲಕ ಕಾರ್ಯಕರ್ತರನ್ನು ಮೋದಿ ಪರ ಘೋಷಣೆ ಕೂಗುವಂತೆ ಮತ್ತಷ್ಟು ಪ್ರೇರೇಪಿಸಿದರು.

ಗಜಮಾಲೆಯಿಂದ ಸನ್ಮಾನ
ಪ್ರಧಾನಿ ನರೇಂದ್ರ ಮೋದಿಯವರು ವೇದಿಕೆಗೆ ಆಗಮಿಸುತ್ತಿದ್ದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಬೃಹತ್‌ ಗಾತ್ರದ ಗಜಮಾಲೆ ಹಾಕಿ ಗೌರವಿಸಿದರು. ಇವರೊಂದಿಗೆ ನಗರ ಕ್ಷೇತ್ರದ ಅಭ್ಯರ್ಥಿ ಜಿ.ಸೋಮಶೇಖರರೆಡ್ಡಿ ಹನುಮನ ವಿಗ್ರಹ ಮತ್ತು ರೈತರು ಉಳುವೆ ಮಾಡಲು ಬಳಸುವ ನೇಗಿಲನ್ನು ಉಡುಗೊರೆಯಾಗಿ ನೀಡಿ, ಶಾಲುಹೊದಿಸಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಿ ಗೌರವಿಸಿದರು. 

ಬಿಸಿಲಿಗೆ ಸುಸ್ತಾದ ಭದ್ರತಾ ಪಡೆ 
ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಪೊಲೀಸ್‌, ಗೃಹರಕ್ಷಕ, ಸಿಆರ್‌ಪಿಎಫ್‌ ಪೇದೆಗಳನ್ನು ನಿಯೋಜಿಸಿ, ಭಾರಿ ಭದ್ರತೆ ಒದಗಿಸಿತ್ತು. ಆದರೆ, ಬೆಳಗ್ಗೆಯಿಂದ ಬಿಸಿಲಲ್ಲಿ ನಿಂತು ಭದ್ರತೆ ಒದಗಿಸಿದ್ದ ಸಿಬ್ಬಂದಿಗಳು ಮೋದಿಯವರು ಬಂದು
ಹೋಗುವುದರೊಳಗಾಗಿ ಬಿಸಿಲಿನ ತಾಪಕ್ಕೆ ಬಳಲಿ ಬೆಂಡಾಗಿದ್ದು, ಬ್ಯಾನರ್‌ ಮತ್ತು ಮರದ ನೆರಳಿನ ಮೊರೆ ಹೋದರು.

ಮೋದಿ ಕನ್ನಡ ಮಾತು…
ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ “ಬಳ್ಳಾರಿ ಮಹಾಜನತೆಗೆ ನನ್ನ ನಮಸ್ಕಾರಗಳು ಎನ್ನುತ್ತಿದ್ದಂತೆ ಜನರ ಹರ್ಷೋದ್ಘಾರ ಮುಗುಲು ಮುಟ್ಟಿತ್ತು. ನಂತರ ಮೋದಿ ಅವರು ಹಂಪಿಯ ವಿರೂಪಾಕ್ಷೇಶ್ವರ, ಹಜಾರರಾಮ, ಉಗ್ರನರಸಿಂಹ ಸ್ವಾಮಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು. ಇತಿಹಾಸ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯ, ರಾಮಭಕ್ತ ಹನುಮ ಜನ್ಮಸ್ಥಾನ, ಪುರಂದರದಾಸ, ಕನಕದಾಸರ ಪಾದ ಸ್ಪರ್ಶವಾದ ಹಾಗೂ ಹಕ್ಕಬುಕ್ಕರು ಓಡಾಡಿದ ಈ ನೆಲಕ್ಕೆ ಹಾಗೂ ಎಲ್ಲ ಮಹಾತ್ಮರಿಗೂ ನನ್ನ ನಮಸ್ಕಾರಗಳು. ಎಂದು ಭಾಷಣದಲ್ಲಿ ಮಹಾತ್ಮರನ್ನು ಸ್ಮರಿಸಿ ಸಭೆಯಲ್ಲಿ ನೆರೆದಿದ್ದ ಜನರ ಉತ್ಸಾಹ ಇಮ್ಮಡಿಗೊಳಿಸಿದರು.

ಕಾರ್ಯಕ್ರಮದಲ್ಲಿ ಮೋದಿ ಮುಖವಾಡ ಧರಿಸಿಕೊಂಡಿದ್ದ ಯುವಕನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಂಡು ಗಮನ ಸೆಳೆದನು.

ಕಾರ್ಯಕ್ರಮದಲ್ಲಿ ಹೆಚ್ಚಿದ ಗಾಂಧಿ ಟೋಪಿಗಳ ಕಲರವ ಮಧ್ಯಾಹ್ನ 2.50ಕ್ಕೆ ವೇದಿಕೆ ಆಗಮನ, 3.30ಕ್ಕೆ ಪೂರ್ಣಗೊಳಿಸಿದ ಭಾಷಣ 

ಬಾನೆತ್ತರಕ್ಕೆ ಹಾರುತ್ತಿದ್ದ ಹೆಲಿಕ್ಯಾಪ್ಟರ್‌ ನೋಡಲು ಮುಗಿಬಿದ್ದ ಜನರು. ಪಕ್ಕದ ಮೇಲ್ಸೇತುವೆ ಮೇಲೂ ನಿಂತು ಕಾರ್ಯಕ್ರಮ ವೀಕ್ಷಿಸಿದ ಜನರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.