ಜನಸೇವೆಗೆ ಸರ್ಟಿಫಿಕೆಟ್ ಬೇಕಿಲ್ಲ
Team Udayavani, Apr 30, 2020, 5:03 PM IST
ಹೊನ್ನಾಳಿ: ನ್ಯಾಮತಿ ತಾಲೂಕಿನ 14 ಗ್ರಾಪಂಗಳ ವ್ಯಾಪ್ತಿಯ ಬಡವರು, ಕೂಲಿ ಕಾರ್ಮಿಕರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಆಹಾರ ಕಿಟ್ ಹಾಗೂ ಮಾಸ್ಕ್ ವಿತರಿಸಿದರು.
ಹೊನ್ನಾಳಿ: ಬಸವಣ್ಣನವರ ಕಾಯಕ ಮತ್ತು ನಿತ್ಯ ದಾಸೋಹದ ತತ್ವವನ್ನು ಕಳೆದ 30 ವರ್ಷಗಳಿಂದ ಮೈಗೂಡಿಸಿಕೊಂಡು ಪಾಲಿಸುತ್ತಿದ್ದೇನೆ. ಕ್ಷೇತ್ರದ ಜ್ವಲಂತ ಸಮಸ್ಯೆಗಳ ಬಗ್ಗೆ ಅವಿರತ ಹೋರಾಟ ನಡೆಸಿ ಎಲ್ಲರ ಆಶೀರ್ವಾದದಿಂದ 3 ಬಾರಿ ಶಾಸಕನಾಗಿದ್ದೇನೆ. ಜನಸೇವೆ ನನ್ನ ವೈಯಕ್ತಿಕ ಹಕ್ಕಾಗಿದ್ದು, ಈ ವಿಷಯದಲ್ಲಿ ನನಗೆ ಯಾರಿಂದಲೂ ಸರ್ಟಿಫಿಕೇಟ್ ಪಡೆಯುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಎಂ.ಪಿ. ರೇಣುಕಾಚಾರ್ಯ ಹೇಳಿದರು.
ನ್ಯಾಮತಿ ತಾಲೂಕು ಸುರಹೊನ್ನೆ, ಯರಗನಾಳು, ಚಿನ್ನಿಕಟ್ಟೆ, ಸವಳಂಗ, ಚಟ್ನಹಳ್ಳಿ ಸೇರಿದಂತೆ 14 ಗ್ರಾಪಂಗಳ ವ್ಯಾಪ್ತಿಯ ಬಡವರು, ಕೂಲಿ ಕಾರ್ಮಿಕರಿಗೆ ಬುಧವಾರ ಆಹಾರ ಕಿಟ್ ಹಾಗೂ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ನನ್ನ ಬಗ್ಗೆ ವಿರೋಧಿಗಳು ಇಲ್ಲಸಲ್ಲದ ಟೀಕೆ ಟಿಪ್ಪಣಿಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ. ಅವರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು. ಕೊರೊನಾ ಮಹಾಮಾರಿ ಮನುಕುಲವನ್ನು ಕಂಗೆಡಿಸಿದೆ ಇಂತಹ ದುಸ್ತರ ಪರಿಸ್ಥಿತಿಯಲ್ಲಿ ಕ್ಷೇತ್ರದ ಮಾಜಿ ಶಾಸಕರು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಅವರು ಎರಡು ಬಾರಿ ಶಾಸಕರಾಗಿ ಯಾವ ರೀತಿ ಜನರ ಸೇವೆ ಮಾಡಿದ್ದಾರೆಂಬುದನ್ನು ಸಾರ್ವಜನಿಕರೇ ಮಾತಾಡಿಕೊಳ್ಳುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಎಲ್ಲಿಯೂ ಕಾಣಿಸಿಕೊಳ್ಳದೆ ಹತಾಶ ಮನೋಭಾವದಿಂದ ಏಕಾಏಕಿ ಹೊರಬಂದು ಹಾದಿ ರಂಪ ಮಾಡುತ್ತಿದ್ದಾರೆ. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ನನ್ನ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಮಾಜಿ ಶಾಸಕರು ಸ್ವಂತ ಖರ್ಚಿನಲ್ಲಿ ಆಹಾರ ಕಿಟ್, ಮಾಸ್ಕ್ ವಿತರಿಸಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಸುಖಾ ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದನ್ನು ಜನತೆ ಗಮನಿಸುತ್ತಿದ್ದಾರೆ. ಕ್ಷೇತ್ರದ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿಗೆ ತೆರಳಿದ್ದಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಬಂದಿದ್ದೇನೆ. ಹಾಗಾಗಿ ನಾನು ಓಡಾಡಲು ಯಾರ ಅಪ್ಪಣೆಯೂ ಬೇಕಿಲ್ಲ. ಕಾನೂನು ನನಗೂ ಗೊತ್ತಿದೆ, ಮಾಜಿ ಶಾಸಕರಿಂದ ಕಲಿಯುವಷ್ಟು ದಡ್ಡ ನಾನಲ್ಲ ಎಂದು ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