ಎಲ್ಲಿ ಬೇಕಾದಲ್ಲಿ ಸ್ಪರ್ಧೆ ಮಾಡಲು ನನ್ನದು ಟೂರಿಂಗ್ ಟಾಕೀಸ್ ಅಲ್ಲ: ಕುಮಾರಸ್ವಾಮಿ


Team Udayavani, Jan 31, 2023, 5:20 PM IST

ಎಲ್ಲಿ ಬೇಕಾದಲ್ಲಿ ಸ್ಪರ್ಧೆ ಮಾಡಲು ನನ್ನದು ಟೂರಿಂಗ್ ಟಾಕೀಸ್ ಅಲ್ಲ: ಕುಮಾರಸ್ವಾಮಿ

ಬಳ್ಳಾರಿ: 2008ರಲ್ಲಿ ನನ್ನ ದಾರಿ ತಪ್ಪಿಸಿದರು. 2018ರಲ್ಲಿ ಷರತ್ತು ಇಟ್ಟು ಕೊಂಡು ಕಾಂಗ್ರೆಸ್ ಅಧಿಕಾರ ಕೊಟ್ಟಿತ್ತು, ಆದರೆ ಸ್ವತಂತ್ರವಾಗಿ ಅಧಿಕಾರ ಚಲಾವಣೆ ಮಾಡಲು ಬಿಡಲಿಲ್ಲ. ಸಮ್ಮಿಶ್ರ ಸರ್ಕಾರವಿದ್ದರೆ ಬಡತನ ಹೋಗಲಾಡಿಸಲು ಸಾದ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಬಳ್ಳಾರಿಯ ಕುರೆಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ಎರಡು ಪಕ್ಷದ ಜೊತೆಗೆ ಸಮ್ಮಿಶ್ರ ಸರ್ಕಾರ ಮಾಡಿ ಅನುಭವವಿದೆ. ಈಗಿ ಇರುವುದು 2006ರ ಬಿಜೆಪಿಯಲ್ಲ, ರಾಷ್ಟ್ರೀಯ ನಾಯಕರ ಶಕ್ತಿಯಿರುವ ಬಿಜೆಪಿ. 2006ರಲ್ಲಿ‌ ಬಿಜೆಪಿ ಅವರು ತಗ್ಗಿಬಗ್ಗಿ ಇದ್ದರು, ಈಗ ಅವರೂ ಕಾಂಗ್ರೆಸ್ ‌ಮೀರಿ ಹೋಗಿದ್ದಾರೆ ಎಂದರು.

2018ರಲ್ಲಿ ಕಾಂಗ್ರೆಸ್ ಜೊತೆಗೆ ಹೊಗಿದ್ದಕ್ಕೆ ಗುಲಾಮನಾಗಿರುವ ಹಾಗಾಗಿತ್ತು. ಸಿದ್ದರಾಮಯ್ಯ ಅಧಿಕಾರ ಹೋದರೂ,‌ ನಾನು ಸಿಎಂ ಆದರೂ ಮನೆ ಬಿಟ್ಟು ಕೊಡಲಿಲ್ಲ. ಕಳೆದ ಬಾರಿ ಸಮ್ಮಿಶ್ರ ಸರ್ಕಾರ ಮಾಡಿ‌ ಕಾಂಗ್ರೆಸ್ ನವರು ಕುತ್ತಿಗೆ ಕೊಯ್ದರು. ಕಾಂಗ್ರೆಸ್ ಬೆಂಬಲ ಕೊಡದೇ ನಿಖಿಲ್ ಕುಮಾರ ಸ್ವಾಮಿ ಸೋತರು. ತುಮಕೂರಿನಲ್ಲಿ ಅದೇ ಆಗಿತ್ತು ಎಂದು ಕುಮಾರಸ್ವಾಮಿ ಹೇಳಿದರು.

