ʼಕ್ರಾಂತಿʼ ಆಡಿಯೋ ಬಿಡುಗಡೆ ವೇಳೆ ದರ್ಶನ್‌ ಬ್ಯಾನರ್‌ಗೆ ಹಾನಿ, ಚಪ್ಪಲಿ ಎಸೆತ; ಭುಗಿಲೆದ್ದ ಆಕ್ರೋಶ


Team Udayavani, Dec 19, 2022, 11:19 AM IST

ʼಕ್ರಾಂತಿʼ ಆಡಿಯೋ ಬಿಡುಗಡೆ ವೇಳೆ ದರ್ಶನ್‌ ಬ್ಯಾನರ್‌ಗೆ ಹಾನಿ, ಚಪ್ಪಲಿ ಎಸೆತ; ಭುಗಿಲೆದ್ದ ಆಕ್ರೋಶ

ಹೊಸಪೇಟೆ: ದರ್ಶನ್‌ ಅಭಿನಯದ ʼಕ್ರಾಂತಿʼ ಸಿನಿಮಾದ ಹಾಡು ಬಿಡುಗಡೆಯ ವೇಳೆ ಕಿಡಿಗೇಡಿಗಳು ನಟನ ಮೇಲೆ ಚಪ್ಪಲಿ ಎಸೆದಿರುವುದು ಅಭಿಮಾನಿಗಳ ಆಕ್ರೋಶ ಭುಗಿಲೇಳುವಂತೆ ಮಾಡಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ಭಾನುವಾರ (ಡಿಸೆಂಬರ್ 18) ನಡೆದಿದೆ.

ನಟ ದರ್ಶನ್‌ ತೂಗದೀಪ ಅಭಿಯನದ ಬಹುನಿರೀಕ್ಷಿತ ಕ್ರಾಂತಿ ಚಿತ್ರದ “ಬೊಂಬೆ, ಬೊಂಬೆ’ ಆಡಿಯೋ ಬಿಡುಗಡೆ ಸಮಾರಂಭ ನಗರದ ವಾಲ್ಮೀಕಿ ವೃತ್ತದಲ್ಲಿ ಭಾನುವಾರ ರಾತ್ರಿ ನಡೆಯಿತು.

ದರ್ಶನ್‌ ಸೇರಿದಂತೆ ನಟರನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆಗೊಂಡಿದ್ದರು. ಇದೇ ವೇಳೆ ಯಾರೋ ಕಿಡಿಗೇಡಿಗಳು ನಟ ದರ್ಶನ್‌ ಅವರ ಮೇಲೆ ಚಪ್ಪಲಿ ಎಸೆದಿರುವ ಘಟನೆ ನಡೆದಿದೆ.

ಲಘು ಲಾಠಿ ಪ್ರಹಾರ: ನಟ ದರ್ಶನ್‌ ಅಭಿಯನದ ಕ್ರಾಂತಿ ಚಿತ್ರದ ಆಡಿಯೋ ಲಾಂಚ್‌ ಕಾರ್ಯಕ್ರಮದಲ್ಲಿ ಕಲ್ಲು ತೂರಾಟ ನಡೆದಿದ್ದು, ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಘಟನೆ ಹಿನ್ನೆಲೆಯಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಯುವಕರು ದರ್ಶನ್‌ ಬ್ಯಾನರ್‌ ಹರಿದು ಹಾಕಿದ್ದರು. ಈ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಹಾಡು ಬಿಡುಗಡೆಗೊಳಿಸಿ  ಚಿತ್ರ ತಂಡ ಮರಳಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.

ದರ್ಶನ್‌ ಅವರ ಮೇಲಿನ ಚಪ್ಪಲಿ ಎಸೆತ ಘಟನೆ ಅಭಿಮಾನಿಗಳು ರೊಚ್ಚಿಗೇಳುವಂತೆ ಮಾಡಿದೆ. ಯಾರೇ ಆಗಲಿ, ಯಾವುದೇ ಅಭಿಮಾನವಿರಲಿ ಈ ರೀತಿ ಮಾಡಿರುವುದು ಸರಿಯಲ್ಲ ಎಂದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕಾಗಿ ಒಗ್ಗಟ್ಟಾಗಿ ಸೋಶಿಯಲ್‌ ಮೀಡಿಯಾದಲ್ಲಿ ಆಗ್ರಹಿಸುತ್ತಿದ್ದಾರೆ.

ಘಟನೆ ಖಂಡಿಸಿದ ಧನ್ವೀರ್:‌ ನಟ ಧನ್ವೀರ್‌ ಅವರು ಈ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಇನ್ಸ್ಟಾಗ್ರಾಮ್‌ ನಲ್ಲಿ ಸ್ಟೋರಿ ಹಾಕಿಕೊಂಡಿದ್ದಾರೆ. “ನಿನ್ನೆ ಹೊಸಪೇಟೆಯಲ್ಲಿ ನಡೆದ ಘಟನೆ ತುಂಬಾ ನೋವುಂಟು ಮಾಡಿದೆ. ನಿಮ್ಮ ಮೇಲೆ ನಡೆದಿರುವ ಪಿತೂರಿ ಖಂಡನೀಯ. ನಿಮ್ಮ ಸಹಸ್ರ ಅಭಿಮಾನಿಗಳಲ್ಲಿ ಒಬ್ಬನಾಗಿ ಸಾಯೋವರೆಗೂ ನಿಮ್ಮ ಮೇಲಿನ ಅಭಿಮಾನ ದುಪ್ಪಟ್ಟಾಗುತ್ತೆ ಹೊರತು ಕಡಿಮೆಯಾಗುವುದಿಲ್ಲ. ಈ ಘಟನೆಗೆ ಕಾರಣರಾದವರಿಗೆ ಭಗವಂತ ಒಳ್ಳೆಯದೇ ಮಾಡಲಿ. ಕೆಟ್ಟದು ಬಯಸಿದವರಿಗೂ ಒಳ್ಳೆದು ಮಾಡಿ ಎಂದು ಹೇಳಿಕೊಟ್ಟಿದ್ದಿರಾ ಬಾಸ್. ಕರ್ಮ ಎನ್ನುವುದು ಯಾರಿಗೂ ಬಿಟ್ಟಿರುವುದಿಲ್ಲ, ಕರ್ಮ ತಿರುಗುತ್ತೆ. ಚಪ್ಪಲಿ ಎಸೆದ ವ್ಯಕ್ತಿಗೂ, ಅವನ ಮನಸ್ಥಿತಿಗೂ ಮತ್ತು ಪ್ರಚೋದಿಸಿದರವರಿಗೂ ನೆಮ್ಮದಿ ಸಿಗಲಿ. ನಿಮ್ಮ ಸೆಲೆಬ್ರಿಟಿ ಅಭಿಮಾನಿಗಳ ಮುಂದೆ ಈ ಘಟನೆಗಳು ಸಾಸಿವೆ ಕಾಳಿಗೆ ಸಮ. ನಿಮ್ಮ ಮೇಲಿನ ಅಭಿಮಾನದೊಂದಿಗೆ.. ಧನ್ವೀರ್, ನಿಮ್ಮೊಂದಿಗೆ ಸದಾ ನಾವು” ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.