ಹೊಸಪೇಟೆ: ಹಂಪಿಯಲ್ಲಿ ಜಿ-20 ಶೃಂಗಸಭೆಗೆ ಪೂರ್ವಸಿದ್ಧತೆ ; ನಿಯಮ ಮೀರಿ ಕಾಮಗಾರಿ ಆರೋಪ

ಸ್ಮಾರಕಗಳ ರಕ್ಷಣೆಗೆ ಆದ್ಯತೆಯಾಗಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

Team Udayavani, May 16, 2023, 4:05 PM IST

ಹೊಸಪೇಟೆ: ಹಂಪಿಯಲ್ಲಿ ಜಿ-20 ಶೃಂಗಸಭೆಗೆ ಪೂರ್ವಸಿದ್ಧತೆ ; ನಿಯಮ ಮೀರಿ ಕಾಮಗಾರಿ ಆರೋಪ

ಹೊಸಪೇಟೆ: ವಿಶ್ವ ಪರಂಪರೆ ತಾಣ ಹಂಪಿಯಲ್ಲಿ ಜುಲೈ ತಿಂಗಳಲ್ಲಿ ನಡೆಯಲಿರುವ ಜಿ.20 ಶೃಂಗಸಭೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಸಿದ್ಧತೆ ಆರಂಭಗೊಂಡಿದೆ. ಇದಕ್ಕಾಗಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಿಗೆ ಸ್ಥಳೀಯರಿಂದ ವಿರೋಧ ಕೂಡ ವ್ಯಕ್ತವಾಗಿದೆ. ಹಂಪಿಯ ಕೆಲ ಪ್ರದೇಶದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಸ್ಮಾರಕ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡಲಿವೆ ಎಂಬ ಆತಂಕ ಸ್ಥಳೀಯರಲ್ಲಿ ಕಾಡುತ್ತಿದೆ.

ಜಿ.20 ದೇಶಗಳ ಅಧ್ಯಕ್ಷ ಸ್ಥಾನ ಈ ಬಾರಿ ಭಾರತ ಒಲಿದ ಹಿನ್ನೆಲೆಯಲ್ಲಿ ಭಾರತೀಯ ವಿದೇಶಾಂಗ ಸಚಿವಾಲಯ ಹಂಪಿಯಲ್ಲಿ ಸಭೆ ನಡೆಸಲು ತೀರ್ಮಾನಿಸಿದೆ. ಎರಡು ತಿಂಗಳ ಹಿಂದೆಯಷ್ಟೇ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉನ್ನತಾ ಧಿಕಾರಿಗಳು ಹಂಪಿಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಅವರ ಮಾರ್ಗದರ್ಶನದಂತೆ ಅಗತ್ಯ ಸೌಲಭ್ಯಗಳನ್ನು ಸೃಜಿಸುವುದು, ಸ್ಮಾರಕಗಳ ರಕ್ಷಣೆಗೆ ಆದ್ಯತೆಯಾಗಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಸ್ಮಾರಕಗಳಿಗೆ ಧಕ್ಕೆ?: ಜಿ- 20 ಹೆಸರಲ್ಲಿ ಹಂಪಿಯ ವಿವಿಧ ಸ್ಮಾರಕಗಳ ಸುತ್ತಮುತ್ತ ಕಾಂಪೌಂಡ್‌ ನಿರ್ಮಿಸಲಾಗುತ್ತಿದೆ. ಇದರಿಂದ ಪುರಾತನ ಸ್ಮಾರಕಗಳ ಮೂಲ ಸ್ವರೂಪಕ್ಕೆ ಧಕ್ಕೆಯಾಗುತ್ತದೆ ಎಂದು ಸ್ಥಳೀಯರ ಆಕ್ಷೇಪಿಸುತ್ತಿದ್ದಾರೆ. ಹಂಪಿಯ ಸ್ಮಾರಕಗಳ ಸಂರಕ್ಷಣೆ ಮತ್ತು ಇವುಗಳನ್ನು ಮುಂದಿನ ಪೀಳಿಗೆಗಾಗಿ ಕಾಯ್ದಿಡುವ ವೈಜ್ಞಾನಿಕ ವಿಧಾನಗಳ ಕುರಿತು ಪ್ರಪಂಚದ ಪ್ರಖ್ಯಾತ ಪುರಾತತ್ವ ಶಾಸ್ತ್ರಜ್ಞರು, ಪಾರಂಪರಿಕ ಆರ್ಕಿಟೆಕ್ಟರ್ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ, ಯುನೆಸ್ಕೋ ನೇತ್ರತ್ವದಲ್ಲಿ 1999, 2000 ರಿಂದ 2004ರ ವರೆಗೆ ಪ್ರತೀ ವರ್ಷ ಮತ್ತು 2007 ರಲ್ಲಿ ಯುನೆಸ್ಕೋ ಅಧೀನದಲ್ಲಿರುವ ವರ್ಲ್ಡ್ ಹೆರಿಟೇಜ್‌ ಸೆಂಟರ್‌ಗೆ ವರದಿ ಸಲ್ಲಿಸಿದ್ದಾರೆ. ಆ ಮಾರ್ಗಸೂಚಿಗಳ ಇತಿಮಿತಿಯಲ್ಲೇ ಕಾಮಗಾರಿಗಳನ್ನು ಕೈಗೊಳ್ಳಬೇಕಿದೆ. ಆದರೆ, ಬಡವಿ ಲಿಂಗದ ಬಳಿ ಅನಗತ್ಯವಾಗಿ ಕಾಂಪೌಂಡ್‌ ನಿರ್ಮಿಸಲಾಗುತ್ತಿದೆ.

