ಹೊಸಪೇಟೆ- ಕೊಟ್ಟೂರು ಮಾರ್ಗದಲ್ಲಿರೈಲು ಆರಂಭಿಸಲು ಒತ್ತಾಯ
Team Udayavani, Jul 24, 2018, 4:12 PM IST
ಹೊಸಪೇಟೆ: ಹೊಸಪೇಟೆ-ಕೊಟ್ಟೂರು ಮಾರ್ಗದಲ್ಲಿ ಪ್ರಯಾಣಿಕರ ರೈಲು ಸಂಚಾರ ಆರಂಭಿಸುವಂತೆ ಒತ್ತಾಯಿಸಿ ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಪದಾಧಿಕಾರಿಗಳು ರೈಲ್ವೆ ನಿಲ್ದಾಣದ ಮುಖ್ಯಸ್ಥ ಉಮರ್ಬಾನಿ ಅವರ ಮೂಲಕ ನೈರುತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ ಎ.ಕೆ.ಗುಪ್ತಾ ಅವರಿಗೆ ಮನವಿ ಸಲ್ಲಿಸಿದರು.
ಹೊಸಪೇಟೆ ಕೊಟ್ಟೂರು ಬ್ರಾಡ್ಗೆಜ್ ರೈಲ್ವೆ ಮಾರ್ಗದಲ್ಲಿ ಪ್ರಯಾಣಿಕರ ರೈಲು ಹಾಗೂ ಹೊಸಪೇಟೆ-ಬೆಂಗಳೂರು ನಡುವೆ ಇಂಟರ್ ಸಿಟಿ ರೈಲು ಆರಂಭಿಸಬೇಕು. ಹೊಸಪೇಟೆ ರೈಲು ನಿಲ್ದಾಣದಲ್ಲಿ ರೈಲ್ವೆ ಕೋಚ್ಗಳ ದುರಸ್ತಿ ಕಾರ್ಯಗಾರ ಸ್ಥಾಪಿಸಬೇಕು. ನೂತನ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭಕ್ಕೆ ಅನುಕೂಲವಾಗುವಂತೆ ನಿಲ್ದಾಣದಲ್ಲಿ ಪ್ಯಾಸೆಂಜರ್ ಕೋಚ್ಗಳ ದುರಸ್ತಿ, ಸ್ವತ್ಛತೆ, ಹಾಗೂ ಪಿಟ್ಲೈನ್ ಕಾರ್ಯಗಾರ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಪ್ರಸಿದ್ಧ ಯಾತ್ರಾ ಸ್ಥಳ ಹುಲಗಿಗೆ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಕೊಲ್ಲಾಪುರ-ಹೈದ್ರಾಬಾದ್ (ಮಣಗೂರು) (11303/304) ರೈಲು ಮುನಿರಾಬಾದ್ನಲ್ಲಿ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು. ಕೊಲ್ಲಾಪುರ-ತಿರುಪತಿ, ಹರಿಪ್ರಿಯ ಎಕ್ಸ್ಪ್ರೆಸ್ ರೈಲು ಗಾಡಿಯಲ್ಲಿ ಹೊಸಪೇಟೆ-ಬಳ್ಳಾರಿಯಿಂದ ತಿರುಪತಿಗೆ ತೆರಳುವ ಪ್ರಯಾಣಿಕರಿಗೆ ಸದರಿ ರೈಲಿನಲ್ಲಿ ಪ್ರತ್ಯೇಕ ಹೆಚ್ಚುವರಿ ಸೀಟು (ಕೋಟಾ) ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ವಿಭಾಗೀಯ ರೈಲ್ವೆ ಸಲಹಾ ಸಮಿತಿ ಸದಸ್ಯ ಚಂದ್ರಕಾಂತ್ ಕಾಮತ್, ಪ್ರಹ್ಲಾದ ಸ್ವಾಮೀಜಿ, ಶ್ಯಾಮಪ್ಪ ಅಗೋಲಿ, ಟಿ.ಆರ್.ತಿಪ್ಪೇಸ್ವಾಮಿ, ತಿಮ್ಮಾರೆಡ್ಡಿ, ಬಿ.ಜಹಂಗೀರ್, ಎಚ್.ಮಹೇಶ್, ಡಿ.ರಾಮಕೃಷ್ಣ, ಪಿ.ಪ್ರಭಾಕರ್, ರವಿಶಂಕರ ದೇವರ ಮನೆ, ಕೆ.ರಘವೇಂದ್ರ, ಇ.ಕುಮಾರಸ್ವಾಮಿ. ಇ.ಪ್ರಸಾದ್, ವೈ.ಶೇಖರ್, ಸಿದ್ದೇಶ್ ಉತ್ತಂಗಿ, ಪೀರನ್ ಸಾಬ್, ಎಲ್.ರಮೇಶ್ಲಮಾಣಿ, ಕುರುಳಿ ವಾಸಪ್ಪ, ಎಸ್.ಡಿ. ಏಕನಾಥ, ಜಿ.ವೀರೇಶಪ್ಪ, ಜಿ.ದೇವರೆಡ್ಡಿ, ಬಿ.ಶ್ರೀನಿವಾಸ್ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