ಭಾರೀ ಮಳೆ-ಗಾಳಿಗೆ 5 ಮನೆ ಜಖಂ
•ನಾಲ್ಕು ಜಾನುವಾರು ಸಾವು•ನೊಂದ ಕುಟುಂಬಗಳಿಂದ ಪುನರ್ವಸತಿ ಕಲ್ಪಿಸಲು ಮನವಿ
Team Udayavani, May 21, 2019, 7:32 AM IST
ಕೂಡ್ಲಿಗಿ: ತಾಲೂಕಿನ ಹೊಸಹಳ್ಳಿ ಮತ್ತು ಗುಡೇಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಹಲವು ಗ್ರಾಮಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿರುಗಾಳಿ ಪರಿಣಾಮ 5 ಮನೆಗಳ ಜಖಂಗೊಂಡ ಘಟನೆ ರವಿವಾರ ತಡರಾತ್ರಿ ನಡೆದಿದೆ.
ತಾಲೂಕಿನ ಗುಡೇಕೋಟೆ ಹೋಬಳಿಯ ಗಂಡಬೊಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ನುಂಕನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಗೆ ಗ್ರಾಮದ ಗ್ರಾಮದ ಕಾಂಚನಮ್ಮ, ಭಾಗ್ಯಮ್ಮ, ರತ್ನಮ್ಮ, ಹೇಮಾವತಿ, ಸಾಕಮ್ಮ ಎಂಬುವರ 5 ವಾಸದ ಮನೆಗಳು ಜಖಂ ಆಗಿದ್ದು, ಮನೆ ಕಳೆದುಕೊಂಡ ರೈತ ಕುಟುಂಬಗಳು ಬೀದಿಗೆ ಬಿದ್ದಿದ್ದು, ಕಂದಾಯ ಇಲಾಖೆ ಇವರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕೆಂದು ನೊಂದ ಕುಟುಂಬಗಳು ತಾಲೂಕು ಆಡಳಿತಕ್ಕೆ ಒತ್ತಾಯಿಸಿದ್ದಾರೆ.
ತಡರಾತ್ರಿ ಗುಡುಗು ಸಹಿತ ಬಿರುಗಾಳಿ ಮಳೆ ಆರಂಭವಾಗಿದ್ದನ್ನು ತಿಳಿದು ತಾಲೂಕಿನ ಪಿಚ್ಚಾರಹಟ್ಟಿ ಗ್ರಾಮದಲ್ಲಿ ಇಮಾಮ್ ಸಾಬ್ ಮರದಡಿ ಕಟ್ಟಿದ್ದ ಎತ್ತುಗಳನ್ನು ಮನೆಯೊಳಗೆ ಕಟ್ಟಲು ಯತ್ನಿಸುತ್ತಿರುವಾಗ ಮನೆಯ ಒಡೆಯನನ್ನು ಕೊಂಬಿನಿಂದ ತಿವಿಯುವ ಮೂಲಕ ದೂರ ತಳ್ಳಿದೆ. ಮನೆ ಮಾಲೀಕ ಅಲ್ಲಿಂದ ಮನೆಯೊಳಗೆ ಹೋಗುವಷ್ಟರಲ್ಲಿ ಎತ್ತುಗಳಿಗೆ ಸಿಡಿಲು ಬಡಿದಿದೆ. ಮಾಲೀಕನ ಕಣ್ಣೆದುರಿಗೆ ಎರಡು ಎತ್ತು ಸಾವನ್ನಪ್ಪಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