19ರಂದು ಬೃಹತ್‌ ಇ-ಲೋಕ ಅದಾಲತ್‌


Team Udayavani, Aug 29, 2020, 8:28 PM IST

19ರಂದು ಬೃಹತ್‌ ಇ-ಲೋಕ ಅದಾಲತ್‌

ಬಳ್ಳಾರಿ: ಕೋವಿಡೆದಂತ ಭಯಾನಕ ಸನ್ನಿವೇಶದಲ್ಲಿ ಇಡೀ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಇ-ಲೋಕ ಅದಾಲತ್‌ನ್ನು ಸೆ.19ರಂದು ರಾಜ್ಯದಲ್ಲಿ ಏರ್ಪಡಿಸಲಾಗಿದ್ದು, ಬಾಕಿ ಇರುವ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇದರ ಪ್ರಯೋಜನವನ್ನು ಬಾಕಿ ಪ್ರಕರಣ  ಗಳಿರುವ ಜನರು ಪಡೆದುಕೊಳ್ಳಬೇಕು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ| ಅರವಿಂದಕುಮಾರ್‌ ಹೇಳಿದರು.

ಬೆಂಗಳೂರು ಹೈಕೋರ್ಟ್‌ ಮೂಲಕ ಸಂಚಾರಿ ಹೈಕೋರ್ಟ್‌ ಪೀಠಗಳ ನ್ಯಾಯಾಧೀಶರು, ಜಿಲ್ಲಾ ಪ್ರಧಾನಮತ್ತು ಸತ್ರ ನ್ಯಾಯಾಧೀಶರು ಹಾಗೂ  ಮಾಧ್ಯಮದವರೊಂದಿಗೆ ಶುಕ್ರವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಉದ್ದೇಶ ಸರ್ವರಿಗೂ ನ್ಯಾಯ ಮತ್ತು ಸಮಾನ ಅವಕಾಶ ಕಲ್ಪಿಸುವುದಾಗಿದ್ದು, ಈ ನಿಟ್ಟಿನಲ್ಲಿ ಕೋವಿಡ್ ಇರುವಿಕೆಯ ಈ ಸಂದರ್ಭದಲ್ಲಿ ಬೃಹತ್‌ (ಮೇಲ್‌) ಇ-ಲೋಕ ಅದಾಲತ್‌ ಆಯೋಜಿಸಲಾಗಿದೆ. ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿ ಸಿದಂತೆ ವಕೀಲರ ಮೂಲಕ ಅಥವಾ ನೇರವಾಗಿ ಸಾರ್ವಜನಿಕರೇ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಹೇಗೆ ಸಂಪರ್ಕಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಲಿಂಕ್‌ಗಳು, ಇ-ಮೇಲ್‌ ವಿವರ ಹಾಗೂ ಸಂಬಂಧಿಸಿದ ದೂರವಾಣಿ ಸಂಖ್ಯೆ ತಿಳಿಸಲಾಗುತ್ತದೆ ಎಂದರು.

ಇ-ಲೋಕ ಅದಾಲತ್‌ ಯಶಸ್ವಿಯಾಗಿ ಆಯೋಜನೆ ಮಾಡುವುದಕ್ಕೆ ಸಂಬಂಧಿ ಸಿದಂತೆ ಈಗಾಗಲೇ 4 ಬಾರಿ ಸಭೆ ನಡೆಸಲಾಗಿದೆ ಎಂದು ವಿವರಿಸಿದ ನ್ಯಾ| ಅರವಿಂದಕುಮಾರ್‌ ಅವರು, ಯಾವುದೇ ಕಾರಣಕ್ಕೂ ಕಕ್ಷಿದಾರರು ನ್ಯಾಯಾಲಯಕ್ಕೆ ಬರುವುದಿಲ್ಲ ಎಂದರು.

ವಿಮಾ ಕಂಪನಿಗಳ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಕಾರ್ಮಿಕ ವಿವಾದ, ಬ್ಯಾಂಕ್‌ ವಿಷಯಗಳು, ಚೆಕ್‌ ಬೌನ್ಸ್‌, ಹಣ ವಸೂಲಾತಿ ಪ್ರಕರಣಗಳು, ಕ್ರಿಮಿನಲ್‌ ಕಂಪೌಂಡೇಬಲ್‌ ಅಪರಾಧಗಳು, ಎಂಎಸಿಟಿ ಪ್ರಕರಣಗಳು, ಭೂಸ್ವಾಧೀನ, ವಿದ್ಯುತ್‌, ಎಂಎಂಡಿಆರ್‌ ಕಾಯ್ದೆ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಇಂತಹ ಸಂದರ್ಭದಲ್ಲಿ ಜನರಿಗೆ ಒಳ್ಳೆಯ ಸದಾವಕಾಶ ಒದಗಿ ಬಂದಿದ್ದು, ಇದನ್ನು ಬಳಸಿಕೊಳ್ಳಬೇಕು ಎಂದು ಅವರು ಕೇಳಿಕೊಂಡರು.

ಹೈಕೋರ್ಟ್‌ ನ್ಯಾ| ಅಲೋಕಕುಮಾರ್‌ ಮಾತನಾಡಿ, ಕೊರೊನಾ ಮಹಾಮಾರಿಯ ಈ ಸಂದರ್ಭದಲ್ಲಿ ಇ-ಲೋಕ ಅದಾಲತ್‌ ಅತ್ಯಂತ ಪರಿಣಾಮಕಾರಿ ಆಗಿದೆ. ವಿವಿಧ ವಿಷಯಗಳಲ್ಲಿ ಸಾವಿರಾರು ವ್ಯಾಜ್ಯಗಳಿವೆ. ಅವುಗಳನ್ನು ಇ-ಅದಾಲತ್‌ನಲ್ಲಿ ಪರಿಹರಿಸಬಹುದು. ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವವರು ಸೆ.18ರವರೆಗೂ ತಮ್ಮ ಮಾಹಿತಿ ಸಲ್ಲಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ 2ನೇ ಅಪರ ಜಿಲ್ಲಾ ನ್ಯಾಯಾಧೀಶರಾದ ಖಾಸಿಂ ಚೂರಿಖಾನ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೀಣಾ ಎಂ.ನಾಯ್ಕರ್‌, 4ನೇ ಅಪರ ಜಿಲ್ಲಾ ನ್ಯಾಯಾ ಧೀಶರಾದ ಎನ್‌. ಬಿ. ಭವಾನಿ, ಜಿಲ್ಲಾ ನ್ಯಾಯಾಲಯದ ವ್ಯವಸ್ಥಾಪಕರಾದ ಈರೇಶ ಅಂಗಡಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.