ಕಾರ್ಮಿಕರಿಗೆ ಕ್ವಾರಂಟೈನ್ನಿಂದ ಬಿಡುಗಡೆ
ಕ್ವಾರಂಟೈನ್ಗೆ ಒಳಗಾಗಿದ್ದ 71 ವಲಸೆ ಕಾರ್ಮಿಕರು
Team Udayavani, Apr 25, 2020, 12:36 PM IST
ಹರಪನಹಳ್ಳಿ: ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದ ವಲಸೆ ಕಾರ್ಮಿಕರನ್ನು ಶಾಸಕ ಜಿ. ಕರುಣಾಕರರೆಡ್ಡಿ ನೇತೃತ್ವದಲ್ಲಿ ಬಿಡುಗಡೆಗೊಳಿಸಿದರು.
ಹರಪನಹಳ್ಳಿ: ವಿವಿಧ ಜಿಲ್ಲೆಗಳಲ್ಲಿ ಕೆಲಸಕ್ಕೆ ತೆರಳಿ ಮರಳಿ ತಾಲೂಕಿಗೆ ಆಗಮಿಸಿ ಕೊರೊನಾ ಲಾಕ್ಡೌನ್ ಗೆ ಸಿಲುಕಿ ಕ್ವಾರಂಟೈನ್ ಒಳಗಾಗಿದ್ದ 71 ಜನ ವಲಸೆ ಕಾರ್ಮಿಕರನ್ನು ಶುಕ್ರವಾರ ಶಾಸಕ ಜಿ. ಕರುಣಾಕರರೆಡ್ಡಿ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು.
ತಾಲೂಕಿನ ಮಾಚಿಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ನಿರಾಶ್ರಿತರ ಕೇಂದ್ರಕ್ಕೆ ಶಾಸಕರು ಭೇಟಿ ನೀಡಿ ಕ್ವಾರಂಟೈನ್ ನಲ್ಲಿರುವವರ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕ್ವಾರಂಟೈನ್ ಅವಧಿ ಮುಗಿದ ಕಾರ್ಮಿಕರನ್ನು ಬಿಡುಗಡೆಗೊಳಿಸಲಾಯಿತು. ತಮ್ಮ ತಮ್ಮ ಗ್ರಾಮಗಳಿಗೆ ಹೋಗಿ ಕೊರೊನಾ ಸೋಂಕು ತಗುಲದಂತೆ ಆರೋಗ್ಯ ಕಾಪಾಡಿಕೊಳ್ಳಬೇಕು. ಹಾಗೆಯೇ ಕೃಷಿ ಚಟುವಟಿಕೆ ಕೆಲಸ ಕಾರ್ಯಗಳನ್ನು ನಿಯಂತ್ರಿಸಿಕೊಳ್ಳಿ ಎಂದು ಕಾರ್ಮಿಕರಿಗೆ ಸಲಹೆ ನೀಡಿದರು.
ಕ್ವಾರಂಟೈನ್ನಲ್ಲಿರುವ ಅಂತರ ರಾಜ್ಯ ಮತ್ತು ಅಂತರ್ ಜಿಲ್ಲೆಗೆ ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಅವರನ್ನು ಕೂಡ ಅವರ ಗ್ರಾಮಕ್ಕೆ ಹೋಗುವುದಕ್ಕೆ ಅವಕಾಶ ನೀಡುತ್ತೇವೆ. ಹರಪನಹಳ್ಳಿ ತಾಲೂಕಿನಿಂದ ಬೇರೆ ಜಿಲ್ಲೆಗಳಿಗೆ ವಲಸೆ ಹೋಗಿರುವ ಕಾರ್ಮಿಕರನ್ನು ಕರೆ ತರಲು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಸಂಪರ್ಕ ಮಾಡಿ ವಲಸೆ ಹೋಗಿ ಕ್ವಾರಂಟೈನ್ನಲ್ಲಿರುವ ಕಾರ್ಮಿಕರನ್ನು ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕೆ.ವಿ.ಪ್ರಸನ್ನಕುಮಾರ್, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಕೆ. ಕುಮಾರ್, ಪಿಎಸ್ಐ ಸಿ.ಪ್ರಕಾಶ್, ಬಿಜೆಪಿ ತಾಲೂಕು ಅಧ್ಯಕ್ಷ ಸತ್ತೂರು ಹಾಲೇಶ್, ತಾಪಂ ಉಪಾಧ್ಯಕ್ಷ ಎಲ್. ಮಂಜ್ಯಾನಾಯ್ಕ, ಮುಖಂಡರಾದ ಎಂ.ಪಿ.ನಾಯ್ಕ, ಆರ್. ಲೋಕೇಶ್, ಸಣ್ಣಹಾಲಪ್ಪ, ಬಾಗಳಿ ಕೋಟ್ರಪ್ಪ, ಕರೇಗೌಡ, ಎಂ. ಮಲ್ಲೇಶ್, ರಾಘವೇಂದ್ರಶೆಟ್ಟಿ, ಯು.ಪಿ.ನಾಗರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