ಸಿದ್ದರಾಮಯ್ಯ ಸಿಎಂ ಆಗಲೆಂದು ಆಸೆ ಪಡುವವರಲ್ಲಿ ನಾನೂ ಒಬ್ಬ: ಸಚಿವ ರಾಮುಲು


Team Udayavani, Aug 16, 2022, 5:12 PM IST

ಸಿದ್ದರಾಮಯ್ಯ ಸಿಎಂ ಆಗಲೆಂದು ಆಸೆ ಪಡುವವರಲ್ಲಿ ನಾನೂ ಒಬ್ಬ: ಸಚಿವ ರಾಮುಲು

ಬಳ್ಳಾರಿ: ಹಿಂದುಳಿದಂತಹ ವಿಚಾರ ಬಂದಾಗ ನಾನು-ಸಿದ್ದರಾಮಯ್ಯ ಒಂದೇ. ಇಂದಲ್ಲ, ನಾಳೆ ರಾಜಕೀಯದಲ್ಲಿ ಇರೋದರೊಳಗೆ ಸಿದ್ದರಾಮಯ್ಯನವರ ಜತೆ ಒಂದೇ ವೇದಿಕೆಯಲ್ಲಿ ಬರುವವರಲ್ಲಿ ನಾನು ಸಹ ಒಬ್ಬ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ಇಲ್ಲಿನ ದೇವಿನಗರ ಬಳಿ ಜಿಲ್ಲಾ ಕುರುಬರ ಸಂಘ ನಿರ್ಮಿಸಿರುವ ವಿದ್ಯಾರ್ಥಿ ವಸತಿ ನಿಲಯದ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಮುಲು ಕುರುಬರ ವಿರುದ್ಧ-ಸಿದ್ದರಾಮಯ್ಯ ನನ್ನ ವಿರುದ್ಧ ಎಂದು ಯಾರೂ ತಿಳಿದುಕೊಳ್ಳೋಕೆ ಹೋಗಬೇಡಿ. ಅವಕಾಶ ಸಿಕ್ಕಲ್ಲಿ ಸಿದ್ದರಾಮಯ್ಯ ಸಹ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವವರಲ್ಲಿ ನಾನೂ ಒಬ್ಬ. ನಾನು ಸಿಎಂ ಆಗುತ್ತೇನೆ ಎಂದರೆ ಸಿದ್ದರಾಮಯ್ಯರು ಸಹ ಒಪ್ಪುತ್ತಾರೆ. ದೊಡ್ಡ ಜಾತಿ ವ್ಯವಸ್ಥೆಯಲ್ಲಿ ಇವೆಲ್ಲ ರಾಜಕಾರಣದ ತಂತ್ರಗಳು. ಇವೆಲ್ಲವನ್ನೂ ಮಾಡಿಕೊಂಡು ಹೋದಲ್ಲಿ ರಾಜಕೀಯದಲ್ಲಿ ಅರ್ಥವಾಗಲಿದೆ. ಹಾಗಾಗಿ ಹಿಂದುಳಿದ ವಿಚಾರ ಬಂದಾಗ ನಾನು-ಸಿದ್ದರಾಮಯ್ಯ ನಾವೆಲ್ಲರೂ ಒಂದೇ. ನಾವು ರಾಜಕಾರಣದಲ್ಲಿ ಇರುವುದರೊಳಗೆ ನಾನು-ಸಿದ್ದರಾಮಯ್ಯರು ಒಂದೇ ವೇದಿಕೆಯಲ್ಲಿ ಬರುವವರಲ್ಲಿ ನಾನು ಒಬ್ಬನು ಎನ್ನುವ ಮೂಲಕ ಕುರುಬ ಸಮುದಾಯದಲ್ಲಿದ್ದ ತಮ್ಮ ಮೇಲಿನ ಅಸಮಾಧಾನವನ್ನು ಹೋಗಲಾಡಿಸಲು ಯತ್ನಿಸಿದರು.

