ಪಂಚಮಸಾಲಿ ಶ್ರೀಗಳ ಪಾದಯಾತ್ರೆ

ಹರಜಾತ್ರೆಗೆ 78.37 ಲಕ್ಷ ರೂ. ಸಂಗ್ರಹಪೀಠದಿಂದ ಕೊಟ್ಟೂರಿಗೆ ಯಾತ್ರೆ

Team Udayavani, Feb 12, 2020, 4:59 PM IST

12-February-27

ಹರಪನಹಳ್ಳಿ: ರಥೋತ್ಸವ ಅಂಗವಾಗಿ ಪ್ರತಿ ವರ್ಷ ಹರಿಹರ ಪಂಚಮಸಾಲಿ ಪೀಠದಿಂದ ಕೊಟ್ಟೂರು ಬಸವೇಶ್ವರ ದೇವಾಲಯದವರೆಗೆ ನಾವು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಹರಿಹರದ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ತಿಳಿಸಿದರು.

ಹರಿಹರದ ಪಂಚಮಸಾಲಿ ಪೀಠದಲ್ಲಿ ಹರಜಾತ್ರೆ ಮತ್ತು ಬೆಳ್ಳಿ ಬೆಡಗು ಕಾರ್ಯಕ್ರಮ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಪಟ್ಟಣದ ಎಡಿಬಿ ಕಾಲೇಜು ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಕೊಟ್ಟೂರು ಗ್ರಾಮದಲ್ಲಿ ಜೀವಂತ ಸಮಾಧಿಯಾಗಿರುವ ಬಸವೇಶ್ವರ ಪ್ರಾಣ ಪಕ್ಷಿ ಹಾರಿ ಹೋಗಿಲ್ಲ. ಧಾನ್ಯದಲ್ಲಿ ಲೀನರಾಗಿದ್ದಾರೆ. ಹೀಗಾಗಿ ಪವಿತ್ರ ಸ್ಥಳಗಳು ದಿನದಿಂದ ದಿನಕ್ಕೆ ಉನ್ನತ ಸ್ಥಾನಕ್ಕೆ ಹೋಗುತ್ತಿವೆ. ಪ್ರತಿ ವರ್ಷ ಹರ ಜಾತ್ರೆ ನಂತರ ಪೀಠದಿಂದ ಕೊಟ್ಟೂರಗೆ ಪಾದಯಾತ್ರೆ ಮಾಡಲು ನಿರ್ಧರಿಸಲಾಗಿದೆ. ಫೆ.15ರಿಂದ ಪಾದಯಾತ್ರೆ ಆರಂಭಗೊಂಡು ಫೆ.18ರಂದು ರಾತ್ರಿ ಅಂತ್ಯಗೊಳ್ಳಲಿದೆ. ಪ್ರತಿ ದಿನ ಬೆಳಿಗ್ಗೆ 4ರಿಂದ 8
ಗಂಟೆ, ಸಂಜೆ 4ರಿಂದ ರಾತ್ರಿ 8ರವರೆಗೆ ನಡೆಯಲಿದೆ.

ಹರಿಹರ, ಅಮರಾವತಿ, ಕೋಡಿಹಳ್ಳಿ, ಮಾಗನಹಳ್ಳಿ, ಕಂಚಿಕೇರಿ, ತೌವಡೂರು, ಅರಸೀಕೆರೆ, ಮತ್ತಿಹಳ್ಳಿ ಮಾರ್ಗವಾಗಿ ಕೊಟ್ಟೂರು ತಲುಪಲಾಗುವುದು. ಎಲ್ಲ ಸಮುದಾಯದವರು ಹೆಚ್ಚಿನ ಮಟ್ಟದಲ್ಲಿ ಭಾಗವಹಿಸಬೇಕು ಎಂದು ವಿನಂತಿಸಿದರು.

