ಮೆಕ್ಕೆಜೋಳಕ್ಕೆ ಸೈನಿಕಹುಳು ಬಾಧೆ: ಅಧಿಕಾರಿಗಳ ತಂಡ ಭೇಟಿ
Team Udayavani, Jul 4, 2020, 5:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೂವಿನಹಡಗಲಿ: ತಾಲೂಕಿನಲ್ಲಿ ರೈತರಿಗೆ ಒಂದಿಲ್ಲೊಂದು ಕಾಟ ತಪ್ಪಿದಲ್ಲ ಎನ್ನುವಂಥ ಸ್ಥಿತಿ ನಿರ್ಮಾಣವಾಗಿದ್ದು ತಾಲೂಕಿನ ರೈತರ ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ ಕಾಡಲಾರಂಬಿಸಿದೆ.
ನಿನ್ನೆ ದಿವಸ ಹುಳು ಬಾಧೆ ಕಾಣಿಸಿಕೊಂಡಿರುವ ತಾಲೂಕಿನ ಹಗರನೂರು, ಕೊಳಚಿ, ಚಿಕ್ಕ ಕೊಳಚಿ, ನಾಗ್ತಿಬಸಾಪುರ ಹಾಗೂ ಹಡಗಲಿ ಹೊಬಳಿ ರೈತ ಹೊಲಗಳಿಗೆ ಕೃಷಿ ಅಧಿಕಾರಿಗಳ ತಂಡ ಭೇಟಿ ನೀಡಿ ಸೈನಿಕ ಹುಳು ಬಾಧೆ ತಡೆಗಟ್ಟಲು ಸೂಕ್ತ ಮಾಹಿತಿ ನೀಡಿದರು. ಸೈನಿಕ ಹುಳುನಿಯಂತ್ರಣಕ್ಕಾಗಿ ಇಮ್ಯಾಕ್ವಿನ್ ಬೆಂಜಿಯೇಟ್ ಶಿಫಾರಸ್ಸು ಮಾಡಲಾಗಿದ್ದು ಈಗಾಗಲೇ ಆವಶ್ಯಕ ರೈತರಿಗೆ ವಿತರಣೆ ಮಾಡಲಾಗುತ್ತಿದ್ದು ಹೆಚ್ಚಿನ ಬೇಡಿಕೆ ಕಂಡು ಬಂದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.
ಪ್ರಸ್ತುತ ಓಷಧಿಯನ್ನು ಯಾವ ರೀತಿ ಸಿಂಪಡಣೆ ಮಾಡಬೇಕು ಎನ್ನುವ ಮಾಹಿತಿ ಸಮಗ್ರವಾಗಿ ರೈತರಿಗೆ ತಿಳಿ ಹೇಳಿದರು. ಪ್ರತಿ ಲೀಟರ್ ಗೆ 0.4ರಿಂದ 0.5 ಗ್ರಾಂನಂತೆ ಇಆಮ್ಯಾಕ್ವಿನ್ ಬೆಂಜೋಯೇಟ್ ಬೆರಸಿ ಮೆಕ್ಕೆಜೋಳ ಬೆಳೆ ಸುಳಿಗೆ ಸಿಂಪಡಣೆ ಮಾಡಬೇಕು. ರೈತರು ಸಂಜೆ ವೇಳೆ ಔಷಧಿ ಸಿಂಪಡಣೆ ಮಾಡುವುದರಿಂದಾಗಿ ಹೆಚ್ಚು ಪರಿಣಾಮಕಾರಿಯಾಗಿ ಹುಳು ಸಾಯುವುದು ಎಂದು ಕೃಷಿ ಅಧಿಕಾರಿ ನೀಲಾನಾಯ್ಕ ತಿಳಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕೃಷಿ ಅಧಿಕಾರಿ ರಾಜಶೇಖರ್ ನಿಂಗಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