ಒಗ್ಗೂಡಿಸುವ ಪ್ರಯತ್ನ; ಹಿಂದುಳಿದ ಎಲ್ಲ ವರ್ಗಗಳನ್ನು ಒಗ್ಗೂಡಿಸುವ ಪ್ರಯತ್ನ ನಾನು-ಸಿದ್ದರಾಮಯ್ಯ ಮಾಡುತ್ತಿದ್ದೇವೆ. ಎಲ್ಲೋ ಒಂದು ಕಡೆ ಕ್ರಾಂತಿ ಆಗಬೇಕು. ನಮ್ಮಲ್ಲಿ ಒಡಕಾಗಬಾರದು. ರಾಜಕಾರಣದಲ್ಲಿ ಎದುರಿಸುತ್ತೇವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮುಲು-ಸಿದ್ದರಾಮಯ್ಯ ಇಬ್ಬರೂ ಎರಡೆರಡು ಕಡೆ ಸ್ಪರ್ಧಿಸಿ, ಒಂದು ಕಡೆ ಸೋತು-ಮತ್ತೊಂದು ಕಡೆ ಗೆದ್ದರು. ಆದರೆ, ಹೇಗೆ ಗೆದ್ದರು ಎಂಬುದನ್ನು ಒಮ್ಮೆ ಯೋಚನೆ ಮಾಡಬೇಕು. ಅದು ನಿಮಗೆ ಅರ್ಥವಾಗಲ್ಲ. ಸಂದರ್ಭ ಬಂದಾಗ ನಾನು ಹೇಳುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು.

ನಾನು ಯಾರಿಗೂ ಹೆದರಲ್ಲ; ನಾನು ಯಾರಿಗೂ ಹೆದರಲ್ಲ. ನಾನು ಯಾರಿಗೂ ಗುಲಾಮನಲ್ಲ. ಯಾರ ಕೈಯಲ್ಲೂ ಕೆಲಸ ಮಾಡಲ್ಲ ಎಂದ ಸಚಿವ ರಾಮುಲು, ನಮ್ಮ ಸಮುದಾಯಗಳೇ ಹೀಗೆ. ಬೇಕಿದ್ದರೆ ಸಿದ್ದರಾಮಯ್ಯರನ್ನು ಒಮ್ಮೆ ಬಾದಾಮಿ ಹೇಗೆ ಗೆದ್ದೀರಿ ಎಂದು ಕೇಳಿ. ಏಕೆಂದರೆ ನಮ್ಮೆಲ್ಲರ ದೋಸ್ತಿ ಹಂಗಿದೆ. ಸಿದ್ದರಾಮಯ್ಯರಿಗೆ ರಾಮುಲು ವಿರುದ್ದ ಅಂತಹ ನೀವು ಅಂದುಕೊಳ್ಳಬಹುದು. ನೋಡೋಕೆ ಮಾತ್ರ ನಾವು ವಿರುದ್ಧ. ನಾವಿಬ್ಬರು ದೋಸ್ತುಗಳು. ನಾವಿಬ್ಬರೂ ರಾಜಕಾರಣದಲ್ಲಿದ್ದು, ವಿಧಾನಸೌಧ ಪ್ರವೇಶ ಮಾಡಬೇಕಾದರೆ ಏನೋ ಮಾಡಿಕೊಳ್ಳುತ್ತೇವೆ. ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯರು ಮತ್ತೊಮ್ಮೆ ಸಿಎಂ ಆಗಲಿ. ನಮ್ಮ ಹಿಂದುಳಿದ ಸಮುದಾಯಗಳು ಒಂದಾಗಬೇಕು. ಹಿಂದುಳಿದ ಎಲ್ಲ ಸಮುದಾಯಗಳು ದೊಡ್ಡ ಮಟ್ಟದಲ್ಲಿ ಬೆಳೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕುರುಗೋಡು: ಹಳೆ ಊರು ಮಾರೆಮ್ಮ ದೇವಿಗೆ ವಿಶೇಷ ಪೂಜೆ: ಅನ್ನ ಸಂತರ್ಪಣೆ

