ಎಗ್ಗಿಲ್ಲದೆ ಸಾಗಿದೆ ಮರಳು-ಮರಂ ಸಾಗಣೆ


Team Udayavani, Oct 2, 2020, 7:32 PM IST

ಎಗ್ಗಿಲ್ಲದೆ ಸಾಗಿದೆ ಮರಳು-ಮರಂ ಸಾಗಣೆ

ಕೊಟ್ಟೂರು: ಬಿಕ್ಕಿಮರಡಿ ದುರ್ಗಾಂಬಿಕಾ ದೇವಾಲಯದ ಹಿಂಭಾಗದಿಂದ ಅಕ್ರಮವಾಗಿ ಗ್ರಾವಲ್‌(ಮರಂ) ಸಾಗಣೆ ಮಾಡುತ್ತಿರುವುದು.

ಕೊಟ್ಟೂರು: ಪಟ್ಟಣದ ಕೊಟ್ಟೂರು ಕೆರೆಯಲ್ಲಿ ಪ್ರತಿದಿನ ಹಗಲು ರಾತ್ರಿ ಎನ್ನದೇ ಅಕ್ರಮ ಮರಳು ಹಾಗೂ ಗ್ರಾವಲ್‌ (ಕೆಂಪು ಮಣ್ಣು)(ಮರಂ) ಸಾಗಣೆ ದಂಧೆ ನಡೆಯುತ್ತಿದೆ.

ಪಟ್ಟಣದ ಬಿಕ್ಕಿಮರಡಿ ದುರ್ಗಾಂಬ ದೇವಾಲಯದ ಹಿಂಭಾಗ ಹತ್ತರಿಂದ ಹದಿನೈದು ಟ್ರ್ಯಾಕ್ಟರ್‌ಗಳು ನಂಬರ್‌ ಪ್ಲೇಟ್‌ ಇಲ್ಲದೆ ರಾಜಾರೋಷವಾಗಿ ಪ್ರತಿದಿನ ಮರಳು ಸಾಗಿಸುತ್ತಿವೆ. ಈ ಕೆರೆ ಸಣ್ಣ ನೀರಾವರಿ ಇಲಾಖೆಗೆ ಒಳಪಡುವುದು. ಇದುವರೆಗೂ ಯಾವ ಅಧಿಕಾರಿಯು ಇತ್ತ ಕಡೆ ಗಮನ ಹರಿಸಿಲ್ಲ. ನಂತರ ಇಲ್ಲಿನ ಅಧಿಕಾರಿಗಳು ಸಹ ಈ ಕಡೆ ಹೋಗಲು ಭಯಭೀತರಾಗುತ್ತಾರೆ. ಇಲ್ಲಿನ ರೈತರು ಸಾಕಷ್ಟು ಬಾರಿ ಅಧಿಕಾರಿಗಳಿಗೆ ತಿಳಿಸಿದರೆ ನಮ್ಮಲ್ಲಿ ಸಿಬ್ಬಂದಿ ಕೊರತೆ ಇದೆ ಎನ್ನುತ್ತಾರೆ.

ಮರಳಿನಿಂದ ಕೆರೆ ರಸ್ತೆಗಳು ದೊಡ್ಡ ದೊಡ್ಡ ಕಂದಕಗಳಾಗಿ ಮಾರ್ಪಟ್ಟಿವೆ. ಕೆಲವು ದಿನಗಳ ಹಿಂದೆ ಅಧಿಕಾರಿಗಳಿಗೆ ಮರಳು ಮತ್ತು ಗ್ರಾವಲ್‌ ದಂಧೆ ಬಗ್ಗೆ ತಿಳಿದಾಗ ಸ್ಥಳಕ್ಕೆ ಬಂದು ಗ್ರಾವಲ್‌ ಮತ್ತು ಮರಳು ಅಗೆಯುವರಿಗೆ ಎಚ್ಚರಿಕೆ ನೀಡಿದ್ದರು. ಕೆಲ ದಿನಗಳ ನಂತರ ಮತ್ತೆ ಆರಂಭಗೊಂಡಿದೆ. ಚಿರಬಿ, ಚಪ್ಪರದಹಳ್ಳಿ, ಹ್ಯಾಳಾ, ಮರೂರು, ರಾಂಪುರ ಮಾರ್ಗದಲ್ಲಿನ ಹಳ್ಳ ಹೊಲಗಳಿಂದ ರಾತ್ರಿಯಿಂದ ಬೆಳಗಾಗುವ ತನಕ ಮರಳು ಕಳ್ಳಸಾಗಾಣಿಕೆ ಮಾಡುವ ಅನೇಕ ಮರಳು ಟ್ರ್ಯಾಕ್ಟರ್‌  ಗಳನ್ನು ಸೀಜ್‌ ಮಾಡಿದ್ದರು.ಈಗ ಮತ್ತೆ ಇದು ತಲೆ ಎತ್ತಿದೆ. ನಂಬರ್‌ಪ್ಲೇಟ್‌ ಇಲ್ಲದ ಟ್ರ್ಯಾಕ್ಟರ್‌ಗಳು ಹೆಚ್ಚಾಗಿ ಮರಳು ಸಾಗಾಣಿಕೆ ಮಾಡುತ್ತವೆ. ಆರ್‌ ಟಿಒ ಅಧಿಕಾರಿಗಳು ಕಣ್ಣಿಗೆ ಕಂಡರು ಕಾಣದಂತೆ ವರ್ತಿಸುತ್ತಾರೆ ಎಂದು ಜನ ಆರೋಪಿಸಿದ್ದಾರೆ.

ಪಟ್ಟಣದಿಂದ ಹೊಲಕ್ಕೆ ಮೂರು ಕಿಮೀ ಆಗುವುದು. ಶೇಂಗಾ ಮತ್ತು ಜೋಳದ ಫಸಲನ್ನು ಉಳಿಸಿಕೊಳ್ಳಲು ಒಂದು ಕಡೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ. ಇನ್ನೊಂದೆಡೆ ಟ್ರ್ಯಾಕ್ಟರ್‌ಗಳು ಕೆರೆ ರಸ್ತೆಯಲ್ಲಿ ಮರಂ, ಮರಳು ಸಾಗಿಸಿ ದಾರಿಯನ್ನು ಸಂಪೂರ್ಣ ಹದಗೆಡಿಸಿವೆ. ಸಂಬಂಧಪಟ್ಟ ಅಧಿಕಾರಿಗಳು ಫಸಲು ಸಾಗಿಸಲು ಸರಿಯಾದ ದಾರಿ ಮಾಡಿಕೊಡಿ.  -ನೊಂದ ರೈತರು

ಅಕ್ರಮ ಮರಳು ಮತ್ತು ಗ್ರಾವಲ್‌(ಮರಂ) ಅಗೆಯುವವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುತ್ತೇನೆ. ನಂತರ ಕೆರೆಯ ಸುತ್ತಮುತ್ತಲಿನ ರೈತರು ಬೆಳೆ ಸಾಗಿಸಲು ರಸ್ತೆ ಸರಿಪಡಿಸುವಂತೆ ಸೂಚಿಸಿ, ಬೆಳೆ ನಷ್ಟ ಉಂಟಾಗದಂತೆ ಅನುಕೂಲ ಮಾಡಿಕೊಡುತ್ತೇನೆ.  ಜಿ.ಅನಿಲ್‌ಕುಮಾರ್‌, ತಹಶೀಲ್ದಾರ್‌, ಕೊಟ್ಟೂರು.

 

ರವಿಕುಮಾರ್‌.ಎಂ

 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.