ರೈತರ ಕೃಷಿ ಚಟುವಟಿಕೆಗೆ ಕಾಮಗಾರಿ ಅಡ್ಡಿ!

ಕೋವಿಡ್ ನಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅಪೂರ್ಣ| ಎಲ್ಲೆಂದರಲ್ಲಿ ಬಿದ್ದಿರುವ ಪೈಪ್‌ ಗಳು 

Team Udayavani, Apr 29, 2020, 7:52 PM IST

29-April-09

ಹರಪನಹಳ್ಳಿ: ಜಮೀನಿನ ಮಧ್ಯದಲ್ಲಿ ತೆಗೆಯಲಾಗಿರುವ ಪೈಪ್‌ಲೈನ್‌ ಗುಂಡಿ.

ಹರಪನಹಳ್ಳಿ: ತುಂಗಭದ್ರಾ ನದಿಯಿಂದ ತಾಲೂಕಿನ 50 ಕೆರೆಗಳಿಗೆ ನೀರು ತುಂಬಿಸುವ 227 ಕೋಟಿರೂ ವೆಚ್ಚದ ಕಾಮಗಾರಿ ಕೋವಿಡ್ ಕಂಟಕದಿಂದ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಭಾಗದ ರೈತರಿಗೆ ಮುಂಗಾರು ಹಂಗಾಮು ಕೃಷಿ ಚಟುವಟಿಕೆಗೆ ತೀವ್ರ ತೊಂದರೆ ಉಂಟಾಗಿದೆ.

ಕಳೆದ ವಾರ ವಿವಿಧೆಡೆ ಹಸಿ ಮಳೆ ಬಿದ್ದಿರುವ ಹಿನ್ನೆಲೆಯಲ್ಲಿ ಬಿತ್ತನೆ ಮಾಡಲು ರಂಟೆ, ಕುಂಟೆ ಹೊಡೆದು ಜಮೀನುಗಳನ್ನು ರೈತರು ಹಸನ ಮಾಡಿಕೊಳ್ಳಬೇಕಿದೆ. ಆದರೆ ಕಾಮಗಾರಿ ಗುತ್ತಿಗೆ ಪಡೆದಿರುವ ಎಲ್‌ ಆ್ಯಂಡ್‌ ಟಿ ಕಂಪನಿ ಅವರು ಕಾಮಗಾರಿ ಪ್ರಾಂಭಿಸಲು ಹಿಂದೇಟು ಹಾಕುತ್ತಿದ್ದಾರೆ. ಒಂದು ವಾರದ ಹಿಂದೆಯೇ ಕಾಮಗಾರಿಗಳನ್ನು ನಡೆಸಲು ಜಿಲ್ಲಾಧಿಕಾರಿಗಳು ಅವಕಾಶ ಕಲ್ಪಿಸಿದ್ದರೂ ಗುತ್ತಿಗೆದಾರರು ತಿರುಗಿಯೂ ನೋಡಿಲ್ಲ. ಕೊರೊನಾ ಲಾಕ್‌ಡೌನ್‌ ಶುರುವಾಗುವ ಹಿಂದಿನ ದಿನಗಳಲ್ಲಿ ಪೈಪ್‌ಲೈನ್‌ ಅಳವಡಿಸಲು ರೈತರ ಹೊಲಗಳಲ್ಲಿ ಕಾಲುವೆ ತೆಗೆದು ಎಲ್ಲೆಂದರಲ್ಲಿ ಪೈಪ್‌ಗ್ಳನ್ನು ಹಾಕಿದ್ದಾರೆ.

ಕಾಮಗಾರಿ ಅರ್ಧಕ್ಕೆ ಸ್ಥಗಿತವಾಗಿರುವುದರಿಂದ ತಾಲೂಕಿನ ವಿವಿಧ ಭಾಗದಲ್ಲಿ ಸುಮಾರು ನೂರಾರು ರೈತರಿಗೆ ತೀವ್ರ ತೊಂದರೆ ಆಗಿದೆ. ಹಂಪಾಪುರ ಗ್ರಾಮದಿಂದ ಗೌರಿಹಳ್ಳಿ, ತೋಗರಿಕಟ್ಟೆ, ಉದ್ದಗಟ್ಟಿ, ಹುಲಿಕಟ್ಟಿ, ಬಾಪೂಜಿ ನಗರ, ಉದ್ದಗಟ್ಟಿ ಸಣ್ಣ ತಾಂಡ, ಕನ್ನನಾಯಕನಹಳ್ಳಿ ಭಾಗದ ರೈತರ ಹೊಲದಲ್ಲಿ ಪೈಪ್‌ಗ್ಳನ್ನು ಎಲ್ಲೆಂದರಲ್ಲಿ ಹಾಕಿರುವುದರಿಂದ ಭೂಮಿ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಏಪ್ರಿಲ್‌ ತಿಂಗಳಲ್ಲಿ ಭೂಮಿ ಸಿದ್ಧತೆ ಮಾಡಿಕೊಂಡ ರೈತರು ಪ್ರತಿ ವರ್ಷ ಮೇ 15ರ ನಂತರ ಬಿತ್ತನೆ ಪ್ರಕ್ರಿಯೆ ಪ್ರಾರಂಭವಾಗಲಿದೆ.

