ಹಣ ಕೇಳಿದ್ರೆ ಲೈಸೆನ್ಸ್ ರದ್ದು: ರಾಮಪ್ಪ
Team Udayavani, Apr 12, 2020, 5:50 PM IST
ಹರಿಹರ: ಮಿನಿ ವಿಧಾನಸೌಧದಲ್ಲಿ ಶನಿವಾರ ಶಾಸಕ ಎಸ್.ರಾಮಪ್ಪ ಅಧಿಕಾರಿಗಳ ಸಭೆ ನಡೆಸಿದರು.
ಹರಿಹರ: ತಾಲೂಕಿನ ಯಾವುದೇ ನ್ಯಾಯಬೆಲೆ ಅಂಗಡಿಯವರು ಪಡಿತರ ನೀಡಲು ಹಣ ಕೇಳಿದರೆ, ತೂಕದಲ್ಲಿ ವ್ಯತ್ಯಾಸ ಮಾಡಿದರೆ, ನಿಗದಿಗಿಂತ ಕಡಿಮೆ ಆಹಾರ ಧಾನ್ಯ ವಿತರಿಸಿದರೆ ಅಂತಹ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಶಾಸಕ ಎಸ್.ರಾಮಪ್ಪ ಎಚ್ಚರಿಸಿದರು.
ನಗರದ ಮಿನಿ ವಿಧಾನಸೌಧದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಜನತೆ ಲಾಕ್ ಡೌನ್ನಿಂದ ಸಂಕಟದಲ್ಲಿದ್ದಾಗ ಮಾಸಿಕ ಪಡಿತರ ವಿತರಿಸಲು 20ರಿಂದ 100 ರೂ.ವರೆಗೆ ಹಣ ಪಡೆಯುತ್ತಿರುವುದು ನ್ಯಾಯಬೆಲೆ ಅಂಗಡಿಯವರ ನಾಚಿಕೆಗೇಡಿನ ವರ್ತನೆಯಾಗಿದೆ ಎಂದರು. ಈಗಾಗಲೆ ತಾಲೂಕಿನಾದ್ಯಂತ ಸಾಕಷ್ಟು ದೂರುಗಳು ಬಂದಿವೆ, ಹಣ ಕೇಳುವ, ಅಕ್ಕಿ-ಗೋಧಿ ಕಡಿಮೆ ನೀಡುವುದು ಕಂಡುಬಂದರೆ ಅಂತ ಅಂಗಡಿಗಳ ಬಗ್ಗೆ ಸಾರ್ವಜನಿಕರು ದೂರವಾಣಿ ಮೂಲಕ ಗಮನಕ್ಕೆ ತಂದರೂ ಪರಿಶೀಲಿಸಿ, ಪರವಾನಗಿ ರದ್ದು ಪಡಿಸಲು ತಹಶೀಲ್ದಾರ್ ಮೂಲಕ ಡಿಸಿಗೆ ವರದಿ ಕಳಿಸುತ್ತೇನೆ. ಈ ವಿಷಯದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದರು.
ತಹಶೀಲ್ದಾರ್ ಕೆ.ಬಿ.ರಾಮಚಂದ್ರಪ್ಪ ಮಾತನಾಡಿ, ಆಹಾರ ಇಲಾಖೆಸಹಾಯವಾಣಿಗೂ ಈ ಕುರಿತು ದೂರುಗಳು ಬಂದಿದ್ದು, ಎಲ್ಲಾ ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗುವುದು. ಆಗಲೂ ಸುಧಾರಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದರು. ಪೌರಾಯುಕ್ತೆ ಎಸ್.ಲಕ್ಷ್ಮೀ, ಟಿಎಚ್ಒ ಡಾ| ಚಂದ್ರಮೋಹನ್, ಆಹಾರ ನಿರೀಕ್ಷಕರಾದ ನಜರುಲ್ಲಾ, ಬಸವರಾಜ್, ಹಿರಿಯ ಆರೋಗ್ಯ ನಿರೀಕ್ಷಕ ಎಂ.ವಿ.ಹೊರಕೇರಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಜಯ್ ಮಹಾಂತೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!