ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈ ತುಕರಾಂ
Team Udayavani, Dec 1, 2018, 6:35 AM IST
ಕಂಪ್ಲಿ (ಬಳ್ಳಾರಿ): ಕಳೆದ ಎರಡು ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳಿಂದ ಕ್ಷೇತ್ರದ ಜನ ನನ್ನನ್ನು ಮೂರನೇ ಬಾರಿಗೆ ಆಯ್ಕೆ ಮಾಡಿದ್ದು, ನನ್ನ ಸಾಧನೆ, ಕ್ಷೇತ್ರದ ಅಭಿವೃದ್ಧಿ ಕುರಿತ ಸಂಪೂರ್ಣ ಮಾಹಿತಿ ಪಕ್ಷದ ಹೈಕಮಾಂಡ್ ಬಳಿ ಇದೆ.
ಹೀಗಾಗಿ, ನನಗೆ ಸಚಿವ ಸ್ಥಾನ ಸಿಗಬಹುದು ಎಂದು ಸಂಡೂರು ಕ್ಷೇತ್ರದ ಶಾಸಕ ಈ ತುಕರಾಂ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದಲ್ಲಿ ಏಳು ಸಚಿವ ಸ್ಥಾನಗಳು ಖಾಲಿ ಇದ್ದು, ನನಗೆ ಸಚಿವ ಸ್ಥಾನಮಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. 2019ರ ಲೋಕಸಭಾ ಚುನಾವಣೆಯೊಳಗೆ ಸಂಪುಟ ವಿಸ್ತರಣೆ ಮಾಡುವುದು ಉತ್ತಮ. ಸರಕಾರ ರಚನೆ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ, ಈ ಬಾರಿ ಸಚಿವ ಸ್ಥಾನ ಸಿಗಬಹುದು. ನನ್ನ ಸಾಧನೆಯ ಸಂಪೂರ್ಣ ವಿವರಗಳು ಕೆಪಿಸಿಸಿ ಮತ್ತು ಎಐಸಿಸಿಯ ಮುಖಂಡರ ಬಳಿ ಇದ್ದು, ನನಗೆ ಸಚಿವ ಸ್ಥಾನ ನೀಡುವ ಕುರಿತು ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