ಕೋವಿಡ್ ವಿರುದ್ಧ ಹೋರಾಟ ಅನಿವಾರ್ಯ: ರೇಣು
ರಾಜಕೀಯ ವಿರೋಧಿಗಳ ಟೀಕೆಗೆ ಕಿವಿಗೊಡದೆ ಜನಸೇವೆ ಮುಂದುವರಿಸಲು ನಿರ್ಧರಿಸಿರುವೆ
Team Udayavani, May 1, 2020, 4:43 PM IST
ಹೊನ್ನಾಳಿ: ಹನುಮಸಾಗರ ಗ್ರಾಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಆಹಾರ ಕಿಟ್ಗಳು ಮತ್ತು ಮಾಸ್ಕ್ ವಿತರಿಸಿದರು.
ಹೊನ್ನಾಳಿ: ಕೋವಿಡ್ ವೈರಸ್ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಅನಿವಾರ್ಯ. ದಾವಣಗೆರೆ ಹಸಿರು ವಲಯಕ್ಕೆ ಸೇರ್ಪಡೆಯಾದ ಬಳಿಕ ವೈರಸ್ ಸೋಂಕಿತ ವ್ಯಕ್ತಿ ಕಂಡು ಬಂದಿರುವುದು ಆತಂಕಕಾರಿ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಹನುಮಸಾಗರ, ಎಚ್.ಜಿ. ಹಳ್ಳಿ, ಹತ್ತೂರು, ಕತ್ತಿಗೆ, ಗುಡ್ಡೆಹಳ್ಳಿ ಬೆಳಗುತ್ತಿ, ಕೆಂಚಿಕೊಪ್ಪ ಸೇರಿದಂತೆ 12 ಗ್ರಾಪಂಗಳ ವ್ಯಾಪ್ತಿಯ ಬಡವರು, ಕೂಲಿ ಕಾರ್ಮಿಕರಿಗೆ ಗುರುವಾರ ಆಹಾರ ಕಿಟ್ ಮತ್ತು ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ನನ್ನ ಜನಸೇವೆಯ ಕಡೆ ಮಾತ್ರ ಗಮನ ಹರಿಸಿದ್ದೇನೆ. ನನ್ನ ಬಗ್ಗೆ ಹಲವಾರು ವರ್ಷಗಳಿಂದ ವಿರೋಧಿಗಳು ಇಲ್ಲಸಲ್ಲದ ಟೀಕೆ ಟಿಪ್ಪಣಿಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ. ಇವರ ಬಗ್ಗೆ ತಲೆಕೆಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಪೌರಕಾರ್ಮಿಕರು, ಕೂಲಿ ಕಾರ್ಮಿಕರು, ಆಶಾ, ಅಂಗನವಾಡಿ ಕಾರ್ಯರ್ತೆಯರು, ದುರ್ಬಲರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಗ್ರಾಪಂ ತಾಪಂ, ತಾಲೂಕು ಕಚೇರಿ, ಪಟ್ಟಣ ಪಂಚಾಯತ್, 4 ಚೆಕ್ಪೋಸ್ಟ್ಗಳು, ಕೆಇಬಿ, ಕೃಷಿ ಇಲಾಖೆ, ನಾಡಕಚೇರಿ, ಕಂದಾಯ ಸಿಬ್ಬಂದಿಗೆ ದಿನನಿತ್ಯ ಊಟ ನೀಡಲಾಗುತ್ತಿದೆ. ಲಾಕ್ಡೌನ್ ಮುಗಿಯುವವರಿಗೆ ಎಷ್ಟು ಸಾವಿರ ಜನರಿಗಾದರೂ ಮಧ್ಯಾಹ್ನದ ಊಟ ಮತ್ತು ದುರ್ಬಲರಿಗೆ ಉಚಿತ ಆಹಾರ ಕಿಟ್ಗಳನ್ನು ವಿತರಿಸಲು ಸಿದ್ಧ ಎಂದು ಘೋಷಿಸಿದರು. ಗ್ರಾಪಂ ಚನ್ನನಾಯ್ಕ, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ತಾಪಂ ಸದಸ್ಯ ಸಿ.ಆರ್. ಶಿವಾನಂದ್, ತಹಶೀಲ್ದಾರ್ ತುಷಾರ್ ಬಿ. ಹೊಸೂರು, ತಾಪಂ ಇಒ ಗಂಗಾಧರಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