ತುಂಗಭದ್ರೆ ತಟದಲ್ಲಿ ಸಂಕ್ರಾಂತಿ ಸಂಭ್ರಮ-ಭೂರಿ ಭೋಜನ


Team Udayavani, Jan 17, 2020, 4:43 PM IST

17-January-19

ಹರಿಹರ: ಸಂಕ್ರಾಂತಿ ಹಬ್ಬದ ನಿಮಿತ್ತ ಬುಧವಾರ ನಗರದ ತುಂಗಭದ್ರಾ ನದಿ ದಡದಲ್ಲಿ ಸಾವಿರಾರು ಜನರು ಗಂಗಾಪೂಜೆ ನೆರವೇರಿಸಿ, ಸಂಭ್ರಮದ ಸಂಕ್ರಾಂತಿ ಆಚರಿಸಿದರು.

ಎತ್ತಿನ ಬಂಡಿ, ಟ್ರ್ಯಾಕ್ಟರ್‌, ಕಾರು, ಆಟೋ, ದ್ವಿಚಕ್ರವಾಹನಗಳಲ್ಲಿ ಜನರು ಕುಟುಂಬಸ್ಥರು, ಸ್ನೇಹಿತರೊಂದಿಗೆ ಬಂದು ನದಿ ದಡದಲ್ಲಿ ಜಮಾಯಿಸಿದ್ದರು. ನದಿಯ ಪಶ್ಚಿಮ ಭಾಗವಾದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ಎಂದಿನಂತೆ ಹೆಚ್ಚಿನ ಜನಸಂದಣಿ ಇತ್ತು. ಪೂರ್ವ ಭಾಗದ ವಾಟರ್‌ವರ್ಕ್ಸ್, ರೈಲ್ವೆ ಸೇತುವೆ, ರಾಘವೇಂದ್ರ ಮಠದ ಸಮೀಪವೂ ಜನರು ಸೇರಿದ್ದರು.

ವಿಶಿಷ್ಟ ಭಕ್ಷ್ಯ ಭೋಜನ: ಬಿರು ಬಿಸಿಲಿನ ಚುರುಕಿನಲ್ಲೂ ಮರಳಿನ ಮೇಲೆ ಜನರು ಗುಂಪು-ಗುಂಪಾಗಿ ಕುಳಿತು ಜೋಳ-ಸಜ್ಜೆಯ ಖಡಕ್‌ ರೊಟ್ಟಿ, ಬಿಸಿ ಚಪಾತಿ, ಮುಳಗಾಯಿ, ಬೆಂಡೆಕಾಯಿ, ಆಲೂಗಡ್ಡೆ, ಕಡ್ಲೆ, ಹೆಸರುಕಾಳು, ಬಟಾಣಿ, ಮಡಿಕೆ ಮತ್ತಿತರೆ ಪಲ್ಯಗಳು ಜೊತೆಗೆ
ಶೇಂಗಾ, ಎಳ್ಳು, ಕೊಬ್ಬರಿ, ಹಸಿಮೆಣಸು, ಕೆಂಪುಮೆಣಸು, ಕುರುಶಿಣಿ ಚಟ್ನಿಗಳು, ಅಲ್ಲದೇ ಬಿಳಿ ಅನ್ನ, ಚಿತ್ರಾನ್ನ, ಒಗ್ಗರಣೆ ಬುತ್ತಿ ಜೊತೆಗೆ, ಈರುಳ್ಳಿ, ಸಾಂಬಾರು, ಮೊಸರು, ಮಜ್ಜಿಗೆ ಒಳಗೊಂಡ ರುಚಿ ರುಚಿ ಊಟ ಸವಿದರು.

