ಕುಷ್ಠರೋಗ ನಿವಾರಣೆಗೆ ಮೌಡ್ಯವೇ ಅಡ್ಡಿ

ಕಂದಾಚಾರದ ಮೊರೆ ಹೋಗುವ ಜನ ವೈಜ್ಞಾನಿಕ ಚಿಕಿತ್ಸೆಗೆ ಮುಂದಾಗುತ್ತಿಲ್ಲಕುಷ್ಠರೋಗವನ್ನು ಸಂಪೂರ್ಣ ಗುಣಪಡಿಸಬಹುದು

Team Udayavani, Feb 1, 2020, 5:02 PM IST

Feburary-26

ಹರಿಹರ: ಜನರಲ್ಲಿ ಮೌಡ್ಯತೆಯ ಮನೋಭಾವ ಇನ್ನೂ ದಟ್ಟವಾಗಿರುವುದರಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ನಿವಾರಣೆ ಮಾಡಲಾಗುತ್ತಿಲ್ಲ ಎಂದು ಜಿಲ್ಲಾ ಕುಷ್ಠರೋಗ ನಿವಾರಣಾಧಿ ಕಾರಿ ಡಾ| ಎ.ಮುರುಳಿಧರ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ನಗರದ ಟಿಎಚ್‌ಒ ಮುಂಭಾಗ ಆಯೋಜಿಸಿದ್ದ ಸ್ಪರ್ಶ್‌ ಕುಷ್ಠರೋಗ ಅರಿವು ಆಂದೋಲನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಹುತೇಕರು ಕುಷ್ಠರೋಗ ನಿವಾರಣೆಗೆ ಮೂಢನಂಬಿಕೆಗಳ ಮೊರೆ ಹೋಗುತ್ತಿದ್ದು, ವೈಜ್ಞಾನಿಕ ಚಿಕಿತ್ಸೆಗೆ ಮುಂದಾಗುತ್ತಿಲ್ಲ. ಇದರಿಂದ ರೋಗ ನಿವಾರಣೆ ಕಷ್ಟಸಾಧ್ಯವಾಗುತ್ತಿದೆ ಎಂದರು.

ಜಿಲ್ಲೆಯನ್ನು ಕುಷ್ಠರೋಗ ಮುಕ್ತವಾಗಿಸಲು ಸರ್ವ ಪ್ರಯತ್ನ ಮಾಡಲಾಗುತ್ತಿದೆ. ಕುಷ್ಠರೋಗದ ವಿರುದ್ಧ ಕೊನೆಯ ಯುದ್ಧ ಎಂಬ ಘೋಷ ವಾಕ್ಯದೊಂದಿಗೆ ಜ.30ರಿಂದ ಫೆ.13ರವರೆಗೆ ರೋಗ ಅರಿವು ಆಂದೋಲನ ಆಯೋಜಿಸಲಾಗಿದೆ ಎಂದರು. ಮಹತ್ಮಾ ಗಾಂ ಧೀಜಿ ದೇಶವನ್ನು ಕುಷ್ಠ ಮುಕ್ತವಾಗಿಸುವ ಕನಸು ಹೊಂದಿದ್ದರು. ತದನಂತರ 7-8 ದಶಕಗಳೇ ಕಳೆದರೂ ಗಾಂ ಧೀಜಿ ಕನಸನ್ನು ನನಸು ಮಾಡಲಾಗಿಲ್ಲ. ಕಾಯಿಲೆ ಪೀಡಿತರಲ್ಲಿರುವ ಮೌಡ್ಯ ಹೋಗಲಾಡಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕಿದೆ. ಆಂದೋಲನದಲ್ಲಿ ಇಲಾಖೆಯ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಕೋರಿದರು.