ದೇಶದಲ್ಲಿ ಕ್ರಾಂತಿ: ಹಿಂದುಳಿದ ಸಮುದಾಯಗಳು ಒಗ್ಗೂಡಿದಲ್ಲಿ ರಾಜ್ಯ ಮಾತ್ರವಲ್ಲ. ಇಡೀ ದೇಶದಲ್ಲಿ ಕ್ರಾಂತಿ ಮಾಡಬಹುದು. ಅಂತಹ ವ್ಯವಸ್ಥೆ ಆಗಬೇಕಾದರೆ ನಾವೆಲ್ಲರೂ ಒಗ್ಗೂಡಬೇಕು. ಆ ಮೂಲಕ ರಾಜಕಾರಣದಲ್ಲಿ ಶಕ್ತಿ ಬೆಳೆಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಕುರುಬ ಸಮಾಜದ ವಿರೋಧಿಯಲ್ಲ: ನಾನು ಈ ಕಾರ್ಯಕ್ರಮಕ್ಕೆ ಬರಲ್ಲ, ಸಿದ್ದರಾಮಯ್ಯ ವಿರುದ್ದ ಸ್ಪರ್ಧೆ ಮಾಡಿದ್ದಕ್ಕೆ ಕುರುಬ ಸಮುದಾಯಕ್ಕೆ ನನ್ನ ಮೇಲೆ ಸಿಟ್ಟಿದೆ ಎಂದಿದ್ದೆ. ಆದರೆ, ಶಾಸಕ ಸೋಮಶೇಖರ ರೆಡ್ಡಿ ಅವರು ಹಾಗೇನಿಲ್ಲ ಎಂದು ಕರೆದುಕೊಂಡು ಬಂದರು. ರಾಜಕೀಯದಲ್ಲಿ ನಾನು ಮತ್ತು ಸಿದ್ದರಾಮಯ್ಯನವರು ಶ್ರೇಷ್ಠರಿದ್ದೇವೆ. ಯಾರೂ ಅನ್ಯಥಾ ಭಾವಿಸಬೇಡಿ ಎಂದು ಸಿದ್ದರಾಮಯ್ಯ ಅವರಿಗೆ ಹೋಲಿಸಿಕೊಂಡರು. ಒಮ್ಮೊಮ್ಮೆ ಸಿದ್ದರಾಮಯ್ಯ  ಮತ್ತು ನಾನು ಏನೇನೋ ಮಾತನಾಡುತ್ತಿರುತ್ತೇವೆ. ವೈಯಕ್ತಿಕವಾಗಿ ನಮಗೂ ಅವರಿಗೂ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ಸಿದ್ದರಾಮಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗ್ರಾಮೀಣ ಶಾಸಕ ಬಿ.ನಾಗೇಂದ್ರ ಮಾತನಾಡಿದರು. ಮೇಯರ್ ರಾಜೇಶ್ವರಿ ಸುಬ್ಬರಾಯುಡು, ಬುಡಾ ಅಧ್ಯಕ್ಷ ಪಾಲಣ್ಣ, ಸಂಘದ ಜಿಲ್ಲಾಧ್ಯಕ್ಷ ಕೆ.ರ‍್ರಿಗೌಡ, ಮಾಜಿ ಮೇಯರ್ ಕೆ.ಬಸವರಾಜ್, ಮಾಜಿ ಶಾಸಕ ಕೆ.ಎಸ್.ಎಲ್.ಸ್ವಾಮಿ, ಮಾಜಿ ಸಂಸದೆ ಜೆ.ಶಾಂತಾ, ಶಶಿಕಲಾ, ಸಂಘದ ನಿರ್ದೇಶಕ ಕೆ.ಆರ್.ಮಲ್ಲೇಶ್ ಕುಮಾರ್, ಪಾಲಿಕೆ ಸದಸ್ಯರು, ಸಮುದಾಯದ ಮುಖಂಡರು ಇತರರಿದ್ದರು.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.