ಸ್ನಾನದ ಮಜ: ಕಳೆದ ಮೂರ್‍ನಾಲ್ಕು ವರ್ಷ ಸಂಕ್ರಾಂತಿ ವೇಳೆ ನದಿಯ ಒಡಲು ಬತ್ತಿರುತ್ತಿತ್ತು. ಪ್ರಸಕ್ತ ವರ್ಷ ನದಿಯಲ್ಲಿ ನೀರಿರುವ ಕಾರಣ ಯುವಕ-ಯುವತಿಯರು, ಕಿರಿಯರು-ಹಿರಿಯರೆಂಬ ಭೇದವಿಲ್ಲದೇ ನದಿ ನೀರಿನಲ್ಲಿ ಈಜಾಡಿ ಸ್ನಾನದ ಮಜಾ ಅನುಭವಿಸಿದರು.

ನೆರಳಿಗೆ ಡೇರೆ: ಅಯ್ಯಪ್ಪ ಸ್ವಾಮಿ ದೇವಾಲಯ, ರಾಘವೇಂದ್ರ ಮಠ, ಚಿತ್ರಾ ಟಾಕೀಸ್‌ ಹಿಂಭಾಗ, ರೈಲ್ವೆ ಸೇತುವೆ, ಹಳೆಯ ನೀರು ಸರಬರಾಜು ಕೇಂದ್ರದ ಆವರಣದಲ್ಲಿ ಜನರು ಬಿಸಿಲಿನ ಧಗೆಯಿಂದ ರಕ್ಷಿಸಿಕೊಳ್ಳಲು ಅಲ್ಲಲ್ಲಿ ಡೇರೆಗಳನ್ನು(ಟೆಂಟ್‌) ಹಾಕಿಕೊಂಡಿದ್ದರು. ಕೆಲವರು ತಮ್ಮ ವಾಹನಗಳನ್ನೇ ಸೂರ್ಯ ರಶ್ಮಿಗೆ ಅಡ್ಡ ನಿಲ್ಲಿಸಿ ನೆರಳು ಮಾಡಿಕೊಂಡಿದ್ದರು.

ಹರಿಹರ, ದಾವಣಗೆರೆ, ರಾಣೆಬೆನ್ನೂರು, ಹಾವೇರಿ, ಬ್ಯಾಡಗಿ ಇತರೆ ಭಾಗದಿಂದ ಜನರು ಆಗಮಿಸಿದ್ದರು. ತುಂಗ, ಭದ್ರಾ, ಹರಿದ್ರಾವತಿ ಹೀಗೆ ತ್ರಿವೇಣಿ ಸಂಗಮದ ಛಾಪು ಇಲ್ಲಿ ಹೆಚ್ಚಿನ ಜನರನ್ನು ಆಕರ್ಷಿಸುತ್ತದೆ. ಉಳಿದಂತೆ ನದಿ ಸಾಲಿನ ತಾಲೂಕಿನ ಗ್ರಾಮಗಳಾದ ಬಿಳಸನೂರು, ನಂದಿಗಾವಿ, ಚಿಕ್ಕಬಿದರಿ, ಸಾರಥಿ, ಗುತ್ತೂರು, ಹರ್ಲಾಪುರ, ಹಲಸಬಾಳು, ರಾಜನಹಳ್ಳಿ, ಎಳೆಹೊಳೆ, ಧೂಳೆಹೊಳೆ, ನಂದಿಗುಡಿ, ಉಕ್ಕಡಗಾತ್ರಿ, ಕೊಮಾರನಹಳ್ಳಿ ಹಾಗೂ ದೇವರಬೆಳೆಕೆರೆ, ಕೆರೆಯಂಗಳದಲ್ಲೂ ಜನ ಸಂಕ್ರಾಂತಿ ಆಚರಿಸಿದರು. ಕೊಮಾರನಹಳ್ಳಿ, ದೇವರಬೆಳೆಕೆರೆ, ಕೆರೆಯಂಗಳದಲ್ಲೂ ಜನ ಸಂಕ್ರಾಂತಿ ಸಂಭ್ರಮಿಸಿದರು. ಧೂಳೆಹೊಳೆಯಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಸಾಮೂಹಿಕ ಭೋಜನ ವ್ಯವಸ್ಥೆ ಮಾಡಿದ್ದರು.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.