ಶ್ರೀ ರಾಮುಲು ಸಿರುಗುಪ್ಪದಲ್ಲಿ ನಿಲ್ಲುತ್ತಾರೆ ಅನ್ನೋದು ಸುಳ್ಳು : ಸುರೇಶ್ ಬಾಬು

ಸಿದ್ದರಾಮಯ್ಯ ಸರಕಾರ ಇದ್ದಾಗ ಏನು ನಡೆದಿದೆ ಜನತೆ ಗೊತ್ತು

Team Udayavani, Jan 5, 2023, 6:57 PM IST

1-ffdfsdf

ಕುರುಗೋಡು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರೋಪ ಮಾಡಲು ಬೇರೆ ಕಾರಣಗಳು ಇಲ್ಲದೆ ಇರುವುದರಿಂದ ರಾಜ್ಯದ ಜನತೆಯನ್ನು ದಾರಿ ತಪ್ಪಿಸಿ ಮುಂದೆ ಅಧಿಕಾರ ಪಡಿಯಲು ಪ್ರತಿ ಕಾರ್ಯಕ್ರಮದಲ್ಲಿ ಬಿಜೆಪಿ 40%ಸರಕಾರ ಎಂದು ಆರೋಪಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಟಿ. ಎಚ್. ಸುರೇಶ್ ಬಾಬು ಹೇಳಿದರು.

ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸದ್ಯ ಅವರಿಗೆ ಆರೋಪ ಮಾಡುವುದಕ್ಕೆ ಬೇರೆ ದಾರಿ ಇಲ್ಲ ಆದ್ದರಿಂದ ಸರಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಅವರ ಒಂದು ಆರೋಪ ಸತ್ಯಕ್ಕೆ ದೂರವಾದ ಮಾತು. ಹಿಂದೆ ಕಾಂಗ್ರೆಸ್, ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಏನು ನಡೆದಿದೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಟಾಂಗ್ ನೀಡಿದರು.

ಬೇರೆ ಪಕ್ಷ ಅನ್ನೋದು ಬಿಟ್ಟು ನನ್ನ ಅವಧಿಯಲ್ಲಿ ಏನು ಅಭಿವೃದ್ಧಿ ಕಾರ್ಯಗಳು ನಡೆದಿವೆ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರ ನೀಡಿದ ಯೋಜನೆಗಳನ್ನು ಮುಂದಿಟ್ಟು ಕೊಂಡು ಜನರ ಮುಂದೆ ಹೋಗಿ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತೇನೆ. ಅಲ್ಲದೆ ಕಂಪ್ಲಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಪರ ಜನರು ವಾಲಿದ್ದಾರೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಅದರಲ್ಲಿ ಯಾವುದೇ ಅನುಮಾನ ವಿಲ್ಲ ಎಂದರು.

ರಾಜಕೀಯ ಬಂದಾಗ ಕೆಲ ಕಾರ್ಯಕರ್ತರಲ್ಲಿ ಅಸಮಾಧಾನ ಆಗೋದು ಸಾಮಾನ್ಯ ಆದ್ದರಿಂದ ಪಕ್ಷದಿಂದ ಹೊರಗಡೆ ಹೋಗುತ್ತಾರೆ. ಬಿಜೆಪಿ ಪಕ್ಷದಿಂದ ಕೆಲವ್ರು ಹೋದ್ರೆ ಕಾಂಗ್ರೆಸ್ ನವರು ಕೂಡ ನಮ್ಮ ಪಕ್ಷಕ್ಕೆ ಬಂದಿದ್ದಾರೆ ಇವೆಲ್ಲ ಸಾಮನ್ಯ. ರಾಜ್ಯದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳಲ್ಲಿ ಯಾವುದೇ ಫೈಟ್ ಇರಲ್ಲ. ನಮ್ಮ ಪಕ್ಷ ಸಿಸ್ಟಮೇಟಿಕ್ ಪಕ್ಷ ಆದ್ದರಿಂದ ಒಬ್ಬರಿಗೆ ಆದ್ಯತೆ ಕೊಡುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ನಡುವೆ ಫೈಟ್ ಜಾಸ್ತಿ ಅದರಲ್ಲಿ ಸಿಸ್ಟಮೇಟಿಕ್ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ದ ವ್ಯಂಗ್ಯವಾಡಿದರು.

ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟಿರುವುದರಿಂದ ಬಿಜೆಪಿ ಪಕ್ಷಕ್ಕೆ ಲಾಭ ಮತ್ತು ನಷ್ಟ ಎರಡು ಇಲ್ಲ, ಬಿಜೆಪಿ ಪಕ್ಷ ತನ್ನದೇ ಅದ ಆಶಯಗಳಂತೆ ಮುನ್ನಡೆಯಲಿದೆ. ಬಿಜೆಪಿ ಪಕ್ಷದಲ್ಲಿ ಏನು ಆಗಬೇಕು ಅದು ಆಗುತ್ತದೆ ಎಂದರು.

ಸಚಿವ ಶ್ರೀರಾಮುಲು ಆಗಲಿ ಅಥವಾ ನಾವು ಆಗಲಿ ಇನ್ನೂ ಬಿಜೆಪಿ ಪಕ್ಷದವರು ಯಾರೇ ಆಗಲಿ ಇಂತಹ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಲಾಗುವುದಿಲ್ಲ ಹೈಕಮಾಂಡ್ ಏನು ಸೂಚನೆ ನೀಡುತ್ತೋ ಅದರಂತೆ ಕೆಲಸ ಮಾಡಲಾಗುವುದು. ಶ್ರೀ ರಾಮುಲು ಅವರು ಸಿರುಗುಪ್ಪದಲ್ಲಿ ನಿಲ್ಲುತ್ತಾರೆ, ಇನ್ನೊಂದು ಕ್ಷೇತ್ರದಲ್ಲಿ ನಿಲ್ಲುತ್ತಾರೆ ಅನ್ನೋದು ಸುಳ್ಳು ಇನ್ನೂ ಯಾವುದೇ ತೀರ್ಮಾನ ಆಗಿಲ್ಲ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.