ಕೃಷಿಮೇಳದ ಯಶಸ್ಸಿಗೆ ಶ್ರಮಿಸೋಣ

ರೈತರ ಹಿತ ಕಾಪಾಡುವ ಮೇಳದ ಉದ್ದೇಶ ಈಡೇರಲಿಕೋಟಿಗಿಂತ ಹೆಚ್ಚು ವೆಚ್ಚ

Team Udayavani, Mar 2, 2020, 5:02 PM IST

2-March-27

ಹೊನ್ನಾಳಿ: ಹಿರೇಕಲ್ಮಠದಲ್ಲಿ ಲಿಂ|ಒಡೆಯರ್‌ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಮತ್ತು ಲಿಂ| ಒಡೆಯರ್‌ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಪುಣ್ಯಾರಾಧನೆ ಅಂಗವಾಗಿ ಮಾ.5ರಿಂದ 7ರವರೆಗೆ ನಡೆಯುವ ರಾಜ್ಯ ಮಟ್ಟದ ಕೃಷಿಮೇಳ ಅತ್ಯಂತ ಯಶಸ್ವಿಯಾಗಿ ನಡೆಯಲು ಎಲ್ಲರು ಕಂಕಣಬದ್ಧರಾಗಿ ದುಡಿಯಬೇಕಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.

ಕೃಷಿ ಮೇಳದ ಪ್ರಯುಕ್ತ ಭಾನುವಾರ ಹಿರೇಕಲ್ಮಠದಲ್ಲಿ ಈಗಾಗಲೇ ನಡೆದ ಹಾಗೂ ಮುಂದಿನ ಎರಡು ದಿನಗಳಲ್ಲಾಗಬೇಕಾದ ಕಾಮಗಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯಮಟ್ಟದ ಕೃಷಿ ಮೇಳ ರಾಜ್ಯದಲ್ಲಿಯೇ ಗುರ್ತಿಸುವಂತಾಗಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಾಗಬೇಕಿದೆ. ಇದಕ್ಕೆ 1ಕೋಟಿಗಿಂತ ಹೆಚ್ಚು ಖರ್ಚು ಬರಲಿದ್ದು ಈಗಾಗಲೇ ಸರ್ಕಾರ ರೂ.50ಲಕ್ಷ ಅನುದಾನ ಬಿಡುಗಡೆ ಮಾಡಿದೆ. ಹೆಚ್ಚಿನ ಅನುದಾನಕ್ಕೆ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಕೃಷಿಮೇಳ ಜಾತ್ಯತೀತ ಹಾಗೂ ಪಕ್ಷಾತೀತವಾಗಿರುವುದರಿಂದ ತಾಲೂಕಿನ ಎಲ್ಲಾ ಪಕ್ಷದ ಮುಖಂಡರುಗಳನ್ನು ಸೇರಿಸಿಕೊಂಡು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಮುಖ್ಯಮಂತ್ರಿ, ವಿಪಕ್ಷ ನಾಯಕ, ಸಚಿವರನ್ನು ತಾಲೂಕಿನ ಎಲ್ಲಾ ಪ್ರಮುಖ ಮುಖಂಡರನ್ನು ಕರೆದುಕೊಂಡು ಹೋಗಿ ಆಹ್ವಾನ ಮಾಡಲಾಗಿದೆ ಎಂದು ಹೇಳಿದರು.

ಪ್ರತಿ ವರ್ಷ ಹೊನ್ನಾಳಿಯಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಹಮ್ಮಿಕೊಂಡು ಸರ್ಕಾರದಿಂದ ಇಂತಿಷ್ಟು ಹಣ ನಿಗದಿ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದು ಹೇಳಿದರು.

ಸಭೆಯ ಸಾನ್ನಿಧ್ಯವಹಿಸಿ ಮಾತನಾಡಿದ ಡಾ|
ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಕೃಷಿ ಮೇಳಕ್ಕೆ ನನಗೆ ಆಹ್ವಾನ ನೀಡಿಲ್ಲ ಎಂದು ಎನ್ನದೇ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಜಿಲ್ಲಾ ಧಿಕಾರಿ ಮಹಾಂತೇಶ್‌ ಬೀಳಗಿ ಮಾತನಾಡಿ, ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಇತರ ಎಲ್ಲಾ ಇಲಾಖೆಗಳು ಶಕ್ತಿಮೀರಿ ಕೆಲಸ ಮಾಡುತ್ತಿದ್ದು ರೈತರ ಹಿತ ಕಾಪಾಡುವ ಕೃಷಿಮೇಳದಲ್ಲಿ ನಮ್ಮ ಮುಖ್ಯ ಉದ್ದೇಶ ಈಡೇರಬೇಕಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಕುಂದೂರು ಹನುಮಂತಪ್ಪ ತಮ್ಮ ಭಾಗದ ಹಳ್ಳಿಗಳಿಂದ ಕೃಷಿಮೇಳಕ್ಕೆ ಆಗಮಿಸುವ ಎಲ್ಲಾ ರೈತರಿಗೆ ಹಾಗೂ ಜನರಿಗೆ ವಾಹನ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ನೀಡಿದರು. ಸಾವಿತ್ರಿಬಾಯಿ ಫುಲೆ ಸಂಘಟನೆ ಅಧ್ಯಕ್ಷೆ ಶಹಜಾನ್‌, ಕೃಷಿ ಮೇಳಕ್ಕೆ ರೂ.25 ಸಾವಿರ ದೇಣಿಗೆ ನೀಡುತ್ತೇನೆ ಎಂದು ಹೇಳಿದರು. ವಿವಿಧ ಪಕ್ಷದ ಮುಖಂಡರು, ರೈತರು ಮಾತನಾಡಿದರು. ಜಿ.ಪಂ ಉಪಾಧ್ಯಕ್ಷ ಸುರೇಂದ್ರನಾಯ್ಕ, ಜಿ.ಪಂ ಸದಸ್ಯೆ ಉಮಾರಮೇಶ್‌, ತಾ.ಪಂ ಪ್ರಭಾರಿ ಅಧ್ಯಕ್ಷ ತಿಪ್ಪೇಶಪ್ಪ, ಜಿ.ಪಂ ಸಿಇಒ ಪದ್ಮಾಬಸವಂತಪ್ಪ ಮತ್ತು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.