ಮುಖ್ಯಮಂತ್ರಿ ಆಗಲು ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಹೋಗಿದ್ದಾರೆ. ಮೂವತ್ತು ವರ್ಷದಿಂದಲೂ ನಮಗೆ ಮಾತ್ರ ಕುಟುಂಬ ರಾಜಕಾರಣ ಎಂದು ‌ಲೇಬಲ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ವರುಣದಲ್ಲಿ ಭವಿಷ್ಯಕ್ಕಾಗಿ ಹೊರಗೆ ಹೊಗ್ತಿದ್ದಾರೆ. ಖರ್ಗೆ ಮುಖ್ಯಮಂತ್ರಿಯಾಗಿ ಬರಲಾಗಲ್ಲ ಎಂದು ಮಗನನ್ನು ತರುತ್ತಿದ್ದಾರೆ. ಯಡಿಯೂರಪ್ಪ, ಈಶ್ವರಪ್ಪ ಅವರಿಗೂ ಮಗನ ಚಿಂತೆ ಎಂದು ಎಚ್ ಡಿಕೆ ಹೇಳಿದ್ದಾರೆ.

ಇದನ್ನೂ ಓದಿ:ಹೋರಾಟದ ಬಳಿಕವೇ ಮಹದಾಯಿ ಹಾಗೂ ಕಳಸಾ ಬಂಡೂರಿಗೆ ಡಿಪಿಆರ್ ದೊರೆಕಿದೆ: ಸಿಎಂ ಬೊಮ್ಮಾಯಿ

ರಮೇಶ್ ಜಾರಕಿಹೊಳಿ ವಿಚಾರಕ್ಕೆ ಮಾತನಾಡಿ, ಸಿಡಿ ಕತೆ ನಮಗೆ ಬೇಡ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಮರ್ಯಾದೆ ಇಲ್ಲ. ಮರ್ಯಾದಸ್ಥರು ರಮೇಶ್ ಜಾರಕಿಹೊಳಿ ಕತೆ ಓದಲಿಕ್ಕೂ ಅಗುವುದಿಲ್ಲ. ಡಿ.ಕೆ. ಶಿವಕುಮಾರ ಮನೆ ಮೇಲೆ, ಸಿಬಿಐ ಈಡಿ ದಾಳಿ ಮಾಡಿದಾಗ ಸಿಡಿ ಸಿಕ್ಕಿದ್ದರೆ ತನಿಖೆ ಮಾಡಿಸಲಿ. ಅವರದ್ದೇ ಸರ್ಕಾರ ಇದೆಯಲ್ಲ ಎಂದರು.

ಎಲ್ಲಿ ಬೇಕಾದರಲ್ಲಿ ಸ್ಪರ್ಧೆ ಮಾಡಲು ನನ್ನದು ಟೂರಿಂಗ್ ಟಾಕೀಸ್ ಅಲ್ಲ  ಎಂದ ಅವರು, ಹಾಸನದ ಏಳು ಸ್ಥಾನದಲ್ಲಿ ಯಾವುದೇ ಸಮಸ್ಯೆ ಇಲ್ಲ ಫೆ.3ರಂದು ಎಲ್ಲ‌ ಕ್ಲಿಯರ್ ಆಗುತ್ತದೆ ಎಂದರು.

ಟಾಪ್ ನ್ಯೂಸ್

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

MUMBAI WPL

ಫೈನಲ್‌ಗೆ ನೆಗೆದ ಮುಂಬೈ ಇಂಡಿಯನ್ಸ್‌: ಐಸಿ ವೋಂಗ್‌ ಹ್ಯಾಟ್ರಿಕ್‌

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ

ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

siddu-3

ಮೀಸಲಾತಿ ನೀತಿ ಕನ್ನಡಿ ಒಳಗಿನ ಗಂಟು, ರಾಜಕೀಯ ಲಾಭದ ದುರುದ್ದೇಶ: ಸಿದ್ದರಾಮಯ್ಯ

siddaramaiah

ಕ್ಷೇತ್ರ ಇಲ್ಲದಿದ್ದರೆ 25 ಕ್ಷೇತ್ರಗಳಿಂದ ಆಫರ್ ಬರುತ್ತಿತ್ತಾ?: ಸಿದ್ದರಾಮಯ್ಯ

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sfsdf

ಸಿದ್ದರಾಮಯ್ಯ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಲಿ: ಮಾಜಿ ಸಚಿವ ದಿವಾಕರ ಬಾಬು

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

MUMBAI WPL

ಫೈನಲ್‌ಗೆ ನೆಗೆದ ಮುಂಬೈ ಇಂಡಿಯನ್ಸ್‌: ಐಸಿ ವೋಂಗ್‌ ಹ್ಯಾಟ್ರಿಕ್‌

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ

ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.