ನ್ಯಾಯಾಲಯ ಅಂಗಳಕ್ಕೆ ಪಿಟಿಪಿ ಲಾಕ್‌ಡೌನ್‌ ಉಲ್ಲಂಘನೆ ಪ್ರಕರಣ

ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶಕ್ಕಾಗಿ ಕಾದು ಕುಳಿತ ತಾಲೂಕಾಡಳಿತ

Team Udayavani, Jun 17, 2020, 5:21 PM IST

17-June-22

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹರಪನಹಳ್ಳಿ: ತಾಲೂಕಿನ ಲಕ್ಷ್ಮೀಪುರ ತಾಂಡಾದಲ್ಲಿ ಜೂ.15ರಂದು ನಡೆದ ಮಾಜಿ ಸಚಿವ, ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಪುತ್ರನ ವಿವಾಹ ಸಮಾರಂಭದಲ್ಲಿ ಕೋವಿಡ್‌-19 ಕಾನೂನು ಉಲ್ಲಂಘನೆ ಸಂಬಂಧ ಇದುವರೆಗೂ ಯಾವುದೇ ಎಫ್‌ಐಆರ್‌ ದಾಖಲಾಗಿಲ್ಲ. ಈ ಪ್ರಕರಣ ಇದೀಗ ನ್ಯಾಯಾಲಯದ ಅಂಗಳದಲ್ಲಿದೆ.

ದೂರು ದಾಖಲಿಸಲು ಜಿಲ್ಲಾ ಕೋರ್ಟ್ ನಿಂದ ಪರವಾನಗಿ ಪಡೆದುಕೊಳ್ಳುವಂತೆ ಕೋರ್ಟ್‌ ಶಿರಸ್ತೇದಾರ್‌ ಅವರು ತಿಳಿಸಿದ್ದರಿಂದ ತಹಶೀಲ್ದಾರ್‌ ಅವರು ಜಿಲ್ಲಾ ಕೋರ್ಟ್‌ನಿಂದ ಪರವಾನಗಿ ಪಡೆದುಕೊಂಡಿದ್ದಾರೆ. ನಂತರ ದೂರು ನೀಡುವಂತೆ ಅರಸೀಕೆರೆ ಕಂದಾಯ ನಿರೀಕ್ಷಕರಿಗೆ ತಹಶೀಲ್ದಾರ್‌ ಸೂಚಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಕಂದಾಯ ನಿರೀಕ್ಷಕರು ತೆರಳಿದಾಗ ನೇರವಾಗಿ ದೂರನ್ನು ಸ್ವೀಕರಿಸುವುದಿಲ್ಲ, ಟಪಾಲ್‌ ಬಾಕ್ಸ್‌ಗೆ ದೂರು ಪ್ರತಿ ಹಾಕಿ ಹೋಗಿ ಎಂದು ತಿಳಿಸಿದ್ದರಿಂದ ಅರಸೀಕೆರೆ ಕಂದಾಯ ನಿರೀಕ್ಷಕ ಶ್ರೀಧರ ಅವರು ನ್ಯಾಯಾಲಯದ ಟಪಾಲ್‌ ಬಾಕ್ಸ್‌ಗೆ ದೂರಿನ ಪ್ರತಿ ಹಾಕಿ ಬಂದಿದ್ದಾರೆ.

ನ್ಯಾಯಾಲಯದಲ್ಲಿ 24 ಗಂಟೆ ಬಳಿಕ ಕೋರ್ಟ್‌ ಸಿಬ್ಬಂದಿ ಟಪಾಲ್‌ ಓಪನ್‌ ಮಾಡಲಿದ್ದು, ನ್ಯಾಯಾಲಯ ಗುರುವಾರ ಪ್ರಕರಣದ ಬಗ್ಗೆ ಗಮನ ಹರಿಸಲಿರುವ ಹಿನ್ನೆಲೆಯಲ್ಲಿ ಈಗ ಎಲ್ಲರ ಚಿತ್ತ ನ್ಯಾಯಾಲಯದ ನಿರ್ಧಾರದತ್ತ ಎನ್ನುವಂತಾಗಿದೆ. ಸದ್ಯ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶಕ್ಕಾಗಿ ತಾಲೂಕು ಆಡಳಿತ ಕಾಯ್ದು ಕುಳಿತಿದೆ. ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ನೇರವಾಗಿ ಪೊಲೀಸ್‌ ಠಾಣೆಗೆ ದೂರು ಕೊಡಲು ಬರುವುದಿಲ್ಲ ಕೋರ್ಟ್‌ಗೆ ದೂರು ಸಲ್ಲಿಸಬೇಕು. ಆದರೆ ಅರಸೀಕೆರೆ ಠಾಣೆಗೆ ತಹಶೀಲ್ದಾರ್‌ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಆದರೆ ಇದೀಗ ನ್ಯಾಯಾಧೀಶರು ಕೈಗೊಳ್ಳುವ ನಿರ್ಧಾರದ ಮೇಲೆ ಇಡೀ ಪ್ರಕರಣ ಭವಿಷ್ಯ ನಿಂತಿದೆ.

