ಸಂತ್ರಸ್ತರಿಗೆ ಬಿಜೆಪಿಯಿಂದ ದಾಸೋಹ
Team Udayavani, Apr 18, 2020, 2:10 PM IST
ಹರಿಹರ: ಬಿಜೆಪಿ ವತಿಯಿಂದ ಆಯೋಜಿಸಿದ್ದ ದಾಸೋಹ ಕಾರ್ಯಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ ಚಾಲನೆ ನೀಡಿದರು.
ಹರಿಹರ: ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾಗಿರುವ ನಗರದ ಹೊರವಲಯದ ಗಂಗಾನಗರ ಮತ್ತು ದೇವಸ್ಥಾನ ರಸ್ತೆಯ ಕೊಳಚೆ ಪ್ರದೇಶದ ಬಡವರಿಗೆ ಶುಕ್ತವಾರ ಬಿಜೆಪಿ ವತಿಯಿಂದ ದಾಸೋಹ ನಡೆಯಿತು.
ದಾಸೋಹ ಕಾರ್ಯಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿ ಮಾತನಾಡಿ, ಪಕ್ಷದ ಕಾರ್ಯಕರ್ತರೆಲ್ಲಾ ಸೇರಿ ಪ್ರಾಯೋಗಿಕವಾಗಿ ಈ ಕಾರ್ಯ ಕೈಗೊಂಡಿದ್ದಾರೆ. ಮುಂದೆ ಇದೆ ರೀತಿ ಊಟದ ವ್ಯವಸ್ಥೆ ಮಾಡಬೇಕೆ ಅಥವಾ ಮನೆ ಮನೆಗೆ ಪ್ಯಾಕೆಟ್ನಲ್ಲಿ ಊಟ ಅಥವಾ ಆಹಾರ ಪದಾರ್ಥಗಳ ಕಿಟ್ ನೀಡಬೇಕೇ ಎಂದು ನಿರ್ಧರಿಸಲಾಗುವುದು ಎಂದರು.
ಈಗಾಗಲೇ ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ 5.4 ಲಕ್ಷ ರೂ.ಗಳನ್ನು ಜಿಲ್ಲಾಧಿಕಾರಿ ಖಾತೆಗೆ ಜಮಾ ಮಾಡಿದ್ದೇನೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು. ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ಪೂರೈಸುವ ಯಾವುದೇ ಯೋಜನೆಯಿಲ್ಲ, ಆದರೆ ಪರಸ್ಥಳದವರು ಯಾರೇ ಇದ್ದರೂ ಅವರಿಗೆ ಊಟ ಇಲ್ಲವೆ ಆಹಾರ ಪದಾರ್ಥಗಳನ್ನು ತಾಲ್ಲೂಕು ಆಡಳಿತದಿಂದ ಒದಗಿಸಲಾಗುವುದು. ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮನೆಯಲ್ಲಿಯೇ ಇದ್ದು ಕೋವಿಡ್ ಮಾರಿಯನ್ನು ಹಿಮ್ಮೆಟ್ಟಿಸಲು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಕೋರಿದರು.
ಮಾಜಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ಸಿಪಿಐ ಶಿವಪ್ರಸಾದ್, ಪೌರಾಯುಕ್ತೆ ಎಸ್. ಲಕ್ಷ್ಮೀ, ಪಿಎಸ್ಐಗಳಾದ ರವಿಕುಮಾರ್, ಶೈಲಶ್ರೀ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್