ಕಬ್ಬು ಕಟಾವಿಗೆ ರೈತರ ಒತ್ತಾಯ

ಅವಧಿ ಮುಗಿದರೂ ಕಟಾವಿಗೆ ಕಾರ್ಖಾನೆಯವರ ಹಿಂದೇಟು

Team Udayavani, Jan 15, 2020, 12:41 PM IST

15-January-9

ಹೂವಿನಹಡಗಲಿ: ಪಟ್ಟಣದ ಗಂಗಾಪುರ ಶುಗರ್ ಕಚೇರಿ ಮುಚ್ಚಿ ತಾಲೂಕಿನ ತಿಪ್ಪಾಪುರ, ಮೀರಾಕೊರ್ನಹಳ್ಳಿ ಹಾಗೂ ಇತರೆ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಎಜಿಎಂ ಮಂಜುನಾಥ ಅವರನ್ನು ತರಾಟೆಗೆ ತೆಗೆದುಕೊಂಡ ರೈತರು ತಮ್ಮ ಅಳಲನ್ನು ಹೇಳಿಕೊಂಡರು. ನಿಮ್ಮ ಕಚೇರಿಗೆ ಬಂದು ರೈತರ ಸಮಸ್ಯೆ ಹೇಳಿಕೊಂಡರೆ ಕೇಳುವವರಿಲ್ಲ. ಯಾರೊಬ್ಬರು ಫೋನ್‌ ರಿಸಿವ್‌ ಮಾಡಿ ಮಾತನಾಡುತ್ತಿಲ್ಲ. ಕಬ್ಬು ಕಟಾವ್‌ ಮಾಡಲು ತಿಳಿಸಿದಾಗ್ಯೂ ತುಂಬಾ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಕಟಾವ್‌ ದಿನಾಂಕ ಮುಗಿದರೂ ಕಟಾವ್‌ಗೆ ಬಾರದಿದ್ದರೆ ಹೇಗೆ, ರೈತರಿಗೆ ಇದರಿಂದಾಗಿ ತುಂಬಾ ನಷ್ಟವಾಗುತ್ತದೆ. ಮೇಲಾಗಿ ದರ ನಿಗದಿ ಮಾಡಿದ ಮೇಲೆ ಕಬ್ಬು ಕಟಾವ್‌ ಮಾಡಲು ರೈತರು ಹೆಚ್ಚುವರಿಯಾಗಿ ಒಂದು ಟನ್‌ ಕಬ್ಬಿಗೆ 350 ರೂ. ಕಟಾವ್‌ ಮಾಡಲು ಕೇಳುತ್ತಾರೆ. ಅಲ್ಲದೆ ಅವರಿಗೆ ಖುಷಿಯಾಗಿ ಕುರಿ, ಕೋಳಿ ಕೊಡಬೇಕು.
ಹಿಂಗಾದರೆ ರೈತರು ಬದುಕುವುದಾದರೂ ಹೇಗೆ ಎಂದು ಎಜಿಎಂ ಅವರನ್ನು ತರಾಟೆಗೆ ತೆಗೆದುಕೊಂಡರು.

ಗಂಗಾಪುರ ಶುಗರ್ ಫ್ಯಾಕ್ಟರಿ ಎಜಿಎಂ ಮಂಜುನಾಥ ಮಾತನಾಡಿ, ರೈತರು
ಬೆಳೆದಿರುವ ಕಬ್ಬು ಕಟಾವ್‌ ಮಾಡಲು ಕೂಲಿ ಕಾರ್ಮಿಕರ ಸಮಸ್ಯೆಯಿದ್ದು, ಸಾಧ್ಯವಾದಷ್ಟು ರೈತರ ಕಬ್ಬು ಜನವರಿ ಕೊನೆ ವಾರದೊಳಗೆ ಹಂತ ಹಂತವಾಗಿ ಕಟಾವ್‌ ಮಾಡಲಾಗುವುದು ಎಂದು ತಿಳಿಸಿದರು.

