ಕಾರ್ಖಾನೆ ಸಹಯೋಗದಲ್ಲಿ ಕ್ಷೇತ್ರದ ಅಭಿವೃದ್ಧಿ
ಹೊಸಪೇಟೆ ಸಮಗ್ರ ಅಭಿವೃದ್ಧಿಗೆ ಯೋಜನೆ | ಪೌರಾಯುಕ್ತೆ ವರ್ಗಾವಣೆ ಆರೋಪ ಸತ್ಯಕ್ಕೆ ದೂರ
Team Udayavani, Mar 6, 2020, 5:31 PM IST
ಹೊಸಪೇಟೆ: ಸ್ಥಳೀಯ ಕಾರ್ಖಾನೆಗಳ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ವಿಜಯ ನಗರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಆನಂದ ಸಿಂಗ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಯೋಜನೆಯೊಂದನ್ನು ರೂಪಿಸಿ, ಸ್ಥಳೀಯ ಕಾರ್ಖಾನೆಗಳ ಸಹ ಯೋಗದಲ್ಲಿ ಹೊಸ ಪೇಟೆ ನಗರವನ್ನು ಅಭಿವೃದ್ಧಿ ಪಡಿಸಲಾಗುವುದು.
ನಗರದಲ್ಲಿ ನನೆಗುದಿಗೆ ಬಿದ್ದಿರುವ ಸೂಪರ್ ತರ ಕಾರಿ ಮಾರು ಕಟ್ಟೆಯನ್ನು 21 ಕೋಟಿ ರೂ.ವೆಚ್ಚದಲ್ಲಿ ನಿರ್ಮಾ ಣ ಮಾಡಲು ಈ ಹಿಂದೆ ಕ್ರಮ ಕೈಗೊಳ್ಳಲಾಗಿತ್ತು. ಈ ಯೋಜನೆಗೆ ಸಂಬಂಧ ಪಟ್ಟಂತೆ 11 ಕೋಟಿ ರೂ. ಮೀಸ ಲಿಟ್ಟಿದ್ದು, ಉಳಿದ ಹಣವನ್ನು ಜಿಲ್ಲಾ ಖನಿಜ ನಿಧಿಯಿಂದ ಬಳಕೆ ಮಾಡಿಕೊಳ್ಳಲಾಗುವುದು ಎಂದರು.
ಪೌರಾಯುಕ್ತೆ ಜಯಲಕ್ಷ್ಮೀಯವರ ವರ್ಗಾವಣೆ ಮಾಡಲು ಹುನ್ನಾರ ನಡೆದಿದೆ ಎಂದು ಸಂಘ-ಸಂಸ್ಥೆಗಳು ಆರೋಪ ಮಾಡಿರುವುದು ಸತ್ಯಕ್ಕೆ ದೂರವಾಗಿದೆ. ದಕ್ಷ ಹಾಗೂ ಪ್ರಾಮಾ ಣಿಕ ಅಧಿಕಾರಿಯಾಗಿರುವ ಜಯಲಕ್ಷ್ಮೀ ಅವರನ್ನು ನಾನೇ ಕರೆ ತಂದಿದ್ದೇನೆ. ಅವರನ್ನು ವರ್ಗಾವಣೆ ಮಾಡುವ ಮಾತೇ ಬರುವುದಿಲ್ಲ. ವಿಜಯನಗರ ಜಿಲ್ಲೆ ರಚನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ವಿಜಯ ನ ಗರ ಜಿಲ್ಲೆ ಆಗೇ ಆಗುತ್ತೆ ಎಂಬ ವಿಶ್ವಾಸ ವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