ಧಾರ್ಮಿಕ ವಿಷಯ ಬಂದಾಗ ಕಾಯಕ, ದಾಸೋಹ, ಶಿವಯೋಗ ಅನುಸರಿಸುತ್ತೇವೆ. ಆದರೆ ಮೀಸಲಾತಿ ಮತ್ತು ಸೌಲಭ್ಯ ಎಂದಾಗ ನಾವು ಪಕ್ಕಾ ಪಂಚಮಸಾಲಿ ಶ್ರೀಗಳಿರುತ್ತೇವೆ. ಸದ್ಯ ಮಠವು
12 ವರ್ಷದ ಬಾಲಕನಿದ್ದಂತೆ. ಅದಕ್ಕೆ ಪೋಷಣೆ ಮಾಡಬೇಕು. ನಿತ್ಯ ದಾಸೋಹ ಹಾಗೂ ಕಟ್ಟಡ ನಿಧಿಗೆ ಸಹಕಾರ ನೀಡಬೇಕು.

ಹರಜಾತ್ರೆಗೆ ಒಟ್ಟು 78.37 ಲಕ್ಷ ರೂ.ಸಂಗ್ರಹವಾಗಿದ್ದು, ಅಷ್ಟೇ ಖರ್ಚಾಗಿದೆ. ಹರಪನಹಳ್ಳಿಯಿಂದ ಅತಿ ಹೆಚ್ಚು 18.31 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಇದಲ್ಲದೇ ಆರು ತಿಂಗಳು ದಾಸೋಹಕ್ಕೆ ಬೇಕಾಗುವಷ್ಟು ಆಹಾರ ಧಾನ್ಯಗಳು ಬಂದಿವೆ ಎಂದು ಮಾಹಿತಿ ನೀಡಿದರು.

ತಾಲೂಕು ಘಟಕದ ಅಧ್ಯಕ್ಷ ಪಾಟೀಲ್‌ ಬೆಟ್ಟನಗೌಡ, ನಿತ್ಯ ದಾಸೋಹಕ್ಕೆ ಇನ್ನೂ ಐದಾರು ಹಳ್ಳಿಗಳಲ್ಲಿ ದೇಣಿಗೆ ಬರಬೇಕಿದೆ. ಹರಜಾತ್ರೆಗೆ ಎಲ್ಲ ಜನಾಂಗದವರು ದೇಣಿಗೆ ಕೊಟ್ಟಿದ್ದಾರೆ. ಪೀಠದಲ್ಲಿ ನಡೆದ ಕುಂಭಮೇಳದಲ್ಲಿ ತಾಲೂಕಿನ ಮಹಿಳೆಯರೇ ಹೆಚ್ಚು ಭಾಗವಹಿಸಿ ಯಶಸ್ವಿಗೆ ಕಾರಣವಾಗಿದ್ದಾರೆ. ಪಂಚಮಸಾಲಿ ಸಮುದಾಯ ಭವನ ನಿರ್ಮಿಸಲು ಹಿಂದಿನ ಸರ್ಕಾರದಲ್ಲಿ 25 ಲಕ್ಷ ರೂ. ಮಂಜೂರಾಗಿದ್ದು, 6 ಲಕ್ಷ ಹಣವೂ ಬಿಡಗಡೆಯಾಗಿದೆ. ಸುಮಾರು ಮೂರುವರೆ ಕೋಟಿ ರೂ ಅಂದಾಜು ವೆಚ್ಚವಾಗಲಿದ್ದು, ಈ ಬಗ್ಗೆ ಪೀಠದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಹಿಳಾ ಘಟಕ ಅಧ್ಯಕ್ಷೆ ಶ್ರೀಮತಿ, ಸಮಾಜದ ಖಂಜಾಚಿ ಶಶಿಧರ ಪೂಜಾರ್‌, ಮುಖಂಡರಾದ ಆರುಂಡಿ ನಾಗರಾಜ್‌, ಎಂ.ಟಿ. ಬಸವನಗೌಡ, ಗುರುಬಸವಗೌಡ, ತಲವಾಗಲು ಜಿ.ಕೆ. ಮಲ್ಲಿಕಾರ್ಜುನ, ಪ್ರಾಂಶುಪಾಲ ಮಲ್ಲಿಕಾರ್ಜುನಗೌಡ, ಓಂಕಾರಗೌಡ, ಸಿದ್ದಲಿಂಗಪ್ಪ, ಪಂಪನಗೌಡ, ವಿರುಪಾಕ್ಷಪ್ಪ ಇತರರಿದ್ದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.