ಮಹಿಳೆಯರು ಕಾನೂನು ಜ್ಞಾನ ತಿಳಿದುಕೊಳ್ಳಿ : ಶ್ವೇತಾಂಬರಿ

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮಹಿಳೆ ಮತ್ತು ಪುರುಷರ ಪಾತ್ರ ಮುಖ್ಯ

Team Udayavani, Mar 9, 2020, 6:36 PM IST

9-March-34

ಹೊಸಪೇಟೆ: ಮಹಿಳೆಯರು ಕಾನೂನುಗಳನ್ನು ಅರ್ಥ ಮಾಡಿಕೊಳ್ಳುವ ಮೂಲಕ ಅವುಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ನಗರದ ವಕೀಲರಾದ ಶ್ವೇತಾಂಬರಿ ಎಸ್‌.ಪಿ. ಸಲಹೆ ನೀಡಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಕನ್ನಡ ವಿಶ್ವವಿದ್ಯಾಲಯದಲ್ಲಿ ದೇಹ ಘನತೆ; ಲೈಂಗಿಕ ಕಿರುಕುಳದ ಸ್ವರೂಪ ಕಾನೂನುಗಳನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಭಾನುವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ಸಮಾಜದಿಂದ ಸ್ವಾತಂತ್ರ್ಯ ಮತ್ತು ಕಾಳಜಿ ಮಾತ್ರ ಅಪೇಕ್ಷಿಸುತ್ತಾರೆ. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮಹಿಳೆ ಮತ್ತು ಪುರುಷರ ಪಾತ್ರ ಮುಖ್ಯವಾ ಗಿದೆ. ಸರ್ಕಾರಗಳು ಕಾಲಕಾಲಕ್ಕೂ ಮಹಿಳೆಯರ ಪರವಾಗಿ ಅನೇಕ ಕಾನೂನು ಜಾರಿಗೆ ತಂದಿದ್ದು, ಅವುಗಳನ್ನು ಮಹಿಳೆಯರು ಅರಿಯಬೇಕು ಎಂದರು.

ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಫೋಕ್ಸೋ ಕಾಯ್ದೆ, ಬಾಲ್ಯವಿವಾಹ ತಡೆ ಕಾಯ್ದೆ, ಉದ್ಯೋಗಸ್ಥ ಮಹಿಳೆಯರ ಮೇಲಿನ ದೌರ್ಜನ್ಯ ತಡೆ, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಸರ್ಕಾರ ಜಾರಿ ತಂದಿರುವ ಅನೇಕ ಕಾನೂನುಗಳನ್ನು ಮಹಿಳೆಯರು ಅರಿಯಬೇಕು ಎಂದರು.

ಮಹಿಳೆ ಅಶಕ್ತಳು, ದುರ್ಬಲಳು ಎಂಬ ಅವಳ ಬಗೆಗಿನ ಸಮಾಜದ ದೃಷ್ಟಿಕೋನ ಕುಲಪತಿ ಡಾ.ಸ.ಚಿ.ರಮೇಶ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಎಲ್ಲಾ ರಂಗಗಳಲ್ಲೂ ಯಶಸ್ಸು ಕಾಣುತ್ತಿದ್ದಾರೆ. ಸಂವಿಧಾನದಲ್ಲಿ ಮಹಿಳೆಗೆ ಸಮಾನ ಅವಕಾಶ ನೀಡಲಾಗಿದ್ದು, ಆಸ್ತಿಯಲ್ಲಿ ಮಹಿಳೆಗೂ ಸಮಪಾಲನ್ನು ನೀಡಲಾಗಿದೆ. ಮಹಿಳೆ ಆಸ್ತಿಯಲ್ಲಿ ಪಾಲನ್ನು ಕೇಳಿದರೆ, ಸಂಸಾರದಲ್ಲಿ ಒಡಕುಗಳು ಉಂಟಾಗುವ ಸಂಭವ ಹೆಚ್ಚಾಗುತ್ತಿದೆ. ಉದ್ಯೋಗಸ್ಥ ಉದ್ಯೋಸ್ಥ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ  ಇಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ. ಮಹಿಳಾ ಸಬಲೀಕರಣವಾಗದೇ ಸಮ ಸಮಾಜ ನಿರ್ಮಾಣ ಅಸಾಧ್ಯ ಎಂದರು.

ಪ್ರಾಧ್ಯಾಪಕ ಡಾ.ಅಮರೇಶ ನುಗಡೋಣಿ, ವಿವಾಹ ಮತ್ತು ಕುಟುಂಬದ ಘನತೆ ಮರ್ಯಾದೆಗೇಡು ಹತ್ಯೆ ಪ್ರಕರಣಗಳನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಮಾತನಾಡಿ, ಸಮಾಜದಲ್ಲಿ ಜಾತಿ ವ್ಯವಸ್ಥೆ ಹಿಂದೆಂದಿಗಿಂತಲೂ ಬಲಗೊಂಡಿದ್ದು, ಜಾತಿ ಮತ್ತು ಅಂತಸ್ತಿನ ಕಾರಣದಿಂದ ಮರ್ಯಾದೆಗೇಡು ಹತ್ಯೆ ಪ್ರಕರಣಗಳಲ್ಲಿ ಹೆಚ್ಚು ಮಹಿಳೆಯರು ಬಲಿಯಾಗುತ್ತಿದ್ದಾರೆ ಎಂದು ವಿಷಾದಿಸಿ ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣ ಹತ್ಯೆ, ಬಾಲ್ಯವಿವಾಹ, ಆ್ಯಸಿಡ್‌ ದಾಳಿ, ಬಲವಂತದ ವೇಶ್ಯಾವಾಟಿಕೆಯಂತಹ ದೌರ್ಜನ್ಯಗಳು ಎಗ್ಗಿಲ್ಲದೇ ನಡೆಯುತ್ತಿವೆ. ಮಹಿಳೆಯರು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳನ್ನು ಮೆಟ್ಟಿ ನಿಲ್ಲಲು ಕಾನೂನು ಅರಿಯುವುದರ ಜತೆಗೆ ಅವುಗಳನ್ನು ಬಳಸುವ ಮನೋಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದರು.

ಕುಲಸಚಿವ ಡಾ.ಎ.ಸುಬ್ಬಣ್ಣ ರೈ, ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಶೈಲಜ ಹಿರೇಮಠ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ಡೀನರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶಿಲ್ಪಾ ನಿರೂಪಿಸಿದರು. ಬೊಮ್ಮಯ್ಯ ವಂದಿಸಿದರು. ಕನ್ನಡ ಮಹಿಳಾ ಅಧ್ಯಯನ ವಿಭಾಗ ಮತ್ತು ಕಾರ್ಯನಿರತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ನಿವಾರಣೆ ಸಮಿತಿ ಜಂಟಿಯಾಗಿ ಕಾರ್ಯಕ್ರಮ ಸಂಘಟಿಸಿದ್ದವು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.