ಆಂದೋಲನ ಉದ್ಘಾಟಿಸಿದ ತಹಶೀಲ್ದಾರ್‌ ಕೆ.ಬಿ.ರಾಮಚಂದ್ರಪ್ಪ ಮಾತನಾಡಿ, ಇತರೆ
ಕಾಯಿಲೆಗಳಂತೆಯೆ ಕುಷ್ಠರೋಗವೂ ವೈರಸ್‌ ಮೂಲಕ ಹರಡುವ ಒಂದು ಕಾಯಿಲೆಯಾಗಿದೆ. ಇದು ಸಂಪೂರ್ಣ ನಿವಾರಣೆ ಮಾಡಬಹುದಾಗಿದೆ. ಆದರೆ ರೋಗಿ ನಿಯಮಿತವಾಗಿ ಪೂರ್ಣ ಚಿಕಿತ್ಸೆ ಪಡೆಯಬೇಕು. ಈ ಕಾಯಿಲೆಗೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದೆ ಎಂದರು.

ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಆರೋಗ್ಯ ಸಹಾಯಕ ಎಂ.ವಿ.ಹೊರಕೇರಿ ಮಾತನಾಡಿ, ಚರ್ಮದ ಮೇಲ್ಭಾಗದಲ್ಲಿ ಮಚ್ಛೆಗಳಿದ್ದರೆ, ದೇಹದ ಯಾವುದೇ ಭಾಗದಲ್ಲಿ ತಿಳಿ ಬಿಳಿ ಅಥವಾ ತಾಮ್ರ ಬಣ್ಣದ ಹಲವಾರು ಮಚ್ಛೆಗಳಿದ್ದರೆ ಅದು ಕುಷ್ಠರೋಗದ ಆರಂಭಿಕ ಲಕ್ಷಣವೆಂದು ಪರಿಗಣಿಸಿ ಪರೀಕ್ಷಿಸಬೇಕೆಂದರು.

ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಹಾಗೂ ಹಿರಿಯ ಆರೋಗ್ಯ ಸಹಾಯಕ ಎಂ.ಉಮ್ಮಣ್ಣ ಮಾತನಾಡಿ, ದೇಹದ ಮೇಲಿನ ಮಚ್ಛೆಗಳನ್ನು ನಿರ್ಲಕ್ಷಿಸದೆ, ಗುಪ್ತವಾಗಿರಿಸದೆ ವೈದ್ಯರಲ್ಲಿ ಪರೀಕ್ಷಿಸಬೇಕು. ರೋಗದ ಆರಂಭಿಕ ಹಂತದಲ್ಲಿ ಬಹುವಿಧ ಔಷ  ಚಿಕಿತ್ಸೆ (ಎಂಡಿಟಿ)ಯಿಂದ ಗುಣಪಡಿಸಬಹುದು ಹಾಗೂ ದೇಹ ವಿಕಲತೆಯನ್ನು ತಡೆಗಟ್ಟಬಹುದು. ಇದಕ್ಕೆ 6ರಿಂದ 12 ತಿಂಗಳವರೆಗೆ ಮನೆಯಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.
ಬಿಇಒ ಯು.ಬಸವರಾಜಪ್ಪ, ಟಿಎಚ್‌ಒ ಡಾ| ಚಂದ್ರಮೋಹನ್‌, ವೈದ್ಯಾಧಿ ಕಾರಿ ನಟರಾಜ, ಡಾ| ರೇಣುಕಾರಾಧ್ಯ, ಸಿಡಿಪಿಒ ಜಫ್ರುನ್ನಿಸಾ, ಜಿಲ್ಲಾ ಕುಷ್ಠರೋಗ ನಿವಾರಣಾಧಿ ಕಾರಿ ಕಚೇರಿ ಸಿಬ್ಬಂದಿಗಳಾದ ರವಿಶಂಕರ, ಆಂಜನೇಯ, ಸಂದೀಪ್‌, ಡಾ| ಶಶಿಕಲಾ, ಡಾ| ಲಕ್ಷ್ಮೀ, ಡಾ| ಖಾದರ್‌, ಡಾ| ಪ್ರಶಾಂತ್‌, ಆರೋಗ್ಯ ಶಿಕ್ಷಣಾಧಿಕಾರಿ ಯಶೋದಮ್ಮ, ಹಿರಿಯ, ಕಿರಿಯ ಆರೋಗ್ಯಾಧಿಕಾರಿ, ಆಶಾ ಕಾರ್ಯಕರ್ತೆಯರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.