ಯುವಕರಲ್ಲಿ ಸಾಧನೆಯ ಛಲ ಹೆಚ್ಚಲಿ: ಚನ್ನಣ್ಣನವರ್‌


Team Udayavani, Sep 4, 2018, 4:01 PM IST

bell.jpg

ಸಿರುಗುಪ್ಪ: ಬಳ್ಳಾರಿ ಜಿಲ್ಲೆಯ ವಿಜಯನಗರ ಸಾಮ್ರಾಜ್ಯದ ಗತ ವೈಭವ ಮರಳಿ ಬರಬೇಕು. ಇಲ್ಲಿ ಸೇರಿದ ಯುವಕರಲ್ಲಿ ನನ್ನಂತೆ ಸಾಧನೆ ಮಾಡಬೇಕೆನ್ನುವ ಛಲವಿರುವ, ಆಶಯವಿರುವ ನೂರಾರು ಜನರು ದೊರೆಯುತ್ತಾರೆ. ಪ್ರತಿ ಗ್ರಾಮ, ಮನೆಗಳಲ್ಲಿಯೂ ರವಿ ಚನ್ನಣ್ಣನವರ್‌ ನನ್ನಂತಹವರು ಜನಿಸಬೇಕು. ಎಲ್ಲರೂ ಸಾಧಕರಾಗಬೇಕು ಎಂದು ಬೆಂಗಳೂರಿನ ಪಶ್ಚಿಮ ವಲಯದ ಉಪಪೊಲೀಸ್‌ ಆಯುಕ್ತ ರವಿ ಡಿ. ಚನ್ನಣ್ಣನವರ್‌ ಅಭಿಪ್ರಾಯಪಟ್ಟರು.

ನಗರದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಸವ ಬಳಗ ಟ್ರಸ್ಟ್‌ ವತಿಯಿಂದ ನೀಡಲಾದ 2018-19ನೇ ಸಾಲಿನ ರಾಜ್ಯಮಟ್ಟದ ಬಸವಭೂಷಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಮೇಲೆ ರಾಮಕೃಷ್ಣ ಮಠದ ನಿರ್ಭಯಾನಂದ ಸರಸ್ವತಿ ಗುರುಗಳ ಪ್ರಭಾವವಿದ್ದಂತೆ ನೀವು ಕೂಡ ಗುರುವಿನ ಗುಲಾಮನಾಗಿ ಜೀವನದಲ್ಲಿ ಉತ್ತಮ ಸಾಧನೆ ತೋರಿ. ಭಗತ್‌ಸಿಂಗ್‌, ಚಂದ್ರಶೇಖರ್‌ ಆಜಾದ್‌ನವರ ಆಶಯಗಳಂತೆ ಯುವಕರು ದೇಶವನ್ನು ಕಟ್ಟೋಣ ಎನ್ನುವ ಆಶಯ ಬೆಳೆಸಿಕೊಳ್ಳಬೇಕು. ಯಾರಿಗೆ ಧೈರ್ಯವಿದೆ, ಓದಬೇಕೆನ್ನುವ ಛಲವಿದೆ, ಎಷ್ಟೇ ಸಂಖ್ಯೆಯಲ್ಲಿ ಇದ್ದರೂ ಬಂದು ಬಿಡಿ, ನಮ್ಮ ಸಮಾನ ಮನಸ್ಕರಿಂದ ಶಿಕ್ಷಣಕ್ಕೆ ನೆರವು ನೀಡಲಾಗುವುದು. ಮನುಷ್ಯನನ್ನು ಸೋಲಿಸುವ ವಸ್ತು ಈ ಜಗತ್ತಿನಲ್ಲಿಯೇ ಹುಟ್ಟಿಲ್ಲ. ಭಗವಂತನ ಅದ್ಭುತ ಸೃಷ್ಟಿಯೇ ಮನುಷ್ಯನಾಗಿದ್ದು, ಉಪನಿಷತ್ತುಗಳಲ್ಲಿ ತಿಳಿಸಿದಂತೆ ಭೂಮಿಯನ್ನು ಆಳುವ ಸಾಮರ್ಥ್ಯವನ್ನು ಪ್ರತಿಯೊಂದು ಮಗುವಿಗೂ ಭಗವಂತ ನೀಡಿರುತ್ತಾನೆ. ಆದರೆ ಆ ಸಾಮರ್ಥ್ಯವನ್ನು ಬಳಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದೇವೆ ಎಂದರು.

