ಮೆಕ್ಕೆ ಜೋಳ ದರ ಕುಸಿತ: ಅನ್ನದಾತ ಕಂಗಾಲು
ಉತ್ತಮ ದರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುವ ಸ್ಥಿತಿ | ಕೊರೊನಾ ಹೊಡೆತಕ್ಕೆ ಇಳಿದ ದರ
Team Udayavani, Mar 20, 2020, 12:59 PM IST
ಹೂವಿನಹಡಗಲಿ: ತಾಲೂಕಿನಲ್ಲಿ ರೈತರು ಬೆಳೆದ ಮೆಕ್ಕೆಜೋಳಕ್ಕೆ ಉತ್ತಮ ದರ ಸಿಗದೇ ರೈತರು ಕಂಗಾಲಾಗಿದ್ದಾರೆ. ತಾಲೂಕಿನಲ್ಲಿ ರೈತರು ಬೆಳೆದ ಮೆಕ್ಕೆಜೋಳ ವ್ಯಾಪಾರ ಮಾಡದೇ ಹಾಗೆಯೇ ತೆನೆ ಸಮೇತ ಇಟ್ಟುಕೊಂಡಿದ್ದಾರೆ. ಇನ್ನೂ ಕೆಲವರು ಜಿನ್ ಮಾಡಿಸಿ ದರ ಸಿಗದೇ ಉತ್ತಮ ದರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಕಳೆದ ನಾಲ್ಕಾರು ತಿಂಗಳಿಂದಲೂ ರೈತರು ತಮ್ಮ ಮೆಕ್ಕೆಜೋಳ ಬೆಳೆಯನ್ನು ಹಾಗೆಯೇ ಇಟ್ಟುಕೊಂಡಿದ್ದರು. ನವೆಂಬರ್-ಡಿಸೆಂಬರ್ ಆಸುಪಾಸಿನಲ್ಲಿ ಉತ್ತಮ ದರ ದೊರಕಿತ್ತಾದರೂ ರೈತರು ಇನ್ನೂ ಹೆಚ್ಚಿನ ನಿರೀಕ್ಷೆಯಿಂದಾಗಿ ತಮ್ಮ ಬೆಳೆಯನ್ನು ಮಾರಾಟ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು.
ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಪ್ರತಿ ಕ್ವಿಂಟಲ್ ಮೆಕ್ಕೆಜೋಳಕ್ಕೆ ಸುಮಾರು 2100 ರೂಗಳವರೆಗೆ ದರ ನಿಗದಿಯಾಗಿತ್ತು. ಆದರೆ ಕೆಲ ರೈತರು ಹೆಚ್ಚಿನ ದರ ನಿರೀಕ್ಷೆಗಾಗಿ ತಮ್ಮ ಬೆಳೆಯನ್ನು ಹಾಗೆಯೇ ಇಟ್ಟುಕೊಂಡಿದ್ದರು.
ಈಗ ವಿಶ್ವ ವ್ಯಾಪಿ ಹಬ್ಬಿರುವ ಕೊರೊನಾ ದುಷ್ಪರಿಣಾಮದಿಂದಾಗಿ ರೈತರ ಮೇಲೆ ತುಂಬಾ ಹೊಡೆತ ಬಿದ್ದಿದ್ದು ಮೆಕ್ಕೆಜೋಳ ತೆಗೆದುಕೊಳ್ಳಲು ಯಾರೊಬ್ಬರು ಮುಂದೆ ಬಾರದೇ ದರ ಪಾತಾಳಕ್ಕೆ ಕುಸಿದಿದೆ. ಪ್ರತಿ ಕ್ವಿಂಟಲ್ಗೆ 2100 ರೂ ಇದ್ದದ್ದು ಈಗ 1200 ಹಾಗೂ 1000 ರೂಗಳಿಗೆ ಮಾರಾಟ ಮಾಡಲು ದರ ನಿಗದಿ ಮಾಡುತ್ತಿದ್ದಾರೆ.
ಇದರಿಂದಾಗಿ ರೈತರಿಗೆ ಪ್ರತಿ ಕ್ವಿಂಟಲ್ಗೆ ಬರೋಬ್ಬರಿ ಸಾವಿರ ರೂಗಳ ನಷ್ಟವಾಗುತ್ತಿದ್ದು ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಮೆಕ್ಕೆಜೋಳ ಖರೀದಿ ಕೇಂದ್ರ: ತಾಲೂಕಿನಲ್ಲಿ ಇಗಾಗಲೇ ಕೆಲ ರೈತ ಸಂಘಟನೆಗಳು, ಮುಖಂಡರುಗಳು ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯ ಮಾಡಿದ್ದಾರೆ. ಅಲ್ಲದೆ ಸ್ವತಃ ಕ್ಷೇತ್ರದ ಶಾಸಕರೇ ಸರ್ಕಾರದ ಹಂತದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸರ್ಕಾರದ ಹಂತದಲ್ಲಿ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಈ ಕೂಡಲೇ ತೆರೆದು ರೈತರ ಸಹಾಯಕ್ಕೆ ಧಾವಿಸಬೇಕಾಗಿದೆ. ಇಲ್ಲವಾದಲ್ಲಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ.
ರೈತರು ಬೆಳೆದಿರುವ ಮೆಕ್ಕೆಜೋಳಕ್ಕೆ ಬೆಲೆ ಇಲ್ಲದೆ ಕಂಗಾಲಾಗಿದ್ದಾನೆ. ಈ ಕೂಡಲೇ ರಾಜ್ಯ ಸರ್ಕಾರ ರೈತರಿಗೆ ಅನುಕೂಲವಾಗಲು ಖರೀದಿ ಕೇಂದ್ರ ಆರಂಭಿಸಬೇಕು. ರಾಜ್ಯ ಸರ್ಕಾರ ತಕ್ಷಣ ರೈತರ ನೆರವಿಗೆ ಧಾವಿಸಬೇಕು.
ಬಿ.ಎಲ್. ಶ್ರೀಧರ,
ರೈತ ಮುಖಂಡರು
ವಿಶ್ವನಾಥ ಹಳ್ಳಿಗುಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್