ಮದುವೆ ಭಾವಚಿತ್ರ ಹಾಗೂ ವಿಡಿಯೋ ಹಾಗೂ ಮಾಜಿ ಸಚಿವರು ನೀಡಿರುವ ಮನವಿ ಬಹುತೇಕ ದಾಖಲೆ ಸಹಿತ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಮಾಜಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಸೊಸೆ ಡಾ| ಕೆ.ಚರಣಿ ಹೈದ್ರಾಬಾದ್‌ ಮೂಲದವರಾಗಿದ್ದು ವಧು ಜೊತೆ ಹತ್ತಾರು ಜನ ಬಂದಿದ್ದಾರೆ. ಇದರ ಬಗ್ಗೆ ತಾಲೂಕು ಆಡಳಿತ ಏನು ಕ್ರಮಕೈಗೊಂಡಿದೆ ಎಂಬುದು ಇನ್ನೂ ನಿಗೂಢವಾಗಿದೆ. ಆದರೆ ಪುತ್ರನ ಮದುವೆಗೆ ಮುಂಚೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಾರದಂತೆ ಪಿ.ಟಿ. ಪರಮೇಶ್ವರನಾಯ್ಕ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿಕೊಂಡಿದ್ದರು.

ನನ್ನ ಸಹೋದರನ ಮದುವೆ ಹಿನ್ನೆಲೆ ಅರಸೀಕೆರೆ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದೆ. ಜೊತೆಗೆ ತಾಲೂಕಾ ಆಡಳಿತಕ್ಕೂ ಮನವಿ ನೀಡಿದ್ದೆ. ಆದರೆ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ನೋಡಲು ಜನ ಸೇರಿದ್ದರು. ಮೇಲಾಗಿ ಡಾ| ಜಿ.ಪರಮೇಶ್ವರ ಅವರು ಹೆಲಿಕಾಪ್ಟರ್‌ನಲ್ಲಿ ಬಂದಿದ್ದರಿಂದ ಹೆಲಿಕಾಪ್ಟರ್‌ ನೋಡಲು ಜನ ಬಂದಿದ್ದರು. ನಮ್ಮ ಬೀಗರು ಆಂಧ್ರಪ್ರದೇಶದಿಂದ ಬಂದಿದ್ದರು. ಅವರಿಗೆ ಆ ರಾಜ್ಯದಲ್ಲಿ ಹಾಗೂ ನಮ್ಮಲ್ಲಿ ಕೂಡಾ ಪ್ರಾಥಮಿಕ ತಪಾಸಣೆ ಮಾಡಲಾಗಿದೆ ಎಂದು ಪರಮೇಶ್ವರನಾಯ್ಕ ಪುತ್ರ, ಲಕ್ಷ್ಮೀಪುರ ಗ್ರಾಪಂ ಅಧ್ಯಕ್ಷ ಪಿ.ಟಿ. ಭರತ್‌ ತಿಳಿಸಿದ್ದಾರೆ.

ಕಾನೂನಿಗಿಂತ ದೊಡ್ಡವರ್ಯಾರು ಇಲ್ಲ. ಕಾನೂನಿಗೆ ಗೌರವ ಕೊಡುವೆ. ಮೇಲಾಗಿ ನಿನ್ನೆ ಮದುವೆಯಲ್ಲಿ ಹೆಲಿಕಾಪ್ಟರ್‌ ಬಂದಿತ್ತು. ಹೆಲಿಕಾಪ್ಟರ್‌ ನೋಡಲೇ ಬಹುತೇಕರು ಬಂದಿದ್ದರು. ಈ ಮೊದಲೇ ನಾನು ಮದುವೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರದಂತೆ ಜನರಿಗೆ ವಿನಂತಿ ಮಾಡಿದ್ದೆ. ಆದರೂ ಕೂಡಾ ಜನ ಸೇರಿದೆ. ಕಾನೂನಿಗೆ ನಾನು ಗೌರವ ಕೊಡುವೆ.
ಪಿ.ಟಿ.ಪರಮೇಶ್ವರನಾಯ್ಕ,
ಶಾಸಕ

ಲಕ್ಷ್ಮೀಪುರ ತಾಂಡಾದಲ್ಲಿ ನಡೆದ ಮಾಜಿ ಸಚಿವ ಪರಮೇಶ್ವರನಾಯ್ಕ ಪುತ್ರನ ವಿವಾಹ ವಿಚಾರವಾಗಿ ಈ ಬಗ್ಗೆ ಎಫ್‌ ಐಆರ್‌ ಆಗುವರೆಗೆ ನಾವು ಏನು ಹೇಳಲು ಆಗಲ್ಲ. ಎಫ್‌ಐಆರ್‌ ಬುಕ್‌ ಆದ ಬಳಿಕ ಸೂಕ್ತ ತನಿಖೆ ಮಾಡಿ ಕ್ರಮಕೈಗೊಳ್ಳುತ್ತೇವೆ. ಅಲ್ಲಿಯವರೆಗೆ ಏನು ಪ್ರತಿಕ್ರಿಯೆ ಕೊಡಲ್ಲ. ಮದುವೆ ವಿಚಾರವಾಗಿ ಚರ್ಚೆ ನಡೆದಿದ್ದು, ದೂರು ಬಂದರೆ ಕ್ರಮ ಜರುಗಿಸುತ್ತೇವೆ.
ನಂಜುಂಡಸ್ವಾಮಿ,
ಬಳ್ಳಾರಿ ಐಜಿಪಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.