ಮಾರುಕಟ್ಟೆಯಲ್ಲಿ ನೇರಳೆ ಹಣ್ಣಿಗೆ ಹೆಚ್ಚಿದ ಬೇಡಿಕೆ

ಮೂಲವ್ಯಾಧಿ, ಪಿತ್ತಜನಕಾಂಗ ತೊಂದರೆಗಳಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

Team Udayavani, Jun 13, 2022, 6:18 PM IST

ಮಾರುಕಟ್ಟೆಯಲ್ಲಿ ನೇರಳೆ ಹಣ್ಣಿಗೆ ಹೆಚ್ಚಿದ ಬೇಡಿಕೆ

ಸಿರುಗುಪ್ಪ: ಆಯುರ್ವೇದಿಕ ಅಂಶಗಳುಳ್ಳ ನೇರಳೆ ಹಣ್ಣು ಸಾಕಷ್ಟು ಮಾರುಕಟ್ಟೆಗೆ ಬಂದಿದ್ದರೂ ಬೆಲೆ ಮಾತ್ರ ಕಳೆದ ವರ್ಷಕ್ಕಿಂತ ಕೊಂಚ ದುಬಾರಿಯಾಗಿದೆ. ಹಣ್ಣು ತಿನ್ನುವವರ ಬಾಯಲ್ಲಿ ನೀರೂರಿಸುತ್ತಿದ್ದು, ಬೆಲೆಯಲ್ಲಿ ಕೊಂಚ ಹೆಚ್ಚಾಗಿದ್ದರೂ ಈ ಹಣ್ಣನ್ನು ಗ್ರಾಹಕರು ಕೊಂಡು ತಿನ್ನುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯ ತಾವರಗಿ, ಬಳ್ಳಾರಿ ತಾಲೂಕಿನ ಮೋಕಾ ಸುತ್ತಮುತ್ತಲಿನ ಹಳ್ಳಿಗಳು ಮತ್ತು ಸಿಮಾಂಧ್ರಪ್ರದೇಶದ ಆದೋನಿ ತಾಲೂಕಿನ ಸುತ್ತಮುತ್ತಲಿನ ಹಳ್ಳಿಗಳಿಂದ ನೇರಳೆ ಹಣ್ಣು ಮಾರಾಟ ಮಾಡಲು ನಗರಕ್ಕೆ ಬರುತ್ತಿದ್ದು, ಈ ವ್ಯಾಪಾರಿಗಳು ರೈತರ ಹೊಲದಲ್ಲಿ ಬೆಳೆದ ನೇರಳೆ ಹಣ್ಣನ್ನು ಗುತ್ತಿಗೆದಾರರಿಂದ ಖರೀದಿಸಿ ತರುತ್ತಿದ್ದಾರೆ. ನಿತ್ಯದ ವ್ಯಾಪಾರದಲ್ಲಿ ಲಾಭದೊಂದಿಗೆ ಹಣ್ಣುಗಳನ್ನು ಮಾರಾಟ ಮಾಡುತ್ತಿರುವುದರಿಂದ ದರ ಹೆಚ್ಚಾಗಲು ಕಾರಣವೆಂದು ಹೇಳಲಾಗುತ್ತಿದೆ.

ತಾಲೂಕಿನಲ್ಲಿ ನೇರಳೆ ಹಣ್ಣು ಬೆಳೆಯುವ ರೈತರೆ ಇಲ್ಲ. ಆದ್ದರಿಂದ ಬೇರೆ ಕಡೆಯಿಂದ ಬಂದ ವ್ಯಾಪಾರಿಗಳು ಭರ್ಜರಿ ಲಾಭದೊಂದಿಗೆ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಸಕ್ಕರೆ ಖಾಯಿಲೆ ಇರುವವರು ಈ ಹಣ್ಣನ್ನು ತಿನ್ನುವುದರಿಂದ ಖಾಯಿಲೆ ಕಡಿಮೆಯಾಗುತ್ತದೆ ಎನ್ನುವ ಕಾರಣದಿಂದ ಖರೀದಿದಾರರ ಸಂಖ್ಯೆ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಾಗಿದ್ದರೂ ಕೊಳ್ಳುವ ಗ್ರಾಹಕರಿಗೆ ಕೊರತೆ ಇಲ್ಲ.

ಮಕ್ಕಳಿಗೆ ಇಷ್ಟವಾಗುವ ಈ ಹಣ್ಣನ್ನು ತೊಳೆದು ಉಪ್ಪು ಬೆರೆಸಿ ತಿಂದರೆ ಅದರ ಸ್ವಾದವೇ ಬೇರೆಯಾಗಿರುತ್ತದೆ. ಕಳೆದ ಬಾರಿ ನೇರಳೆ ಹಣ್ಣಿನ ಬೆಲೆ ಒಂದು ಕೆ.ಜಿ.ಗೆ ರೂ.120 ರಿಂದ 150 ಇತ್ತು ಆದರೆ ಈ ವರ್ಷವೂ ಕೆಜಿಗೆ ರೂ.150ಕ್ಕೆ ಮಾರಾಟವಾಗುತ್ತಿದ್ದರೂ ತಿನ್ನುವವರಿಗೆ ಕೊರತೆಯಿಲ್ಲ. ಇದರಿಂದಾಗಿ ವ್ಯಾಪಾರಿಗಳಿಗೆ ಲಾಭದ ಸುಗ್ಗಿಯಾಗಿದೆ. ನೇರಳೆ ಹಣ್ಣಿನ ಬೀಜದ ಪುಡಿ ಸೇವಿಸುವುದರಿಂದ ಅತಿಯಾದ ಮೂತ್ರ ತೊಂದರೆ ನಿವಾರಣೆಯಾಗುತ್ತದೆ.

