ಕಾಫಿ ತೋಟದಿಂದ ಕ್ವಾರಂಟೈನ್‌ಗೆ

ಕರೆಕಾನಹಳ್ಳಿ ತಾಂಡಾದ 22 ಜನ ಮಾಚಿಹಳ್ಳಿ ನಿರಾಶ್ರಿತರ ಕೇಂದ್ರಕ್ಕೆ ರವಾನೆ

Team Udayavani, Apr 17, 2020, 1:59 PM IST

17-April-17

ಹರಪನಹಳ್ಳಿ: ಪಟ್ಟಣದ ಆಯುಷ್‌ ಆಸ್ಪತ್ರೆ ಆವರಣದಲ್ಲಿ ವೈದ್ಯರು ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸಿದರು

ಹರಪನಹಳ್ಳಿ: ಹೊಟ್ಟೆಪಾಡಿಗಾಗಿ ಕಾಫಿ ಸೀಮೆಗೆ ತೆರಳಿ ಸ್ವ-ಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ತಾಲೂಕಿನ ಕರೆಕಾನಹಳ್ಳಿ ತಾಂಡಾದ 22 ಜನರನ್ನು ಗುರುವಾರ ಹೋಂ ಕ್ವಾರಂಟೈನ್‌ ಮಾಡಲಾಗಿದೆ.

19 ದೊಡ್ಡವರು, ಇಬ್ಬರು ಚಿಕ್ಕ ಮಕ್ಕಳು ಸೇರಿ ಒಟ್ಟು 21 ಜನರು ಮತ್ತು ಓರ್ವ ಚಾಲಕನನ್ನು ಮಾಚಿಹಳ್ಳಿ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸರ್ಕಾರಿ ನಿರಾಶ್ರಿತರ ಕೇಂದ್ರಕ್ಕೆ ರವಾನಿಸಲಾಗಿದೆ. ಉಚ್ಚಂಗಿದುರ್ಗ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡಿದಾಗ ಒಂದು ಆಟೊದಲ್ಲಿ ಜನರನ್ನು ಸಾಗಿಸುತ್ತಿದ್ದರು. ವಿಚಾರಣೆ ಮಾಡಿದಾಗ ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟದಿಂದ ಬಂದಿರುವುದು ದೃಢಪಟ್ಟಿದೆ ಎಂದು ಅರಸೀಕೆರೆ ಠಾಣೆ ಪಿಎಸ್‌ಐ ಕಿರಣ್‌ ಕುಮಾರ ತಿಳಿಸಿದ್ದಾರೆ.

ಊರಲ್ಲಿ ಕೆಲಸವಿಲ್ಲದ್ದರಿಂದ ಕೂಲಿ ಅರಸಿ ಎರಡು ತಿಂಗಳ ಹಿಂದೆ ಕಾಫಿ ಎಸ್ಟೇಟ್‌ಗೆ ತೆರಳಿದ್ದರು. ಕಾಫಿ ತೋಟದಲ್ಲಿ ದಿನಕ್ಕೆ 300 ಕೂಲಿ ಕೊಡುತ್ತಿದ್ದರು. ಕೆಲಸವಿಲ್ಲದಾಗ ಸಾಹುಕಾರರು ಕೂಲಿ ಕೊಡುವುದಿಲ್ಲ. ದುಡಿದ ಹಣವೆಲ್ಲಾ ಖರ್ಚಾಗುತ್ತದೆ. ದೇಶವನ್ನೇ ಬಂದ್‌ ಮಾಡಿದ್ದಾರೆ ಎಂದು ನಮ್ಮೂರಿಗೆ ಬರುತ್ತಿದ್ದಾಗ ಅಧಿಕಾರಿಗಳು ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗೆ ಕರೆ ತಂದಿದ್ದಾರೆ. ಪಕ್ಕದಲ್ಲೇ ನಮ್ಮೂರಿದೆ. ತಂದೆ, ತಾಯಿ, ಮಕ್ಕಳಿದ್ದಾರೆ. ದಯವಿಟ್ಟು ನಮ್ಮೂರಿಗೆ ಕಳಿಸಿಕೊಡಿ ಎಂದು ಮಹಿಳೆಯರು ಅಧಿಕಾರಿಗಳ ಬಳಿ ಮನವಿ ಮಾಡುತ್ತಿದ್ದರು.

