ಪಡಿತರ ಪಡೆಯಲು ಸರ್ವರ್‌ ಕಾಟ -ಗ್ರಾಹಕರ ಪರದಾಟ

ಪಡಿತರಕ್ಕಾಗಿ ಕೆಲಸ ಬಿಟ್ಟು ದಿನಗಟ್ಟಲೇ ನ್ಯಾಯಬೆಲೆ ಅಂಗಡಿಗಳ ಎದುರು ಕಾದು ಕೂರುವ ಪರಿಸ್ಥಿತಿ

Team Udayavani, Jan 20, 2020, 11:50 AM IST

20-January-12

ಹರಪನಹಳ್ಳಿ: ಪಡಿತರ ಚೀಟಿದಾರರು ಸದ್ಯ ಪಡಿತರ ಪದಾರ್ಥಗಳಿಗಾಗಿ ಪರದಾಡುವ ಸನ್ನಿವೇಶ ಸೃಷ್ಟಿಯಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿರುವ ಬಯೋಮೆಟ್ರಿಕ್‌ ಯಂತ್ರಕ್ಕೆ ಅರ್ಹರು ಹೆಬ್ಬೆಟ್ಟು ಕೊಟ್ಟರೂ ಸ್ವೀಕರಿಸುತ್ತಿಲ್ಲ, ಪಡಿತರಕ್ಕಾಗಿ ದಿನಗಟ್ಟಲೆ ಕಾದು ಕೂರುವ ಪರಿಸ್ಥಿತಿ ಎದುರಾಗಿದ್ದು, ಇದಕ್ಕೆ ಕಾರಣ ಸರ್ವರ್‌ ಡೌನ್‌ ಕಾಟ.

ಕಳೆದ ನಾಲ್ಕು ದಿನಗಳಿಂದ ಒಂದು ದಿನಕ್ಕೆ ಮೂರರಿಂದ ನಾಲ್ಕು ಮಂದಿ ಹೆಬ್ಬೆಟ್ಟನ್ನು ಸ್ವೀಕರಿಸುವುದೇ ಹೆಚ್ಚು. ಉಳಿದಂತೆ ಸರ್ವರ್‌ ಸಂಪೂರ್ಣವಾಗಿ ಸ್ಥಗಿತಗೊಂಡಿರುತ್ತದೆ. ಪಡಿತರ ಪಡೆಯಲು ಸಿದ್ಧರಾಗಿ ಬರುವವರು ಸರ್ವರ್‌ ಇಲ್ಲದಿರುವುದನ್ನು ತಿಳಿದು ನಿರಾಸೆಯಿಂದ ವಾಪಸ್‌ ತೆರಳುತ್ತಿದ್ದಾರೆ. ಪ್ರತಿ ತಿಂಗಳ ಮೊದಲ ವಾರದಲ್ಲಿ ಪಡಿತರದಾರರ ಹೆಬ್ಬೆಟ್ಟು ಪಡೆದು ನಂತರ ಪದಾರ್ಥಗಳನ್ನು ನೀಡಿ ಮುಗಿಸಬೇಕು. ಆದರೆ ಜನವರಿ ತಿಂಗಳ ಪಡಿತರವನ್ನು ಹದಿನೈದು ದಿನಗಳಾದರೂ ಕೊಡಲು ಸಾಧ್ಯವಾಗಿಲ್ಲ.

ತಾಲೂಕಿನಲ್ಲಿ ಅಂತ್ಯೋದಯ-12159, ಬಿಪಿಎಲ್‌-60397, 819-ಎಪಿಎಲ್‌ ಕಾರ್ಡ್‌ ಒಟ್ಟು 73,375 ಫಲಾನುಭವಿಗಳಿದ್ದಾರೆ. ಪಟ್ಟಣದಲ್ಲಿ-9, ಗ್ರಾಮಾಂತರ ಪ್ರದೇಶದಲ್ಲಿ 90 ಸೇರಿ ಒಟ್ಟು 99 ನ್ಯಾಯ ಬೆಲೆ ಅಂಗಡಿಗಳಿವೆ. ಬಯೋಮೆಟ್ರಿಕ್‌ ಯಂತ್ರ ಅರ್ಹ ಪಡಿತರದಾರರ ಹೆಬ್ಬೆಟ್ಟು ಸ್ವೀಕರಿಸುವಲ್ಲಿ ವಿಫಲವಾಗುತ್ತಿದೆ. ಇದು ನ್ಯಾಯಬೆಲೆ ಅಂಗಡಿಯವರು ಹಾಗೂ ಪಡಿತರ ಚೀಟಿದಾರರನ್ನು ಬೆಸ್ತು ಬೀಳುವಂತೆ ಮಾಡಿದೆ. ಅಲ್ಲದೇ ನ್ಯಾಯಬೆಲೆ ಅಂಗಡಿ ಮಾಲೀಕರಿಗೂ ತೊಂದರೆ ಉಂಟಾಗಿದೆ. ಪಡಿತರ ಪದಾರ್ಥಗಳನ್ನೇ ಜೀವನಾಧಾರ ಮಾಡಿಕೊಂಡಿರುವವರು ಕೆಲಸ ಬಿಟ್ಟು ದಿನಗಟ್ಟಲೆ ನ್ಯಾಯಬೆಲೆ ಅಂಗಡಿಗಳ ಎದುರು ಕಾದು ಕೂರುತ್ತಿದ್ದಾರೆ.

