ಹಂಪಿಯಲ್ಲಿ ಸರಳ ಬ್ರಹ್ಮರಥೋತ್ಸವ
ಹಂಪಿ ವಿರೂಪಾಕ್ಷನಿಗೆ ಸುವರ್ಣ ಮುಖ-ನವರತ್ನ ಖಚಿತ ಕಿರೀಟವಿಲ್ಲದೇ ಅಲಂಕಾರ
Team Udayavani, Apr 9, 2020, 4:07 PM IST
ವಿರೂಪಾಕ್ಷೇಶ್ವರ ಸ್ವಾಮಿ ಮಡಿತೇರಿಗೆ ವಿದ್ಯಾರಣ್ಯ ಭಾರತಿ ಶ್ರೀಗಳು ಚಾಲನೆ ನೀಡಿದರು.
ಹೊಸಪೇಟೆ: ಲಾಕ್ಡೌನ್ ಹಿನ್ನೆಲೆಯಲ್ಲಿ ದಕ್ಷಿಣಕಾಶಿ ಖ್ಯಾತಿಯ ಹಂಪಿ ವಿರೂಪಾಕ್ಷೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಬುಧವಾರ ಸರಳವಾಗಿ ನಡೆಯಿತು. ವಿರೂಪಾಕ್ಷೇಶ್ವರ ಸ್ವಾಮಿ ದೇವಾಲಯದ ಪ್ರಾಂಗಣದಲ್ಲಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ ಮಡಿತೇರು ಸಂಜೆ ರಥೋತ್ಸವ ನಡೆಯಿತು.
ವಿಜಯನಗರ ಅರಸರ ಕಾಲದಿಂದಲೂ ವೈಭವದಿಂದ ನಡೆಯುತ್ತಿದ್ದ ವಿರೂಪಾಕ್ಷೇಶ್ವರ ಸ್ವಾಮಿ, ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ದೇವಸ್ಥಾನದ ಪಟ್ಟದ ಆನೆ ಲಕ್ಷ್ಮೀ, ಅರ್ಚಕರು, ಅಧಿಕಾರಿ ಹಾಗೂ ಸಿಬ್ಬಂದಿಗಳಷ್ಟೇ ಸಾಕ್ಷಿಯಾದರು. ರಥೋತ್ಸವದ ಅಂಗವಾಗಿ ಸಿಂಹ ವಾಹನೋತ್ಸವ, ಚಂದ್ರ ಮಂಡಲ ವಾಹನೋತ್ಸವ, ಸೂರ್ಯಪ್ರಭಾ ವಾಹನೋತ್ಸವ, ಶೇಷ ವಾಹನೋತ್ಸವ, ಪುಷ್ಪ ಮಂಟಪ ವಾಹನೋತ್ಸವ, ಗಜ ವಾಹನೋತ್ಸವ, ವಿರೂಪಾಕ್ಷೇಶ್ವರ ಕಲ್ಯಾಣೋತ್ಸವ, ತೆಪ್ಪೋತ್ಸವ ಹಾಗೂ ರಜತ ನಂದಿ ವಾಹನೋತ್ಸವ ಸೇರಿದಂತೆ ವಿವಿಧ ಪೂಜಾ ವಿಧಾನಗಳು ನಡೆದವು.
ದೇವಸ್ಥಾನದ ಪ್ರಧಾನ ಅರ್ಚಕ ಪಿ. ಶ್ರೀನಾಥ ಶರ್ಮಾ, ಮುರಳೀಧರ ಶಾಸ್ತ್ರಿ, ಜೆ.ಎಸ್. ಶ್ರೀನಾಥ ಶರ್ಮಾ ಸೇರಿದಂತೆ ಇತರರು ಪೂಜಾ-ವಿಧಿ -ವಿಧಾನಗಳನ್ನು ನೆರವೇರಿಸಿದರು. ಸಾರ್ವಜನಿಕರ ಪ್ರವೇಶ ನಿಷೇಧದ ನಡುವೆಯೂ ನಿತ್ಯ ವಿರೂಪಾಕ್ಷನಿಗೆ ತ್ರಿಕಾಲ ಪೂಜೆ, ನೈವೇದ್ಯ ಸೇರಿದಂತೆ ವಿಶೇಷ ಪೂಜೆಗಳು ನಿರಂತರವಾಗಿ ನಡೆಯುತ್ತಿವೆ.
ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಹಂಪಿ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಇತರೆ ಎಲ್ಲಾ ಪುರಾತನ ದೇಗುಲಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಕಳೆದ ಮಾ.21 ರಿಂದ ನಿಷೇಧ ಹೇರಲಾಗಿತ್ತು. ಈ ಆದೇಶದ ಅನ್ವಯ ಪ್ರವೇಶ ದ್ವಾರವನ್ನು ಬಂದ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಬೇಕಿದ್ದ ಬ್ರಹ್ಮರಥೋತ್ಸವಕ್ಕೆ ಕೊರೊನಾ ಅಡ್ಡಿಯುಂಟು ಮಾಡಿರುವುದು ಭಕ್ತರಿಗೆ ತೀವ್ರ ಬೇಸರ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