ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲಾ ವಿಸರ್ಜನೆ
Team Udayavani, Dec 22, 2018, 4:41 PM IST
ಹೊಸಪೇಟೆ: ಕಳೆದ 45 ದಿನಗಳಿಂದ ಆರಂಭಗೊಂಡ ಶ್ರೀ ಹನುಮ ಮಾಲಾ ವ್ರತಾಚರಣೆ ಅತ್ಯಂತ ಶಾಂತಿ ಹಾಗೂ ಸಂಭ್ರಮದಿಂದ ಸಮೀಪದ ವಿಶ್ವಪ್ರಸಿದ್ಧ ಧಾರ್ಮಿಕ ಕ್ಷೇತ್ರ ಅಂಜನಾದ್ರಿ ಬೆಟ್ಟದಲ್ಲಿ ಶುಕ್ರವಾರ ಹನುಮ ಮಾಲೆ ವಿರ್ಸಜನೆ ಕಾರ್ಯಕ್ರಮ ನಡೆಯಿತು.
ರಾಜ್ಯದ ನಾನಾ ಕಡೆಯಿಂದ ಕೊರೆಯುವ ಚಳಿಯನ್ನು ಲೆಕ್ಕಿಸದೇ ಅಂಜನಾದ್ರಿ ಬೆಟ್ಟದಲ್ಲಿ ಸಹಸ್ರಾರು ಸಂಖ್ಯೆಯಲ್ಲಿಮಾಲಾಧಾರಿಗಳು ವಾಸ್ತವ್ಯ ಹೂಡಿದ್ದರು. ಬೆಳಗ್ಗೆ 4 ಗಂಟೆಗೆ ವಿನಾಯಕ ಅಗ್ನಿಹೋತ್ರಿ ನೇತೃತ್ವದ ತಂಡದ ಸದಸ್ಯರು ಪವಮಾನ ಹೋಮ ಮತ್ತು ಮನ್ಯೂ ಸೂಕ್ತ ಹೋಮ ನೆರವೇರಿಸಲಾಯಿತು.
ಹನುಮ ಮಾಲಾ ಸಮಿತಿ ಜಿಲ್ಲಾಧ್ಯಕ್ಷ ಗುದ್ಲಿ ಪರುಶರಾಮ, ವಿಶ್ವ ಹಿಂದೂ ಪರಿಷತ್ನ ಹಿರಿಯ ಮುಖಂಡ ನರಸಿಂಹ ಮೂರ್ತಿ, ಕಾರ್ಯದರ್ಶಿ ದಿನೇಶ್ ಪಟೇಲ್, ಆನಂದ್ ಕೃಷ್ಣ, ಆನೆಗುಂದಿ ಸಂಸ್ಥಾನದ ಕೃಷ್ಣದೇವರಾಯ ಸಮ್ಮುಖದಲ್ಲಿ ಸಾಮೂಹಿಕ ಪೂರ್ಣಾಹುತಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.
ಮಾಲೆ ವಿಸರ್ಜನೆ: ಕ್ಷೇತ್ರದಲ್ಲಿ ಪವಮಾನ ಹೋಮ ಸೇರಿದಂತೆ ನಾನಾ ಪೂಜೆಗಳ ಬಳಿಕ ಮಾಲಾಧಾರಿಗಳು ಮಾಲೆಯನ್ನು
ವಿಸರ್ಜನೆ ಮಾಡಿ, ಹನುಮಂತ ದೇವರಲ್ಲಿ ಪ್ರಾರ್ಥಿಸಿದರು. ಬೆಳಗ್ಗೆಯಿಂದ ಪ್ರಾರಂಭಗೊಂಡ ಮಾಲೆ ವಿಸರ್ಜನೆ ಕಾರ್ಯ
ಸಂಜೆಯವರೆಗೆ ನಡೆಯಿತು. ಸುಮಾರು 27 ಸಾವಿರ ಮಾಲಾಧಾರಿಗಳು ಮಾಲೆ ವಿಸರ್ಜನೆ ಮಾಡಿದರು.