ಮೂಲವ್ಯಾಧಿ, ಪಿತ್ತಜನಕಾಂಗ ತೊಂದರೆಗಳಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಹಣ್ಣಿನಲ್ಲಿ ನೈಸರ್ಗಿಕ ಆಮ್ಲಿಯ ಪದಾರ್ಥಗಳಿದ್ದು, ದೇಹದಲ್ಲಿ ಜೀರ್ಣಕ್ರಿಯೆಗೆ ಅನುಕೂಲವಾಗಲಿದೆ. ಪಿತ್ತ ಜನಕಾಂಗ ಕಾರ್ಯವನ್ನು ಉತ್ತೇಜಿಸುವಲ್ಲಿಯೂ ಸಹಕಾರಿಯಾಗಿದೆ ಎಂಬುದು ವೈದ್ಯರ ಸಲಹೆಯಾಗಿದೆ.

ನೇರಳೆ ಹಣ್ಣಿನಲ್ಲಿ ಐರನ್‌, ಕ್ಯಾಲ್ಸಿಯಂ, ಪೊಟ್ಯಾಷಿಯಂ ಇರುತ್ತದೆ. ಅಜೀರ್ಣ, ಚಂಚಲತೆ, ಕಿಡ್ನಿ ಸಮಸ್ಯೆ ನಿವಾರಣೆಗೂ ನೇರಳೆ ಹಣ್ಣು ದಿವ್ಯ ಔಷಧಿಯಾಗಿದೆ. ಮಧುಮೇಹ ಕಾಯಿಲೆ ಇರುವವರು ಈ ಹಣ್ಣು ಸೇವನೆ ಮಾಡಿದರೆ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗುತ್ತದೆ. ಹಣ್ಣು ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ದೇಹದ ಉಷ್ಣಾಂಶ ಕಡಿಮೆಯಾಗುವುದರ ಜೊತೆಗೆ ಕೆಲವು ಅಪಾಯಕಾರಿಯಾದ ಕ್ಯಾನ್ಸರ್‌ ರೋಗ ಕಡಿಮೆ ಮಾಡುವ ಅಂಶ ಹೊಂದಿದೆ.

ನೇರಳೆ ಹಣ್ಣು ನಮಗೆ ತುಂಬಾ ಇಷ್ಟ. ಪ್ರತಿಬಾರಿ ಸೀಜನ್‌ನಲ್ಲಿ ತಪ್ಪದೇ ನೇರಳೆ ಹಣ್ಣನ್ನು ಖರೀದಿಸಿ ತಿನ್ನುತ್ತೇವೆ. ಕೆಲವು ಖಾಯಿಲೆಗಳಿಗೆ ಈ ಹಣ್ಣು ರಾಮಬಾಣವಾಗಿದೆ. ವರ್ಷಕ್ಕೆ ಒಂದೇ ಬಾರಿ ಸಿಗುವ ನೇರಳೆ ಹಣ್ಣು ಮತ್ತು ಇದರ ಬೀಜ, ತೊಗಟೆ,ಪುಡಿಯಿಂದ ತಯಾರಿಸಿದ ಜ್ಯೂಸ್‌
ಕುಡಿಯುತ್ತೇವೆ.
ಪಾರ್ವತಿ, ಗ್ರಾಹಕಿ

ನಮ್ಮಲ್ಲಿ ನೇರಳೆ ಹಣ್ಣನ್ನು ಬೆಳೆಯುತ್ತಿಲ್ಲ. ಇದರಿಂದಾಗಿ ನೆರೆ ಜಿಲ್ಲೆ, ನೆರೆ ರಾಜ್ಯಗಳಿಂದ ಖರೀದಿಸಿ ತಂದು ಮಾರಾಟ ಮಾಡುತ್ತೇವೆ. ಹಣ್ಣಿನ ಬೆಲೆಯಲ್ಲಿ ಕಳೆದ ವರ್ಷದಿಂದ ಯಾವುದೇ ಬದಲಾವಣೆಯಾಗಿಲ್ಲ. ರೂ.150ಕ್ಕೆ ಒಂದು ಕೆಜಿ ಮಾರಾಟ ಮಾಡುತ್ತಿದ್ದೇವೆ.
ನೇರಳೆ ಹಣ್ಣು ಮಾರಾಟಗಾರರು

ಆರ್‌. ಬಸವರೆಡ್ಡಿ ಕರೂರ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.