ಡೊನೇಷನ್ ಹಾವಳಿ ವಿರುದ್ಧ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ : ಕಾರ್ಯಕರ್ತರ ಬಂಧನ, ಬಿಡುಗಡೆ
Team Udayavani, Jun 9, 2022, 4:13 PM IST
ಹರಪನಹಳ್ಳಿ : ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿ ಖಂಡಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದ್ಯೊಯ್ದ ಘಟನೆ ಗುರುವಾರ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಎಸ್ಎಸ್ಎಚ್ ಜೈನ್ ಪಿಯು ಕಾಲೇಜಿನ ಆಡಳಿತ ಮಂಡಳಿಯು ಸರ್ಕಾರದ ಮಾನದಂಡಗಳನ್ನು ಮೀರಿ ವಿದ್ಯಾಥಿಗಳಿಂದ ಆಕ್ರಮವಾಗಿ ಹೆಚ್ಚುವರಿ ಹಣ ಪಡೆಂಯಲಾಗುತ್ತಿದೆ ಎಂದು ಆರೋಪಿಸಿ ಎಸ್ಎಫ್ಐ ಮತ್ತು ಎಐಎಸ್ಎಫ್ ಸಂಘಟನೆ ಕಾರ್ಯಕರ್ತರು ಕಾಲೇಜ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು, ಅ ಸಂದರ್ಭದಲ್ಲಿ ಪ್ರಾಂಶುಪಾಲರು ಕಾಲೇಜಿನಲ್ಲಿ ಇಲ್ಲ ಎಂದು ಅಲ್ಲಿನ ಸಿಬ್ಬಂದಿಯವರು ತಿಳಿಸಿದಾಗ ಆಕ್ರೋಶಭರಿತರಾದ ಕಾರ್ಯಕರ್ತರು ಹರಿಹರ-ಹೊಸಪೇಟೆ ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟಸಲು ಮುಂದಾದರು ಅ ವೇಳೆ ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಪ್ರಕಾಶ್ ಏಕಾಏಕಿ ರಸ್ತೆ ಬಂದ್ ಮಾಡಿ ಪ್ರತಿಭಟಿಸುವುದಕ್ಕೆ ಆವಕಾಶ ನೀಡುವುದಿಲ್ಲ ಎಂದು ಹೇಳಿದರು.
ಈ ವೇಳೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆಗೆ ಮುಂದಾದ ವೆಂಕಟೇಶ್ ಮತ್ತು ರಮೇಶ್ ಅವರನ್ನು ಪೊಲೀಸರು ಬಲವಂತವಾಗಿ ಬಂಧಿಸಿ ಠಾಣೆಗೆ ಕರೆದ್ಯೊಯ್ದು ವಿಚಾರಿಸಿ ನಂತರ ಬಿಡುಗಡೆಗೊಳಿಸಿದರು.
ಇದನ್ನೂ ಓದಿ : ಓಟಿಟಿ ಬಿಡುಗಡೆಗೆ ಸಿದ್ದವಾದ ಸಿಂಪಲ್ ಸುನಿ ನಿರ್ದೇಶನದ ‘ಅವತಾರ ಪುರುಷ’