ಸಂಜೆಯಾದರೂ ರಾಜ್ಯದ ನಾನಾ ಕಡೆಯಿಂದ ಮಾಲಾಧಾರಿಗಳು ಬೆಟ್ಟಕ್ಕೆ ಆಗಮಿಸುತ್ತಿರುವುದು ಕಂಡು ಬಂತು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಹಿರೇಮಠ್…, ವರ್ಷದಿಂದ
ವರ್ಷಕ್ಕೆ ಮಾಲಾಧಾರಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಅದರಲ್ಲೂ ಪ್ರಸಕ್ತ ವರ್ಷ 25 ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳು ಬೆಟ್ಟಕ್ಕೆ
ಆಗಮಿಸಿ, ಭಕ್ತಿ ಸಮರ್ಪಿಸಿದ್ದಾರೆ. ಧಾರ್ಮಿಕ ಮತ್ತು ದತ್ತಿ ಇಲಾಖೆ ಅಧಿಕಾರಿಗಳು ಅತ್ಯಂತ ಕಾಳಜಿ ವಹಿಸಿ, ಮಾಲಾಧಾರಿಗಳಿಗೆ
ಭೋಜನ ವ್ಯವಸ್ಥೆ, ಭಕ್ತರಿಗೆ ದರ್ಶನದ ವ್ಯವಸ್ಥೆ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಅಧಿಕಾರಿಗಳು
ಸ್ಥಳದಲ್ಲಿ ಸೂಕ್ತ ಭದ್ರತೆ ಒದಗಿಸಿ ಮಾಲಾ ವಿಸರ್ಜನೆಗೆ ಅವಕಾಶ ಕಲ್ಪಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು. ಈ ವೇಳೆ ವಿಶ್ವ
ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ಕೇಶವ ಹೆಗಡೆ, ಅಖೀಲ ಭಾರತ ಸಂಘಟನಾ ಕಾರ್ಯದರ್ಶಿ ಮಿಲೀಂದ
ಪರಾಂಡೆ, ಭಜರಂಗ ದಳದ ರಾಷ್ಟ್ರೀಯ ಕಾರ್ಯದರ್ಶಿ ಸೂರ್ಯನಾರಾಯಣ, ವಿಎಚ್ಪಿಯ ಆನಂದ್ ಕೃಷ್ಣ, ಅನಿಲ್ ಜೋಶಿ, ರೇವಣಸಿದ್ದಪ್ಪ, ಸುನೀಲ್, ರಮೇಶ್, ಗುದ್ಲಿ ಪರುಶರಾಮ್, ಬಸವರಾಜ್ ನಾಲತ್ವಾಡ್, ರಮೇಶ್ ಗುಜ್ಜಲ್ ಇನ್ನಿತರರಿದ್ದರು.
ಪವಮಾನ ಹೋಮ: ಹಂಪಿಯ ಆನೆಗುಂದಿಯ ಆಂಜನಾದ್ರಿ ಬೆಟ್ಟದಲ್ಲಿ ಶುಕ್ರವಾರ ಪವಮಾನ ಹೋಮ ನಡೆಯಿತು.
ನಗರದ ಹನುಮ ಮಾಲಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪವಮಾನ ಹೋಮದಲ್ಲಿ ಸಹಸ್ರಾರು ಹನುಮ ಮಾಲಾಧಾರಿಗಳು
ಪೂಜೆ ಸಲ್ಲಿಸಿದರು. ಅಪ್ಪರಾವ್ ಸಾನಬಾಳ್, ಸಂದೀಪ್ಸಿಂಗ್ , ಗೋವಿಂದ್ ಕುಲಕರ್ಣಿ ನೇತೃತ್ವದಲ್ಲಿ ಮಾಲಾಧಾರಿಗಳ
ಮಾಲಾ ವಿಸರ್ಜನಾ ಕಾರ್ಯಕ್ರಮ ಧಾರ್ಮಿಕ ವಿಧಿ-ವಿಧಾನ ನೆರವೇರಿಸಿದ ಬಳಿಕ ಸಂಪನ್ನವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