ಸದ್ಯ ಭೂಮಿ ಸಿದ್ಧತೆ ಅಗತ್ಯವಿರುವಷ್ಟು ಮಳೆ ಮಳೆ ಬಂದಿರುವುರಿಂದ ರೈತರು ಚಡಪಡಿಸುವಂತಾಗಿದೆ. ಕೇವಲ ಒಂದೆರಡು ಎಕರೆ ಜಮೀನು ಹೊಂದಿರುವ ರೈತರು ಈ ಸಮಯದಲ್ಲಿ ಭೂಮಿ ಸಿದ್ಧತೆ ಮಾಡಿಕೊಂಡು ಸರಿಯಾದ ಸಮಯದಲ್ಲಿ ಬಿತ್ತನೆ ಮಾಡದಿದ್ದಲ್ಲಿ ಇಡೀ ವರ್ಷ ಏನು ಬೆಳೆಯಲಾರದಂಥ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಮೇ ತಿಂಗಳ ಮೊದಲ ವಾರದಿಂದ ಊಟದ ಜೋಳ, ಎಳ್ಳು, ಹೆಸರು ನಂತರ ಮೆಕ್ಕೆಜೋಳ ಬಿತ್ತನೆ ಮಾಡುತ್ತಿದ್ದೇವು, ಆದರೆ ನೀರು ತುಂಬಿಸುವ ಕಾಮಗಾರಿಯಿಂದ ಸ್ಥಗಿತಗೊಂಡಿರುವುದರಿಂದ ಕೋವಿಡ್ ನಂತರ ನಮಗೆ ಗುತ್ತಿಗೆದಾರರಿಂದ ಸಮಸ್ಯೆ ಉಂಟಾಗಿದೆ. ಕೆಲಸ ಪ್ರಾರಂಭಿಸದಿದ್ದಲ್ಲಿ ನಮಗೆ ಪರಿಹಾರ ಕೊಡಬೇಕು, ಇಲ್ಲವೇ ಕೂಡಲೇ ಕಾಮಗಾರಿ ಮುಗಿಸಬೇಕು ಎನ್ನುವುದು ಹುಲಿಕಟ್ಟಿ ಗ್ರಾಮದ ರೈತರಾದ ಬಣಕಾರ ಗಂಗಾಧರಪ್ಪ, ಅಂಗಡಿ ಮಹಬೂಬ್‌ಸಾಬ್‌, ಮದರಲಿಸಾಬ್‌, ನಂದ್ಯಾಲ ಕೋಟ್ರಪ್ಪ, ಕೆ.ಹಾಲೇಶ್‌ ಇತರರ ಒತ್ತಾಯವಾಗಿದೆ. ರೈತರು ತಮ್ಮದಲ್ಲದ ತಪ್ಪಿನಿಂದ ಸಂಕಷ್ಟ ಎದುರಿಸಬೇಕಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸಿ ಮುಗಿಸುವುದರ ಜೊತೆಗೆ ರೈತರಿಗೆ ಅನಾನುಕೂಲ ಮಾಡಿರುವ ಗುತ್ತಿಗೆದಾರರೇ ರೈತರ ಜಮೀನುಗಳನ್ನು ಹಸನ ಮಾಡಿಕೊಡುವ ಮೂಲಕ ಸಕಾಲದಲ್ಲಿ ಬಿತ್ತನೆಗೆ ವ್ಯವಸ್ಥೆ ಮಾಡಿಕೊಡಬೇಕು ಎಂದು ತಾಪಂ ಸದಸ್ಯ ಹುಲಿಕಟ್ಟಿ ಚಂದ್ರಪ್ಪ ಆಗ್ರಹಿಸಿದ್ದಾರೆ.

ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಪೈಪ್‌ಲೈನ್‌ ಅಳವಡಿಕೆಯ ಕಾಮಗಾರಿ ತಾಲೂಕಿನ 11 ಕಡೆ ಕೆಲಸ ನಡೆಯುತ್ತಿದೆ. ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿತ್ತು. ಕೊರೊನಾ ಬಾರದಿದ್ದರೆ ಈಗಾಗಲೇ ಕೆಲಸ ಮುಗಿಯುತ್ತಿತ್ತು. ಕೂಡಲೇ ಕಾಮಗಾರಿ ಆರಂಭಿಸಿ ರೈತರಿಗೆ ಭೂಮಿ ಹಸನ ಮಾಡಲು ಮತ್ತು ಬಿತ್ತನೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗುವುದು.
ಎನ್‌.ಜಿ. ಗಂಗಪ್ಪ, ಎಇಇ,
ಕರ್ನಾಟಕ ನೀರಾವರಿ ನಿಗಮ

ಎಸ್‌.ಎನ್‌.ಕುಮಾರ್‌ ಪುಣಬಗಟ್ಟಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.