ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆಗೈದ ಪತಿ
Team Udayavani, Sep 6, 2019, 4:52 PM IST
ಬಳ್ಳಾರಿ: ಮದ್ಯದ ಅಮಲಿನಲ್ಲಿದ್ದ ಪತಿ ಮಹಾಶಯ ಪಕ್ಕದಲ್ಲೇ ಮಲಗಿದ್ದ ಪತ್ನಿಯನ್ನೇ ಕೊಡಲಿಯಿಂದ ಕೊಲೆಗೈದ ಘಟನೆ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ವಡ್ಡಿನಹಳ್ಳಿ ತಾಂಡದಲ್ಲಿ ನಡೆದಿದೆ.
ಜಿಲ್ಲೆಯ ಹಡಗಲಿ ತಾಲೂಕಿನ ಜ್ಯೋತಿಬಾಯಿ (40) ಕೊಲೆಯಾದ ಕೂಲಿ ಕಾರ್ಮಿಕ ಮಹಿಳೆ. ಆಕೆಯ ಪತಿ ವಾಚ್ಯಾನಾಯ್ಕ ಎಂಬುವವರೇ ಕೊಲೆಗೈದು ಹಡಗಲಿ ಪೊಲೀಸರ ಅತಿಥಿಯಾಗಿದ್ದಾನೆ.
ಗುರುವಾರ ರಾತ್ರಿ ಕಂಠಪೂರ್ತಿ ಮದ್ಯ ಸೇವನೆ ಮಾಡಿ ಮನೆಗೆ ತೆರಳಿದ್ದ ವಾಚ್ಯಾನಾಯ್ಕ ಅವರೊಂದಿಗೆ ಪತ್ನಿ ಜ್ಯೋತಿಬಾಯಿ ಅವರು ಜಗಳಕ್ಕಿಳಿದಿದ್ದಾರೆ. ಅದೇ ಸಿಟ್ಟಿನಿಂದಾಗಿ ರಾತ್ರಿವೇಳೆ ತನ್ನ ಪಕ್ಕದಲ್ಲೇ ಮಲಗಿದ್ದ ಆಕೆಯ ಕತ್ತಿಗೆ ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾರೆ. ನಿದ್ರೆಗೆ ಜಾರಿದ್ದ ಜ್ಯೋತಿಬಾಯಿ ಅವರು ರಕ್ತದ ಮಡುವಿನಲ್ಲೇ ಚಿರನಿದ್ರೆಗೆ ಜಾರಿದ್ದಾರೆ.
ಪ್ರತಿದಿನವೂ ಮದ್ಯ ಸೇವನೆ ಮಾಡಿ ಬರುತ್ತಿರುವುದರಿಂದ ಜ್ಯೋತಿಬಾಯಿ ಪತಿಯೊಂದಿಗೆ ಜಗಳವಾಡುತ್ತಿದ್ದರು. ಕಳೆದ ರಾತ್ರಿ ವಿಪರೀತ ಮದ್ಯ ಸೇವನೆ ಮಾಡಿದ್ದ ಪತಿ ವಾಚ್ಯಾನಾಯ್ಕ ಪತ್ನಿಯನ್ನು ಕೊಲೆ ಮಾಡಿದ್ದಾರೆ. ಹತ್ತು ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಈ ದಂಪತಿ ಕೂಲಿ, ನಾಲಿ ಮಾಡಿಕೊಂಡೇ ಇಬ್ಬರು ಮಕ್ಕಳೊಂದಿಗೆ ಜೀವನ ಸಾಗಿಸುತಿದ್ದರು. ಹಡಗಲಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್