ಹರಪನಹಳ್ಳಿ ಬಚಾವೋ;ಭ್ರಷಾಚಾರ ಹಠಾವೋ!
ಲಂಚ ಕೇಳುವ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಘೇರಾವ್: ಇದ್ಲಿ ರಾಮಪ್ಪ ಹೇಳಿಕೆ
Team Udayavani, Mar 12, 2020, 12:55 PM IST
ಹರಪನಹಳ್ಳಿ: ಹರಪನಹಳ್ಳಿ ಬಚಾವೋ, ಭ್ರಷ್ಠಚಾರ ಹಠಾವೋ ಎನ್ನುವ ಘೋಷವಾಕ್ಯದಡಿಯಲ್ಲಿ ಲಂಚ ಕೇಳುವ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಘೇರಾವ್ ಹಾಕುವ ಕಾರ್ಯಕ್ರಮವನ್ನು ಸಿಪಿಐ(ಎಂಎಲ್) ಲಿಬರೇಷನ್ ಪಕ್ಷ ಮತ್ತು ಅಖೀಲ ಭಾರತ ಕಿಸಾನ್ ಮಹಾಸಭಾ ಹಮ್ಮಿಕೊಂಡಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖೀಲ ಭಾರತ ಕಿಸಾನ್ ಮಹಾಸಭಾ ರಾಜ್ಯಾಧ್ಯಕ್ಷ ಇದ್ಲಿ ರಾಮಪ್ಪ ಅವರು, ಪಟ್ಟಣದ ಮಿನಿವಿಧಾನಸೌಧ ಎದುರು ಮಾ. 25ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಮ್ಮಿಕೊಳ್ಳಲಾಗುವುದು. ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತದೆ. ಹೈಕೋರ್ಟ್ ಆದೇಶವಿದ್ದರೂ ಹಿರೇಕೆರೆ ಒತ್ತುವರಿ ತೆರವುಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಕಂದಾಯ ಇಲಾಖೆಯಲ್ಲಿ ಲಂಚಕೊಟ್ಟರೆ ಮಾತ್ರ ಕೆಲಸ ಎನ್ನುವಂತಾಗಿದೆ ಎಂದು ದೂರಿದರು.
ತಾಲೂಕಿನ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ. ಅಧಿಕಾರಿಗಳು ರೈತರ, ಬಡವರ ಪರ ಕೆಲಸ ಕಾರ್ಯ ಮಾಡುತ್ತಿಲ್ಲ. ಕ್ಷೇತ್ರದ ಶಾಸಕ ಕರುಣಾಕರರೆಡ್ಡಿಯವರ ಆಡಳಿತ ವೈಖರಿ ಇದಕ್ಕೆಲ್ಲ ಕಾರಣವಾಗಿದೆ. ಶಾಸಕರು ಹರಪನಹಳ್ಳಿ ಕ್ಷೇತ್ರದಲ್ಲಿ ಮನೆ ಮಾಡಿಕೊಂಡು ವಾಸಿಸದೇ ಅತಿಥಿ ರೀತಿ ಕ್ಷೇತ್ರಕ್ಕೆ ಬಂದು ಅತಿಥಿ ರೀತಿ ಹೋಗುತ್ತಾರೆ. ಹೀಗಾಗಿ ತಾಲೂಕಿನಲ್ಲಿ ಬೋಗಸ್ ಕಾಮಗಾರಿಗಳು ಹೆಚ್ಚಾಗಿ ನಡೆಯುತ್ತಿದ್ದು, ಇದಕ್ಕೆ ಶಾಸಕರ ಕೃಪಾಕಟಾಕ್ಷವಿದೆ ಎಂದು ಆರೋಪಿಸಿದರು. ಜಿ. ದಾದಪುರ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಈ ಹಿಂದೆ 2 ಬಾರಿ ನಡೆದಿದ್ದು, ಈಗ ಅದೇ ರಸ್ತೆ ಕಾಮಗಾರಿಗೆ ಮತ್ತೇ ಜೆಸಿಬಿಯಿಂದ ಹೊಸಮುಖ ಮಾಡಿ ಬಿಲ್ ತೆಗೆದುಕೊಳ್ಳುವ ಸಂಚಿನಲ್ಲಿರುತ್ತಾರೆ. ಮತ್ತಿಹಳ್ಳಿ ಗ್ರಾಮದ ಹತ್ತಿರ 1 ಕೋಟಿರೂ ವೆಚ್ಚದಲ್ಲಿ ಕಲ್ಲು ಹೋಳಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿದ ಕಾಮಗಾರಿ ಅಂದಾಜು ಪಟ್ಟಿ ರೀತಿ ನಡೆದಿಲ್ಲ. ವಡೇರಹಳ್ಳಿಯಿಂದ ತೆಲಿಗಿ, ಪರುಶುರಾಮನಕಟ್ಟಿ, ವಡೇರಹಳ್ಳಿಯಿಂದ ರಾಗಿಮಸಲವಾಡದವರೆಗೆ ರಸ್ತೆ ಚೆನ್ನಾಗಿದ್ದರೂ ಸಹ ಅದೇ ರಸ್ತೆಯ ಪಕ್ಕದಲ್ಲಿ ಮಣ್ಣು ಹಾಕಿ ಹೊಸಮುಖ ಮಾಡಿ ಬೋಗಸ್ ಬಿಲ್ ಮಾಡಲಾಗುತ್ತಿದೆ.
ತಾಲೂಕಿನಲ್ಲಿ ಅವಶ್ಯಕತೆ ಇರುವೆಡೆ ಕಾಮಗಾರಿ ನಡೆಸದೇ ತಮಗೆ ಬೇಕಾದ ಕಡೆ ಕಾಮಗಾರಿ ನಡೆಸಿ ಹಣ ಲೂಟಿ ಹೊಡೆಯಲಾಗುತ್ತಿದೆ. ನೆರೆ ಪರಿಹಾರದಲ್ಲಿ ಸಾಕಷ್ಟು ಭ್ರಷ್ಟಚಾರ ನಡೆದಿದೆ ಎಂದು ಆಪಾದಿಸಿದರು.
ಸಂಘಟನೆ ಮುಖಂಡರಾದ ಸಂದೇರ ಪರುಶುರಾಮ, ಮತ್ತಿಹಳ್ಳಿ ಓ.ಕೊಟ್ರೇಶ್, ಹುಲಿಕಟ್ಟಿ ಮೈಲಪ್ಪ, ದಾದಾಪುರ ಭರ್ಮಪ್ಪ, ಮೈದೂರು ಬಾಲಗಂಗಾಧರ, ಹಾರಕನಾಳು ಮೈಲಪ್ಪ, ಅಲಗಿಲವಾಡ ದೇವೇಂದ್ರಪ್ಪ, ಪೃಥ್ವೇಶ್ವರ ದುರುಗೇಶ್, ನೀಲುವಂಜಿ ತಿರುಕಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