ರೈತರು ಬೆಳೆದಿರುವ ಕಬ್ಬು ಕಟಾವ್‌ ಮಾಡಲು ಈಗಾಗಲೇ ಮಹಾರಾಷ್ಟ್ರದ
ಕಾರ್ಮಿಕರಿಗೆ ಫ್ಯಾಕ್ಟರಿ ವತಿಯಿಂದ ಸುಮಾರು 345 ತಂಡಗಳಿಗೆ ಮುಂಗಡ ಹಣ ಸಹ ನೀಡಲಾಗಿದೆ. ಅದರಲ್ಲಿ 175 ತಂಡದವರು ಮಾತ್ರ ಬಂದಿದ್ದಾರೆ. ಇದರಿಂದಾಗಿ ತೊಂದರೆಯಾಗುತ್ತಿದೆ. ಸಾಧ್ಯವಾದಷ್ಟು ಬೇಗನೆ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ಅಧಿಕಾರಿ ತಿಳಿಸಿದರು.

ಆದರೆ ರೈತರಲ್ಲಿ ಮೊದಲು ನನ್ನ ಕಬ್ಬು ಕಟಾವ್‌ ಮಾಡಿಕೊಳ್ಳಲಿ ಎಂದು ಅವಸರ ಮಾಡುತ್ತಿದ್ದಾರೆ. ಇದರಿಂದಾಗಿ ಕೆಲ ರೈತರು ತಾವೇ ಸ್ವತಃ ಕಾರ್ಮಿಕರಿಗೆ ಹೆಚ್ಚುವರಿ ಹಣ ನೀಡಲು ಮುಂದಾಗುತ್ತಿದ್ದಾರೆ. ಕಾರಣ ಈ ಖುಷಿ ಪದ್ಧತಿ ಬಿಡಿಸಲು ತುಂಬಾ ಕಷ್ಟವಾಗುತ್ತಿದೆ ಎಂದರು.

ಹಡಗಲಿ ತಾಲೂಕಿನಲ್ಲಿ ಒಟ್ಟು ಸುಮಾರು 10 ಸಾವಿರ ಎಕರೆಯಷ್ಟು ಕಬ್ಬು ಬೆಳೆಯಲಾಗಿದ್ದು, ಇದರಲ್ಲಿ 3700 ಮೈಲಾರ ಶುಗರ್ಸ್ ವ್ಯಾಪ್ತಿಗೆ ಹಾಗೂ 6300 ನಮ್ಮ ವ್ಯಾಪ್ತಿಗೆ ಬರುತ್ತಿದ್ದು, ಪ್ರತಿ ದಿನ 5000 ಟನ್‌ ನಷ್ಟು ಕಬ್ಬು ಅರೆಯವ ಸಾಮರ್ಥ ಫ್ಯಾಕ್ಟರಿಗೆ ಇರುತ್ತದೆ. ಹೀಗೆ ಹಂತ, ಹಂತವಾಗಿ ಒಟ್ಟಾರೆಯಾಗಿ ಜನವರಿ ಅಥವಾ ಫೆಬ್ರವರಿಯಲ್ಲಿ ರೈತರ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರೈತರು, ನೀವು ಸಾಧ್ಯವಾದಷ್ಟು ಬೇಗನೆ ಸಮಸ್ಯೆ ಬಗೆಹರಿಸದಿದ್ದಲ್ಲಿ ಫ್ಯಾಕ್ಟರಿಗೆ ಹೋಗುವ ಕಬ್ಬಿನ ಲಾರಿ ತಡೆ ಹಿಡಿದು ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ರೈತ ಮುಖಂಡರಾದ ಜಮೀರುದ್ದೀನ್‌, ಹೇಮರೆಡ್ಡಿ, ಶರಣ, ಪಿ.ಎಂ.ಕೊಟ್ರಯ್ಯ, ಬಸವರಾಜ್‌ ಐನಳ್ಳಿ, ಮನೋಹರ ಮಂಜುನಾಥ ಗೌಡ್‌, ಮಂಜುನಾಥ, ಹನುಮಂತರೆಡ್ಡಿ, ಟಿ. ಹಾಲೇಶ್‌, ತಿಪ್ಪಾಪುರ ಶೇಖರಪ್ಪ ಮುಂತಾದವರು ಇದ್ದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.