ವಲಸಿಗರ ಸಾಗಾಟಕ್ಕೆ ವಿಶೇಷ ರೈಲು
Team Udayavani, May 18, 2020, 5:33 PM IST
ಸಾಂದರ್ಭಿಕ ಚಿತ್ರ
ಹೊಸಪೇಟೆ: ನಗರ ರೈಲ್ವೆ ನಿಲ್ದಾಣದಿಂದ ಹೊರ ರಾಜ್ಯದ ವಲಸಿಗರನ್ನು ಹೊತ್ತ ಶ್ರಮಿಕ ವಿಶೇಷ ರೈಲು ಭಾನುವಾರ ಉತ್ತರ ಪ್ರದೇಶದತ್ತ ತೆರಳಿತು.
ಉಪವಿಭಾಗಾಧಿಕಾರಿ ಶೇಖ್ ತನ್ವೀರ್ ಆಸೀಫ್, ತಹಶೀಲ್ದಾರ್ ವಿಶ್ವನಾಥ ಮತ್ತು ಸಿಬ್ಬಂದಿ 1452 ವಲಸಿಗರಿಗೆ ಶುಭಹಾರೈಸಿ, ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು. ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಉತ್ತರಪ್ರದೇಶದ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾಗೂ ತೋರಣಗಲ್ಲು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಪ್ರಮಾಣಪತ್ರ ವಿತರಿಸಿ, ರೈಲ್ವೆ ಟಿಕೆಟ್ ನೀಡಲಾಗಿತ್ತು.
ಅವರಿಗೆ ನೀಡಲಾದ ಟಿಕೆಟ್ ಹಿಂಬದಿಯಲ್ಲಿ ಬರೆಯಲಾದ ಬೋಗಿ ಮತ್ತು ಸೀಟ್ ಸಂಖ್ಯೆಯಲ್ಲಿ ಆಸೀನರಾಗುವಂತೆ ಸೂಚಿಸಲಾಗಿತ್ತು. ಉತ್ತರ ಪ್ರದೇಶದ ಆಗ್ರಾ, ಅಲಿಘರ್, ಅಜಂಘರ್, ಲಕ್ನೋ, ಅಲಹಾಬಾದ್, ಅಮೇಥಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ತೆರಳಲು ರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸಿದರು.
ಉತ್ತರ ಪ್ರದೇಶಕ್ಕೆ ಈ ರೈಲು ತೆರಳಲಿದ್ದು, 34 ಗಂಟೆಗಳ ಪ್ರಯಾಣದ ಅವಧಿಯದ್ದಾಗಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