ಆಟೊದಲ್ಲಿ ಪ್ರಯಾಣಿಸುತ್ತಿದ್ದ 22 ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ. ವಲಸಿಗರಾಗಿರುವ ಕಾರಣ ಅವರನ್ನು ನಿರಾಶ್ರಿತರ ಕೇಂದ್ರದಲ್ಲಿ ಉಳಿಯಲು ಸೂಚಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಇನಾಯತ್‌ ತಿಳಿಸಿದರು. ನಿರಾಶ್ರಿತ ಕೇಂದ್ರದಲ್ಲಿರುವ ತೆಲಂಗಾಣದ ಜನರಿಗೆ ನಿತ್ಯ ದವಸ ಧಾನ್ಯ ಕೊಡಲಾಗುತ್ತಿದೆ. ಈಗ ಹೊಸದಾಗಿ ಬಂದಿರುವವರಿಗೂ ಊಟ ನೀಡಲಾಗಿದೆ. ವಸತಿ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮುಂದಿನ ಆದೇಶ ಬರುವ ತನಕ ಒಟ್ಟು 104 ಜನರು ನಿರಾಶ್ರಿತರ ಕೇಂದ್ರದಲ್ಲಿಯೇ ಉಳಿಯಬೇಕು ಎಂದು ಅಧಿಕಾರಿಗಳು ತಿಳಿಸಿದರು. ತಹಶೀಲ್ದಾರ್‌ ಡಾ| ನಾಗವೇಣಿ, ಸಿಪಿಐ ಕೆ.ಕುಮಾರ್‌, ಪಿಎಸ್‌ಐ ಕಿರಣ್‌ಕುಮಾರ, ಬಿಸಿಎಂ ವಿಸ್ತರಣಾಧಿಕಾರಿ ಭೀಮಾ ನಾಯ್ಕ, ಸಿಡಿಪಿಒ ಮಂಜುನಾಥ, ಎನ್‌.ಜಿ. ಬಸವರಾಜ್‌, ಅಂಬರೀಶ್‌ ಇದ್ದರು.

ನಂಜನಗೂಡಿನಿಂದ ಬಂದವರಿಗೆ ಪ್ರತ್ಯೇಕ ವ್ಯವಸ್ಥೆ: ಮೈಸೂರಿನ ನಂಜನಗೂಡು ಹತ್ತಿರದ ತಾಂಡಪುರ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಯುವಕರು ಗುರುವಾರ ಹರಪನಹಳ್ಳಿಗೆ ಆಗಮಿಸಿದ್ದಾರೆ. ಪಟ್ಟಣದ ಹರಿಹರ ರಸ್ತೆಯ ಆಶ್ರಯ ಕ್ಯಾಂಪ್‌ನ ಮೂರು ಯುವಕರು ತಾಂಡಪುರ ಕ್ಯಾಂಟಿನ್‌ ನಲ್ಲಿ ಕೆಲಸ ಮಾಡುತ್ತಿದ್ದರು. ಹೋಟೆಲ್‌ ಬಾಗಿಲು ಹಾಕಿರುವುದರಿಂದ ಅಲ್ಲಿಂದ ಪಾಸ್‌ ಪಡೆದು ಕಾರಿನಲ್ಲಿ ಬಂದಿದ್ದಾರೆ. ನಂಜನಗೂಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚು ಕಂಡು ಬಂದ ಹಿನ್ನೆಲೆಯಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸರ್ಕಾರಿ ನಿರಾಶ್ರಿತರ ಕೇಂದ್ರದಲ್ಲಿ ಪ್ರತ್ಯೇಕವಾಗಿ ಇಡಲಾಗಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.