ಬದು ನಿರ್ಮಾಣದಿಂದ ಅಂತರ್ಜಲ ಹೆಚ್ಚಳ
Team Udayavani, May 21, 2020, 5:55 AM IST
ಹಗರಿಬೊಮ್ಮನಹಳ್ಳಿ: ಬದು ನಿರ್ಮಾಣದಿಂದ ಅಂತರ್ಜಲದ ಪ್ರಮಾಣ ಹೆಚ್ಚುವುದರ ಜೊತೆಗೆ ಬೆಳೆ ಇಳುವರಿ ಹೆಚ್ಚುತ್ತದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹಾಲಸಿದ್ದಪ್ಪ ಪೂಜಾರ್ ಹೇಳಿದರು.
ತಾಲೂಕಿನ ಮರಬ್ಬಿಹಾಳು ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಬದು ನಿರ್ಮಾಣ ಮಾಸಾಚರಣೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉದ್ಯೋಗ ಖಾತ್ರಿ ಯೋಜನೆಯನ್ನು ಕೂಲಿ ಕಾರ್ಮಿಕರು, ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಬದು ನಿರ್ಮಾಣದಿಂದ ರೈತರ ಹೊಲಗಳಲ್ಲಿ ಮಣ್ಣಿನ ಸವಕಳಿ ತಡೆಯಬಹುದು. ಅರ್ಜಿ ಸಲ್ಲಿಸುವ ರೈತರ ಹೊಲಗಳಲ್ಲಿ ಬದು ನಿರ್ಮಾಣ ಮತ್ತು ಕೃಷಿ ಹೊಂಡ ನಿರ್ಮಿಸಲಾಗುವುದು. ತಾಲೂಕಿನ ಎಲ್ಲ ಗ್ರಾಪಂಗಳಲ್ಲೂ ಏಕಕಾಲಕ್ಕೆ ಅಭಿಯಾನ ಆರಂಭಿಸಲಾಗಿದೆ. ಬದು ನಿರ್ಮಾಣ ಮಾಡಿಕೊಳ್ಳುವರು ಗ್ರಾಪಂ ಪಿಡಿಒಗಳನ್ನು ಭೇಟಿ ಮಾಡಿ ಸಮರ್ಪಕ ಮಾಹಿತಿ ಪಡೆಯಬೇಕು ಎಂದು ತಿಳಿಸಿದರು.
ಮರಬ್ಬಿಹಾಳು ಗ್ರಾಪಂ ಪಿಡಿಒ ರತ್ನಮ್ಮ ಮಾತನಾಡಿ, ಬದು ನಿರ್ಮಾಣ ಮಾಡಿಕೊಳ್ಳುವುದರಿಂದ ಹೊಲದಲ್ಲಿರುವ ಬೋರ್ವೆಲ್ ನೀರು ಪುನಶ್ಚೇತಗೊಳ್ಳುತ್ತದೆ. ಪಹಣಿ ಹೊಂದಿರುವ ರೈತರು ಬದು ನಿರ್ಮಾಣ ಮಾಡಿಕೊಳ್ಳಲು ಆಸಕ್ತಿ ತೋರಬೇಕು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಬದು ನಿರ್ಮಾಣದ ವೇಳೆ ವ್ಯಕ್ತಿ ವ್ಯಕ್ತಿಗಳ ನಡುವೆ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು. ಮುಖಂಡ ಶಾಂತಪ್ಪ, ಉದ್ಯೋಗ ಖಾತರಿ ಮೇಟಿಗಳಾದ ಹುಲುಗಪ್ಪ, ಗಂಗಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