ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕಿಟ್ ವಿತರಣೆ
Team Udayavani, Apr 24, 2020, 5:28 PM IST
ಹೊನ್ನಾಳಿ: ಪಟ್ಟಣ ಪಂಚಾಯತ್ ಆವರಣದಲ್ಲಿ ನಡೆದ ಆಶಾ ಕಾರ್ಯಕರ್ತೆಯರ ಸಭೆಯಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿದ ಸಂದರ್ಭ
ಹೊನ್ನಾಳಿ: ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವಿವಿಧ ಫಲಾನುಭವಿಗಳಿಗೆ ಆಹಾರ ಕಿಟ್ಗಳನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಿತರಿಸಿದರು.
ಗುರುವಾರ ಪಪಂ ಆವರಣದಲ್ಲಿ ಆಶಾ ಕಾರ್ಯಕರ್ತೆಯರು, ಟೈಲರ್ಗಳು, ಪತ್ರಿಕಾ ವಿತರಿಕರಿಗೆ ಹಮ್ಮಿಕೊಂಡಿದ್ದ ಆಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಶಾಸಕರು ಕಿಟ್ ವಿತರಣೆಗೆ ಮುನ್ನ ಮಾತನಾಡುವ ಸಂದರ್ಭದಲ್ಲಿ ಫಲಾನುಭವಿಗಳು ಕುಳಿತು ಅವರ ಮಾತುಗಳನ್ನು ಆಲಿಸಿದ್ದಾರೆ. ಕಿಟ್ ವಿತರಣೆ ಆರಂಭವಾಗುತ್ತಿದ್ದಂತೆ ನಾ ಮುಂದು ತಾಮುಂದು ಎಂದು ನುಗ್ಗಿ ಕಿಟ್ಗಳನ್ನು ಪಡೆಯಲು ಪ್ರಾರಂಭ ಮಾಡಿದಾಗ ಶಾಸಕರು ಆಹಾರ ಕಿಟ್ ವಿತರಣೆ ಮಾಡಿದರು.
ಸ್ಥಳದಲ್ಲಿದ್ದ ಅಧಿಕಾರಿಗಳು ಮೂಕಪ್ರೇಕ್ಷಕರಾಗಿದ್ದರು. ವ್ಯಕ್ತಿಯಿಂದ ವ್ಯಕ್ತಿಗೆ ಕನಿಷ್ಠ 3 ಅಡಿ ಅಂತರ ಕಾಯ್ದುಕೊಳ್ಳಬೇಕು ಎನ್ನುವ ನಿಯಮ ಇದ್ದರೂ ಇಲ್ಲಿ ಯಾವ ನಿಯಮವೂ ಪಾಲಿಸದೇ ಇರುವುದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!