ಪ್ರಶಸ್ತಿ ಎನ್ನುವುದು ಲಕ್ಷ್ಮಣರೇಖೆ ಇದ್ದಂತೆ. ಬಸವಣ್ಣನವರ ಹೆಸರಿನಲ್ಲಿರುವ ಪ್ರಶಸ್ತಿಯನ್ನು ಪಡೆದ ನಂತರ ನನ್ನ ನಿರೀಕ್ಷೆಗಳು, ಜವಾಬ್ದಾರಿಗಳು ಹೆಚ್ಚಾಗಿದ್ದು, ಬಸವಾದಿ ಶರಣರ ಆಶಯದಂತೆ ವಿದ್ಯಾರ್ಥಿಗಳಿಗೆ, ದೀನ ದಲಿತರಿಗೆ ನೆರವಾಗುತ್ತೇನೆ. ವಿದ್ಯಾರ್ಥಿಗಳು ಐಎಎಸ್‌, ಐಪಿಎಸ್‌ ಅಧಿಕಾರಿಗಳಾಗಬೇಕೆನ್ನುವ ಚಿಂತನೆ ಹೊಂದಿ, ಇಲ್ಲವೆ ಲಾಭದಾಯಕ ಕೃಷಿ ಬದುಕನ್ನು ಕಟ್ಟಿಕೊಳ್ಳಿ ಎಂದರು.

ತಾಲೂಕಿನ ನಂಟನ್ನು ಭಾಷಣದಲ್ಲಿ ನೆನಪಿಸಿಕೊಂಡ ಅವರು, ನನ್ನ ವಿದ್ಯಾರ್ಥಿ ಜೀವನದ ಕಷ್ಟಕಾಲದಲ್ಲಿ ಕರ್ಚಿಗನೂರಿನ ಗೆಳೆಯ ಎರ್ರೆಪ್ಪಚಾನಾಳ್‌ ಕಳುಹಿಸುತ್ತಿದ್ದ ಇಲ್ಲಿಯ ಅಕ್ಕಿಯನ್ನು ವರ್ಷವಿಡೀ ಊಟ ಮಾಡಿದ್ದೇನೆ. ಇಲ್ಲಿ ಹರಿಯುವ ಹಗರಿಯಲ್ಲಿ ಈಜಾಡಿದ್ದೇನೆ. ಕರ್ಚಿಗನೂರು ಹಾಲ್ವಿ ಮಠದಲ್ಲಿ ಪುರಾಣ ಕೇಳಿದ್ದೇನೆ. ದಾಸೋಹದಲ್ಲಿ ಪ್ರಸಾದ ಸ್ವೀಕರಿಸಿದ್ದೇನೆ. ಇಲ್ಲಿನ ಅನ್ನದ ಋಣ ನನ್ನ ಮೇಲಿದೆ ಎಂದು ತಮ್ಮ ಹಿಂದಿನ ದಿನಗಳನ್ನು ಮೆಲುಕು ಹಾಕಿದರು.

ಹಾಲ್ವಿಯ ಚರಣಗಿರಿ ಸಂಸ್ಥಾನ ಮಠದ ಅಭಿನವ ಮಹಾಂತಸ್ವಾಮಿಗಳು ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಪ್ರತಿಯೊಂದು ವಿಷಯವನ್ನು ತಿಳಿದುಕೊಳ್ಳಬೇಕು, ಯಾರು ಹೆಚ್ಚು ಪುಸ್ತಕವನ್ನು ಅಧ್ಯಯನ ನಡೆಸುತ್ತಾರೋ ಅವರು
ಪ್ರತಿಭಾವಂತರಾಗುತ್ತಾರೆ ಎಂದು ತಿಳಿಸಿದರು. 

ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ ಹಾಗೂ ಬಸವ ಬಳಗ ಟ್ರಸ್ಟ್‌ನ ಗೌರವಾಧ್ಯಕ್ಷ ಎನ್‌.ಜಿ. ಲಿಂಗಣ್ಣ, ತಾಲೂಕು ಅಧ್ಯಕ್ಷ ಡಾ| ಎನ್‌.ಎಂ. ಶಿವಪ್ರಕಾಶ್‌, ಟ್ರಸ್ಟಿನ ನಾಗನಗೌಡ, ವಿರುಪಾಕ್ಷಿಗೌಡ ಸೇರಿದಂತೆ ಅಕ್ಕನ ಬಳಗದ ಸದಸ್ಯರು ಇದ್ದರು. 

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.