ಇದರಿಂದ ಐತಿಹಾಸಿಕ ಸ್ಮಾರಕಗಳು ವಿರೂಪಗೊಳ್ಳುತ್ತವೆ. ಜೆಸಿಬಿ ಬಳಸಿ ಅಡಿಪಾಯ ತೆಗೆಯಲಾಗಿದೆ. ಸ್ಥಳೀಯ ನಿವಾಸಿಗಳು ಮನೆಯ ದುರಸ್ತಿ, ಮರು ನಿರ್ಮಾಣದ ವೇಳೆ ಯಂತ್ರೋಪಕರಣಗಳನ್ನು ಬಳಸದಂತೆ ಎಚ್ಚರಿಸುವ ಅಧಿಕಾರಿಗಳು, ಇಂದು ತಮ್ಮದೇ ನಿಯಮವನ್ನು ಮೀರಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.

ಪೂರ್ವಸಿದ್ಧತೆ: ಜಿ-20 ಶೃಂಗಸಭೆಗೆ ಆಗಮಿಸುವ ವಿದೇಶಿ ಪ್ರತಿನಿ ಧಿಗಳ ಸ್ವಾಗತಕ್ಕೆ ವಿವಿಧ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಅದರ ಭಾಗವಾಗಿ ಬಡವಿ ಲಿಂಗ ಸುತ್ತಲಿನ ಪ್ರದೇಶದಲ್ಲಿ ಎರಡು ಅಡಿ ಎತ್ತರದ ಗೋಡೆ ಸೇರಿದಂತೆ 6 ಅಡಿ ಎತ್ತರದ ಗ್ರಿಲ್‌ ಅಳವಡಿಸಿ ಕಾಂಪೌಂಡ್‌ ನಿರ್ಮಿಸಲಾಗುತ್ತಿದೆ. ಪ್ರವೇಶ ದ್ವಾರ ನಿರ್ಮಿಸಲಾಗುತ್ತಿದೆ. ಬಡವಿಲಿಂಗ, ವಿಠಲ ಮಂದಿರ, ಗ್ರಾಪಂ ಮುಂಭಾಗದಲ್ಲಿ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗುತ್ತಿದೆ. ವಿಠಲ ದೇವಸ್ಥಾನ ಸೇರಿದಂತೆ ಆಯ್ದ ಕಡೆ ಫುಟ್‌ ಪಾತ್‌
ನಿರ್ಮಿಸುವುದು, ವಾಹನಗಳ ಸುಗಮ ಸಂಚಾರಕ್ಕೆ ವಿವಿಧ ರಸ್ತೆಗಳ ಸುಧಾರಣೆ, ಅದರೊಂದಿಗೆ ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯವಿರುವಲ್ಲಿ ಶುದ್ಧ ಕುಡಿಯುವ ನೀರಿನ ಸೌಕರ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಹಂಪಿ ಪರಿಸರದ ಸಂರಕ್ಷಣೆ, ಅಭಿವೃದ್ಧಿ ಮತ್ತು ಉತ್ಖನನ ಕಾರ್ಯಕೈಗೊಳ್ಳಬೇಕಿದೆ. ಯಂತ್ರೋಪಕರಣಗಳನ್ನು ಬಳಕೆ ಮಾಡಿ
ಹಂಪಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇದನ್ನು ಮೀರಿದರೆ ಹಂಪಿಯನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಿಂದ ಕೈ ಬಿಡುವ ಆತಂಕವಿದೆ.
ಶಿವಕುಮಾರ ಮಾಳಗಿ, ಸ್ಥಳೀಯ ನಿವಾಸಿ

*ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.