ಹರಪನಹಳ್ಳಿ: ಭಾರಿ ಮಳೆಗೆ ಪ್ರಮುಖ ರಸ್ತೆಗಳು ಜಲಾವೃತ
Team Udayavani, May 19, 2020, 1:51 PM IST
ಹರಪನಹಳ್ಳಿ: ತಾಲೂಕಿನಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಪಟ್ಟಣ ಸೇರಿದಂತೆ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ. ಕೆಲವೆಡೆ ಮನೆ ಮೇಲ್ಛಾವಣೆ ಹಾರಿ ಹೋಗಿದ್ದು ಅರಸೀಕೆರೆ ಹೋಬಳಿಯ ಗಡಿಗುಡಾಳು ಗ್ರಾಮದಲ್ಲಿ 15 ಮನೆಗಳಿಗೆ ನೀರು ನುಗ್ಗಿದೆ. ಸೋಮವಾರ ಬೆಳಗ್ಗೆ 4 ಗಂಟೆ ಸಮಯದಲ್ಲಿ ಶುರುವಾದ ಮಳೆ ಸತತವಾಗಿ ಮೂರು ತಾಸು ಸುರಿದೆ. ಪರಿಣಾಮ ಪಟ್ಟಣದ ಪ್ರಮುಖ ರಸ್ತೆ, ಚರಂಡಿಗಳು, ಕೋಟೆ ಹನುಮಪ್ಪ ದೇವಸ್ಥಾನ, ರೇಣುಕಾ ಕಲ್ಯಾಣ ಮಂಟಪ ರಸ್ತೆ, ಕೊಟ್ಟೂರು ರಸ್ತೆ, ತೆಗ್ಗಿನಮಠ, ಬಿಎಸ್ಎನ್ಎಲ್ ಕಚೇರಿ, ದೂರದರ್ಶನ ಕೇಂದ್ರ, ಸಾರ್ವಜನಿಕ ಗ್ರಂಥಾಲಯ, ಡಿವೈಎಸ್ಪಿ ಕಚೇರಿ, ಕಾರ್ ಸ್ಟ್ಯಾಂಡ್, ಬಸ್ ನಿಲ್ದಾಣ, ಇನ್ನಿತರ ತಗ್ಗು ಪ್ರದೇಶದ ರಸ್ತೆಗಳು ಸಂಪೂರ್ಣ ಜಲಾವೃತಗೊಂಡವು.
ಪಟ್ಟಣದ ವಾಲ್ಮೀಕಿ ನಗರ, ಕೊಟ್ಟೂರು ಆಶ್ರಯ ಕಾಲೋನಿ, ಆಂಜನೇಯ ಬಡಾವಣೆ, ಗೋಕರ್ಣೇಶ್ವರ ದೇವಸ್ಥಾನದ ಆವರಣದೊಳಗೆ ನೀರು ನುಗ್ಗಿತು. ಆದರೆ ಯಾವುದೇ ಹಾನಿ
ಸಂಭವಿಸಿಲ್ಲ. ಸತತ 3 ಗಂಟೆಗೆಗೂ ಹೆಚ್ಚು ಸಮಯ ಮಳೆ ಬಿದ್ದ ಪರಿಣಾಮ ಪಟ್ಟಣದ ಹೊಂಡ, ಗುಂಡಿ, ರಸ್ತೆಯ ಇಕ್ಕೆಲಗಳಲ್ಲಿ ನೀರು ನಿಂತುಕೊಂಡಿತು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ನಗರದ ಎಲ್ಲ ರಸ್ತೆಗಳಲ್ಲಿ ನೀರು ಹರಿಯುವ ದೃಶ್ಯ ಕಂಡು ಬಂತು. ಕೆಲವು ಕಡೆಗಳಲ್ಲಿ ರಸ್ತೆಯಲ್ಲೇ ನೀರು ನಿಂತ್ತಿರುವುದರಿಂದ ಸಂಚಾರಕ್ಕೆ ತೊಡಕು ಉಂಟು ಮಾಡಿತು. ಪಾದಾಚಾರಿಗಳು, ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು. ಗಾಳಿಗೆ ಕೆಲವು ಕಡೆಗಳಲ್ಲಿ ಮನೆ ಮೇಲ್ಛಾವಣೆ ಹಾರಿ ಹೋಗಿವೆ. ಅರಸೀಕೆರೆ ಹೋಬಳಿಯ ಗಡಿಗುಡಾಳು ಗ್ರಾಮದಲ್ಲಿ 15 ಮನೆಗಳಿಗೆ
ನೀರು ನುಗ್ಗಿದೆ. ಹರಪನಹಳ್ಳಿ ಕಸಾಬಾ-84.4 ಮೀ.ಮೀ, ಅರಸೀಕೇರಿ ಹೋಬಳಿ-70.2,. ಚೀಗಟೇರಿ ಹೋಬಳಿ-30, ಹಿರೆಮೇಗಳಗೇರಿ-20, ಉಚ್ಚಂಗಿದುರ್ಗ-33.8, , ತೆಲಿಗಿ 18.2, ಹಲವಾಗಲು 48.2 ಮೀ.ಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