ದಿನವಿಡೀ ಕಾಯ್ದರೂ ಸರ್ವರ್‌ ಸರಿ ಹೋಗದೆ ವಾಪಸ್‌ ತೆರಳಿರುವ ನಿದರ್ಶನಗಳೂ ಇವೆ. ಪಡಿತರ ಚೀಟಿದಾರರಿಂದ ಅವರ ಫೋನ್‌ ನಂಬರ್‌ಗಳನ್ನು ಪಡೆದು ಸರ್ವರ್‌ ಸಿಕ್ಕ ಸಮಯದಲ್ಲಿ ಅವರಿಗೆ ದೂರವಾಣಿ ಕರೆ ಮಾಡಿ ಕರೆಸಿಕೊಂಡು ಹೆಬ್ಬೆಟ್ಟನ್ನು ಬಯೋಮೆಟ್ರಿಕ್‌ ಯಂತ್ರದಲ್ಲಿ ದಾಖಲಿಸಿಕೊಳ್ಳುತ್ತಿದ್ದಾರೆ. ಆದರೆ ಬಹುತೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಬ್ಬೆಟ್ಟು ದಾಖಲಾಗದೆ ಅರ್ಹರಿಗೆ ಪಡಿತರ ಪದಾರ್ಥಗಳನ್ನು ನೀಡುತ್ತಿಲ್ಲ. ಇದರಿಂದ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಿಗೆ ನಿತ್ಯವೂ ಅಲೆದಾಡುವ ಸ್ಥಿತಿ ಸಾಮಾನ್ಯವಾಗಿದೆ.

ಕೆಲವು ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 8 ಗಂಟೆಗೆ ಬಾಗಿಲು ತೆರೆದರೆ, ಬಹುತೇಕ ಅಂಗಡಿಗಳು ಬೆಳಗ್ಗೆ 10.30ರ ನಂತರ ತೆರೆಯುತ್ತಿವೆ. ಕೆಲವೊಮ್ಮೆ 8 ಗಂಟೆಯಿಂದ 10.30ರವರೆಗೆ ಸರ್ವರ್‌
ಸಿಗುವ ಸಾಧ್ಯತೆಯಿದೆ. ಅದನ್ನು ತಿಳಿದು ಎಲ್ಲ ಕೆಲಸ ಬಿಟ್ಟು ಪಡಿತರ ಚೀಟಿ ಕುಟುಂಬದ ಸದಸ್ಯರು ಬಂದರೂ ಆ ವೇಳೆಯಲ್ಲೂ ಸ್ಥಗಿತಗೊಂಡಿರುವುದು ಪಡಿತರದಾರರನ್ನು ಕಂಗೆಡಿಸುತ್ತಿದೆ. ಇನ್ನು ಬೆಳಗ್ಗೆ 10.30ರಿಂದ ಸಂಜೆ 7 ಗಂಟೆಯವರೆಗೆ ಸರ್ವರ್‌ ಸಿಗುವುದೇ ಇಲ್ಲ. ನ್ಯಾಯ ಬೆಲೆ ಅಂಗಡಿ ಮಾಲೀಕರು ಪಡಿತರ ಪದಾರ್ಥಗಳನ್ನು ನೀಡಲಾಗದೆ ಅಸಹಾಯಕತೆ ಪ್ರದರ್ಶಿಸುವುದು ಸಾಮಾನ್ಯವಾಗಿದೆ. ಕೂಡಲೇ ಸರ್ವರ್‌ ಸಮಸ್ಯೆ ಬಗೆಹರಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಪಡಿತರ ಫಲಾನುಭವಿಗಳು ಒತ್ತಾಯಿಸಿದ್ದಾರೆ.

ಸರ್ವರ್‌ ಸಮಸ್ಯೆ ಕೇಳಿ ಬಂದ ಹಿನ್ನೆಲೆಯಲ್ಲಿ ನಾನು ಶುಕ್ರವಾರ
ಬಾಗಳಿ, ಕೂಲಹಳ್ಳಿ, ಶೃಂಗಾರದೋಟ ಗ್ರಾಮಗಳ ನ್ಯಾಯ ಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ದೊಡ್ಡ ಸಮಸ್ಯೆ ಕಂಡು ಬಂದಿಲ್ಲ. ನ್ಯಾಯ ಬೆಲೆ ಅಂಗಡಿಗಳಲ್ಲಿ ಮೊಬೈಲ್‌ ಡಾಟಾ ಸರಿಯಾಗಿ ಹಾಕಿಸದಿರುವುದು ಮತ್ತು ಸಿಗ್ನಲ್‌ ಸಿಗದಿರುವ ಕಡೆಗಳಲ್ಲಿ ತೊಂದರೆ ಆಗಿದೆ. ಆ. 21ರಿಂದ ಪಡಿತರ ಪಡೆಯಲು ಮತ್ತು ಹೆಬ್ಬೆಟ್ಟು ನೀಡಲು ಪ್ರತ್ಯೇಕ ಸಾಪ್ಟವೇರ್‌ ಕಾರ್ಯನಿರ್ವಹಿಸಲಿದ್ದು, ಸಮಸ್ಯೆ ಸಂಪೂರ್ಣ ಬಗೆಹರಿಯಲಿದೆ. ಸಂಜಯ್‌ ಬಾಗೇವಾಡಿ,
ಆಹಾರ ಶಿರಸ್ತೇದಾರರು

ಎಸ್‌.ಎನ್‌.ಕುಮಾರ್‌ ಪುಣಬಗಟ್ಟಿ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.