ಎಸ್ಟಿ ಮೀಸಲಾತಿಗೆ ಆಗ್ರಹಿಸಿ ಬೃಹತ್‌ ಸಮಾವೇಶ  

ಫೆ.7ರಂದು ಬೆಂಗಳೂರಿನಲ್ಲಿ ಸಮಾವೇಶ: ಅಯ್ನಾಳಿ ತಿಮ್ಮಪ್ಪ­!  ರಾಜ್ಯದೆಲ್ಲೆಡೆಯಿಂದ 10 ಲಕ್ಷಕ್ಕೂ ಅಧಿಕ ಮಂದಿ ಭಾಗಿ

Team Udayavani, Feb 4, 2021, 8:34 PM IST

ST

ಹೊಸಪೇಟೆ: ಕುರುಬ ಸಮಾಜ ಎಸ್ಟಿ ಮೀಸಲು ಒದಗಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಫೆ. 7ರಂದು ಕಾಗಿನೆಲೆ ಕನಕ ಗುರುಪೀಠದ ಜ. ಶ್ರೀನಿರಂಜನಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಬೆಂಗಳೂರಿನ ನೆಲಮಂಗಲದ ಮೈದಾನದಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ ಎಂದು ಕುರುಬ ಸಮಾಜದ ಎಸ್ಟಿ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ಕೆ.ಎ. ರಾಮಲಿಂಗಪ್ಪ, ಸಮಿತಿಯ ಬಳ್ಳಾರಿ ಜಿಲ್ಲಾಧ್ಯಕ್ಷ ಅಯ್ನಾಳಿ ತಿಮ್ಮಪ್ಪ ತಿಳಿಸಿದರು.

ನಗರದ ಅಮರಾವತಿ ಅತಿಥಿಗೃಹದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನಾನಾ  ಭಾಗಗಳಿಂದ 10 ಲಕ್ಷಕ್ಕೂ ಅಧಿ ಕ ಕುರುಬ ಸಮಾಜ ಬಾಂಧವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳ್ಳಾರಿ, ಹೊಸಪೇಟೆ, ಹೂವಿನಹಡಗಲಿ, ಸಂಡೂರು, ಹಗರಿಬೊಮ್ಮನಹಳ್ಳಿ ಸೇರಿದಂತೆ ಬಳ್ಳಾರಿ ಜಿಲ್ಲೆಯಾದ್ಯಂತ ಬಸ್‌ ಹಾಗೂ ಟ್ರ್ಯಾಕ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಿಂದ 10 ಸಾವಿರ ಜನ ಸಮಾವೇಶಕ್ಕೆ ತೆರಳಲಿದ್ದಾರೆ ಎಂದರು.

ಕುರುಬ ಸಮಾಜದ ಶ್ರೇಯೋಭಿವೃದ್ಧಿಗೆ ಸರಕಾರ ಎಸ್ಟಿ ಮೀಸಲು ಒದಗಿಸಬೇಕು. ಈಗ ವಾಲ್ಮೀಕಿ ಸಮಾಜ ಶೇ. 7.5ರ  ಮೀಸಲಿಗೆ ಆಗ್ರಹಿಸುತ್ತಿದೆ. ಈ ಮೀಸಲು ಒದಗಿಸಿ, ಕುರುಬ ಸಮಾಜ ಹಾಗೂ ಒಬಿಸಿಯಲ್ಲಿರುವ ಇತರೆ ಸಮಾಜಗಳ ಮೀಸಲನ್ನು ಎಸ್ಟಿಯಲ್ಲಿ  ಸೇರಿಸಿ ಮೀಸಲಾತಿ ಒದಗಿಸಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಬೆಂಬಲ: ಕುರುಬ ಸಮುದಾಯವನ್ನು ಎಸ್ಟಿ ಮೀಸಲಾತಿಗೆ ಸೇರಿಸೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಬಲವೂ ಇದೆ. ಸ್ವಾಮೀಜಿಯವರೇ ನೇರ ಸಿದ್ದರಾಮಯ್ಯನವರ ಬಳಿ ಮಾತನಾಡಿದ್ದಾರೆ. ಎಸ್ಟಿ ಮೀಸಲು ದೊರತರೆ ನನಗೆ ಖುಷಿಯಾಗುತ್ತದೆ ಅಂತ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಅವರು ಹೋರಾಟಕ್ಕೆ ಬರದೇ ಇರಬಹುದು. ಅವರ ಬೆಂಬಲ ನಮಗೆ ಇದೆ ಎಂದು ಸ್ಪಷ್ಟಪಡಿಸಿದರು. ಈಗ ಶಾಸಕರು, ಸ್ವಾಮೀಜಿ ಗಟ್ಟಿ ಇದ್ದಾರೆ.ಹೋರಾಟ ಮಾಡೋ ಶಕ್ತಿ ಇದೆ. ಹೀಗಾಗಿ ಸ್ವಾಮೀಜಿಗಳ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ ನಡೆಯುತ್ತಿದೆ ಎಂದರು.

