ತುಂಗಭದ್ರೆ ಒಡಲಲ್ಲಿ ಅಕ್ರಮ ಮರಳು ಗಣಿಗಾರಿಕೆ


Team Udayavani, Jun 29, 2018, 4:35 PM IST

dvg-7.jpg

ಕಂಪ್ಲಿ: ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಸಂಪೂರ್ಣ ಬತ್ತಿ ಹೋಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ತುಂಗಭದ್ರೆಯ ಒಡಲಿಗೆ ಕನ್ನ ಹಾಕುವ ಮೂಲಕ ಹಗಲಿರುಳೆನ್ನದೆ ಅಕ್ರಮವಾಗಿ ಮರಳು ಸಾಗಿಸುವ ಕಾಯಕದಲ್ಲಿ ತಲ್ಲೀನರಾಗಿದ್ದಾರೆ.

ಒಂದೆಡೆ ಮರಳು ಸಾಗಾಣಿಕೆದಾರರು ನದಿಯ ಒಡಲು ಬಗೆದಿರುವ ಕಾರಣ ನದಿಯು ತನ್ನ ಸಹಜ ಸೌಂದರ್ಯ ಕಳೆದುಕೊಂಡಿದೆ. ಮತ್ತೂಂದೆಡೆ ಅಂತರ್ಜಲ ಮಟ್ಟ ಕುಸಿಯುವ ಭೀತಿ ಮತ್ತು ನದಿಯಲ್ಲಿನ ಬೃಹತ್‌ ಹೊಂಡಗಳು, ಗುಂಡಿಗಳು ಭವಿಷ್ಯದಲ್ಲಿ ನದಿ ಪಾತ್ರದ ಜನಜಾನುವಾರುಗಳಿಗೆ ಈ ಕಂದಕಗಳು ಕಂಟಕವಾಗಲಿವೆ ಎನ್ನುವ ಅಭಿಪ್ರಾಯಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ.

ಒಂದು ವೇಳೆ ಮಳೆ ಬಂದಲ್ಲಿ, ಇಲ್ಲವೇ ನದಿಗೆ ನೀರು ಬಿಡುಗಡೆ ಮಾಡಿದರೆ, ಮರಳಿಗಾಗಿ ಅಗೆದಿರುವ ದೊಡ್ಡ ದೊಡ್ಡ ಗುಂಡಿಗಳಲ್ಲಿ ನೀರು ನಿಲ್ಲುವುದರಿಂದ ಈಜಲು ಹೋಗುವವರು, ಮೀನುಗಾರರು, ನೀರು ಕುಡಿಯಲು ಹೋಗುವ ಜಾನುವಾರುಗಳ ಪ್ರಾಣಕ್ಕೆ ಕುತ್ತು ಉಂಟಾಗಲಿದೆ. ಅಲ್ಲದೇ ನದಿ ಪಾತ್ರದಲ್ಲಿ ಉತ್ತರಾದಿ ಕ್ರಿಯೆಗಳನ್ನು ನಡೆಸುವ ವೇಳೆ ಅವಘಡಗಳು ಸಂಭವಿಸುವ ಆತಂಕವೂ ಸಾರ್ವಜನಿಕರನ್ನು ಕಾಡುತ್ತಿದೆ.

ಸಮೀಪದ ಅರಳಿಹಳ್ಳಿ ತಾಂಡಾದ ಹತ್ತಿರ ಈಗಾಗಲೇ ಮರಳಿನ ಸಂಗ್ರಹ ಕೇಂದ್ರ ಆರಂಭಿಸಿದ್ದರೂ ನದಿ ಮೇಲ್ಭಾಗದಲ್ಲಿ ಈ ರೀತಿ ಅಕ್ರಮ ಮರಳು ಗಣಿಗಾರಿಕೆ ಮುಂದುವರಿದಿದೆ. ಈ ಕುರಿತು ಕ್ರಮ ತೆಗೆದುಕೊಳ್ಳಬೇಕಾದ ಜಿಲ್ಲಾಡಳಿತ ಮೌನಕ್ಕೆ ಶರಣಾಗಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನದಿಯಲ್ಲಿ ಅಪಾರ ಪ್ರಮಾಣದಲ್ಲಿ ಅಕ್ರಮ ಮರಳು ಸಾಗಾಣಿಕೆದಾರರು ಗುಂಡಿಗಳನ್ನು ಸೃಷ್ಟಿಸಿರುವುದು ಒಂದೆಡೆಯಾದರೆ, ನದಿಯಲ್ಲಿರುವ ಅಲ್ಪ ಸ್ವಲ್ಪ ನೀರಿನಲ್ಲಿ ಕೆಲಸಕ್ಕೆ ಬಾರದ ಗಿಡಗಂಟೆಗಳು ಬೆಳೆದಿದ್ದು ಅವುಗಳಿಂದ ನದಿಯಲ್ಲಿ ನೀರು ಸರಾಗವಾಗಿ ಹರಿಯಲು ತೊಂದರೆಯಾಗಲಿದ್ದು, ಜಿಲ್ಲಾಡಳಿತ ನದಿಯಲ್ಲಿನ ಗಿಡಗಂಟೆ ತೆರವು, ಈಗಾಗಲೇ ನಿರ್ಮಿಸಿರುವ ಮನುಷ್ಯ ನಿರ್ಮಿತ ಗುಂಡಿಗಳನ್ನು ಸಮತಟ್ಟು ಮಾಡಲು ಹಾಗೂ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಬೇಕೆಂದು ಕೋಟೆಯ ಪ್ರಗತಿಪರ ರೈತ ಕಟ್ಟೆ ಅಯ್ಯಪ್ಪ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.