ಅಡ್ಡಾದಿಡ್ಢಿ ರಸ್ತೆ ಕಾಮಗಾರಿ ಸರಿಪಡಿಸಲು ಒತ್ತಾಯ

ಇಲಾಖೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮನವಿ

Team Udayavani, Apr 24, 2022, 3:54 PM IST

manavi

ಬಳ್ಳಾರಿ: ಹವಂಬಾವಿ ಬಳಿಯ ಎಚ್‌ಎಲ್‌ಸಿ ಉಪಕಾಲುವೆ ದಡದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿ ಅಡ್ಡಾದಿಡ್ಡಿಯಾಗಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಕಾಮಗಾರಿ ಅನುದಾನವನ್ನು ನಿಲ್ಲಿಸುವಂತೆ ಆಗ್ರಹಿಸಿ ಯುವಸೇನಾ ಸೋಷಿಯಲ್‌ ಆಕ್ಷನ್‌ ಕ್ಲಬ್‌ ವತಿಯಿಂದ ಸಹಾಯಕ ಆಯುಕ್ತ ಆಕಾಶ್‌ ಶಂಕರ್‌ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಬಳ್ಳಾರಿ ನಗರದ ಹವಂಬಾವಿ ಬಳಿಯ ಉಪ ಕಾಲುವೆ ಎರಡೂ ದಡದ ಮೇಲೆ ನಿರ್ಮಿಸುತ್ತಿರುವ ರಸ್ತೆಯು ಜಲ ಸಂಪನ್ಮೂಲ ನೀರಾವರಿ ಇಲಾಖೆ ಸಂಬಂಧಪಟ್ಟ ಸೇವಾ ರಸ್ತೆಯಾಗಿದೆ. ಈ ರಸ್ತೆಯ ಎರಡು ಬದಿಗಳಲ್ಲಿ ಸುಮಾರು 50 ಅಡಿ ಸೇವಾ ರಸ್ತೆ, ಆದರೆ ಲೋಕೋಪಯೋಗಿ ಇಲಾಖೆಯವರು ಒಂದು ಕಡೆ ರಸ್ತೆ ಮತ್ತು ಒಳಚರಂಡಿ ಗುಂಡಿಗಳನ್ನು ಹಾಕಿದ್ದಾರೆ.

ಮತ್ತೊಂದು ಕಡೆ ಗುಂಡಿಗಳನ್ನು ಹಾಕಿ ರಸ್ತೆಯನ್ನು ಹಾಕುತ್ತಿದ್ದಾರೆ. ಈ ರಸ್ತೆ ಹಾಕುವುದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಆದರೆ, ಕೇವಲ ರಸ್ತೆ ಹಾಕುವ ಮುನ್ನ ರಸ್ತೆ ಒತ್ತುವರಿ ಮಾಡಿಕೊಂಡಿರುವ ಮನೆಗಳನ್ನು ತೆರವುಗೊಳಿಸಬೇಕು. ಈ ಕೆಲಸ ತಾವಾಗಿರಬಹುದು, ತುಂಗಾಭದ್ರ ಮಂಡಳಿ (ಟಿ.ಬಿ. ಡ್ಯಾಂ) ಅಧಿಕಾರಿಗಳಾಗಿರಬಹುದು, ಜಲಸಂಪನ್ಮೂಲ ನೀರಾವರಿ ಇಲಾಖೆ ಅಧಿಕಾರಿಗಳಾಗಿರಬಹುದು. ಒಂದು ರಸ್ತೆ ಸುಂದರವಾಗಿ ಕಾಣಬೇಕಾದರೆ ಅಡ್ಡಾದಿಡ್ಡಿಯಾಗಿ ಇದ್ದ ಮನೆಗಳನ್ನು (ಅನಧಿಕೃತವಾಗಿ ಸರ್ಕಾರಿ ಸೇವಾ ರಸ್ತೆಯಲ್ಲಿ ಹಾಕಿರುವ ಮನೆಗಳು) ತೆರವುಗೊಳಿಸಿ, ರಸ್ತೆ ಹಾಕಿದರೆ ಸುಂದರವಾಗಿ ಕಾಣುತ್ತದೆ ಎಂದು ಕ್ಲಬ್‌ ಮನವಿಯಲ್ಲಿ ತಿಳಿಸಿದೆ.

ಈ ವಿಷಯದಲ್ಲಿ ಉಸ್ತುವಾರಿ ಸಚಿವರು, ನಗರ ಶಾಸಕರು ಮತ್ತು ಆಯಾ ವಾರ್ಡ್‌ಗಳ ಸಂಬಂಧಪಟ್ಟ ಪಾಲಿಕೆ ಸದಸ್ಯರು ತಿಳಿದು ತಿಳಿಯದಂತೆ ಮೌನವಹಿಸಿದ್ದಾರೆ. ಎಲ್ಲ ಮನೆಗಳು ಅಕ್ರಮ, ಅನ ಧಿಕೃತವಾಗಿ ನಿರ್ಮಿಸಿಕೊಂಡ ಮನೆಗಳಾಗಿವೆ. ಅಂಥ ಮನೆಗಳನ್ನು ತೆರವುಗೊಳಿಸಿ, ರಸ್ತೆಯನ್ನು ಸುಸಜ್ಜಿತ, ಸುಂದರವಾಗಿ ನಿರ್ಮಿಸಬೇಕು. ಸಂಬಂಧಪಟ್ಟ ಇಂಜಿನಿಯರ್‌, ಗುತ್ತಿಗೆದಾರರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ವೇಳೆ ಕ್ಲಬ್‌ನ ಅಧ್ಯಕ್ಷ ಮೇಕಲ ಈಶ್ವರರೆಡ್ಡಿ, ಎಸ್‌. ಕೃಷ್ಣ, ಜಿ.ಎಂ.ಭಾಷ, ಅಲುವೇಲು ಸುರೇಶ್‌, ಸಲಾವುದ್ದೀನ್‌, ಜಗನ್ನಾಥ್‌, ಪಿ.ನಾರಾಯಣ, ಶಿವಾನಂದ, ಕೆ.ವೆಂಕಟೇಶ್‌, ತೇಜುಪಾಟೀಲ್‌, ಅಭಿಷೇಕ್‌ ಇತರರಿದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.