ಶಾಸಕರಾದ ಪಿ.ಟಿ. ಪರಮೇಶ್ವರ ನಾಯ್ಕ, ಈ. ತುಕಾರಾಂ, ಭೀಮಾ ನಾಯ್ಕ, ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಸೇರಿದಂತೆ ಕುರುಬ ಸಮಾಜದ ಸಂಘಸಂಸ್ಥೆಗಳು ಹಾಗೂ ದಾನಿಗಳು ಬಸ್‌ ವ್ಯವಸ್ಥೆ ಮಾಡುತ್ತಿದ್ದಾರೆ. ಪಕತೀತ ಹೋರಾಟವಾಗಿದ್ದು, ರಾಣೆಬೆನ್ನೂರಿನಲ್ಲಿ ಬಿಜೆಪಿ ಶಾಸಕ ಅರುಣಕುಮಾರ ಕೂಡ ಬಸ್‌ ವ್ಯವಸ್ಥೆ ಮಾಡಿದ್ದಾರೆ. ಎಲ್ಲ ಕಡೆಯೂ ಬೆಂಬಲ  ವ್ಯಕ್ತವಾಗಿದೆ. ಇದೊಂದು ನೈಜ ಹೋರಾಟವಾಗಿದ್ದು ಸರಕಾರ ಮೀಸಲು ಒದಗಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ :ವಾಸವೇ ಇಲ್ಲದವರ ಹೆಸರು ಮತದಾರ ಪಟ್ಟಿಯಲ್ಲೇಕೆ ?

ನಗರಸಭೆ ಮಾಜಿ ಸದಸ್ಯ ಚಿದಾನಂದಪ್ಪ ಮಾತನಾಡಿ, ಸಮಾಜ ತೀರಾ ಹಿಂದುಳಿದಿದೆ. ಇದು ರಾಜಕೀಯ ಹೋರಾಟವಲ್ಲ. ಇದು  ಸಮಾಜದ ಹೋರಾಟವಾಗಿದ್ದು, ಸ್ವಾಮೀಜಿಗಳ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ ನಡೆಸಲಾಗುತ್ತಿದೆ. ಹೀಗಾಗಿ ಇದಕ್ಕೆ ಮೂರು ಪಕ್ಷಗಳ ನಾಯಕರ ಬೆಂಬಲವೂ ಇದೆ. ಈ ಹೋರಾಟವನ್ನು ಎಲ್ಲರೂ ಒಗ್ಗೂಡಿ ಯಶಸ್ವಿಗೊಳಿಸಬೇಕು ಎಂದರು. ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚನ್ನಬಸವನಗೌಡ, ಮುಖಂಡರಾದ ಗೋಪಾಲಕೃಷ್ಣ, ಗಂಟೆ ಸೋಮು, ರಾಮನಗೌಡ, ಎಚ್‌. ಮಹೇಶ್‌, ವೀರೇಶ್‌, ಹನುಮೇಶ್‌, ಈರಣ್ಣ, ಪ್ರಕಾಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.